ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರ ಎರಡೂ ಬಗೆಯ ಆಹಾರಗಳನ್ನು ವಿತರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತ ವಕೀಲರ ಒಕ್ಕೂಟದ ಕಾರ್ಯದರ್ಶಿ ಚಂದನ್ ಒತ್ತಾಯಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ ಎನ್ನುವುದು ಸಂವಿಧಾನಕ್ಕೆ ವಿರದ್ಧವಾಗಿದ್ದು, ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಅವರು ಮಾಂಸಾಹಾರವು ತಂಬಾಕು, ಮಧ್ಯದಂತೆಯೇ ದುಶ್ಚಟಗಳು ಎಂದು ಪರಿಬಿಂಭಿಸುವ ಪ್ರಯತ್ನ ನಡೆಸಿದ್ದು, ಮಾಂಸಾಹಾರ ನಿಕೃಷ್ಠವಲ್ಲ ಎಂದು ಪ್ರತಿರೋಧ ಒಡ್ಡುವ ಅವಶ್ಯಕತೆಯಿದೆ ಎಂದರು.
ಎಲ್ಲರ ಆಹಾರ ಸಂಸ್ಕೃತಿಯನ್ನು ಸಮಾನವಾಗಿ ಗೌರವಿಸಬೇಕು. ಆಹಾರ ಸಮಾನತೆ ಎಲ್ಲರೂ ಮನಗಾಣಬೇಕು. ಜಿಲ್ಲಾಡಳಿತ ಮಾಂಸಾಹಾರದ ಆಯೋಜನೆ ಮಾಡಬೇಕು. ಇಲ್ಲವಾದಲ್ಲಿ ಪ್ರಗತಿಪರ ಸಂಘಟನೆಗಳು ಸಂಘಟಿತವಾಗಿ ಮಾಂಸಾಹಾರ ಒದಗಿಸುವ ಕಾರ್ಯಕ್ಕೆ ಅಖಿಲ ಭಾರತ ವಕೀಲರ ಒಕ್ಕೂಟ ಕೈಜೋಡಿಸಲಿದೆ ಎಂಬ ಸಂದೇಶ ರವಾನಿಸಿದರು.
ಅಧ್ಯಕ್ಷ ವಕೀಲ ಬಿ.ಟಿ.ವಿಶ್ವನಾಥ್ ಮಾತನಾಡಿ, ಸಸ್ಯಹಾರ ಶ್ರೇಷ್ಟ, ಮಾಂಸಾಹಾರ ನಿಕೃಷ್ಠ ಎಂಬ ಸಣ್ಣನೆಯ ಪ್ರವಾಹ ಸೃಷ್ಠಿಯಾಗುತ್ತಿದೆ. ಕೋಮುವಾದ ದಳ್ಳೂರಿಯ ನಡುವೆ ಆಹಾರ ಕುರಿತಂತೆ ಬೀದಿ ದಾಳಿಗಳು ನಡೆಯುತ್ತಿವೆ. ಎಲ್ಲಿಯೂ ಮಾಸಹಾರ ನಿಶಿದ್ಧ ಎಂದು ಸಂವಿಧಾನದಲ್ಲಿ ಒಂದು ಪದವೂ ಇಲ್ಲ. ಈ ರೀತಿಯ ಬೇದಭಾವ ಸಲ್ಲದು ಎಂದು ಹೇಳಿದರು.
ಬಹುಸಂಖ್ಯಾತ ಮಾಂಸಹಾರಿಗಳಿಗೆ ಬೇದಭಾವ ತೋರಲಾಗುತ್ತಿದೆ. ಸಸ್ಯಹಾರ, ಮಾಂಸಹಾರ ಎರಡಕ್ಕೂ ಅವಕಾಶ ನೀಡಬೇಕು. ಮಾಂಸಾಹಾರದ ಪರವಾಗಿ ನಡೆಯುತ್ತಿರುವ ಚಳುವಳಿಯ ಮಾತುಗಳಿಗೆ ಪ್ರಭುತ್ವ ಸ್ಪಂಧಿಸಬೇಕು ಎಂದು ಒತ್ತಾಯಿಸಿದರು.
ಸಮ್ಮೇಳನದ ಉಸ್ತುವಾರಿ ವಹಿಸಿರುವವರು ಹಾಗೂ ಪ್ರಭುತ್ವ ಆಹಾರ ಸಂಬಂಧ ಮನವಿಯನ್ನು ಗಮನಿಸಿ, ಧನಾತ್ಮಕ ನಿರ್ಧಾರವನ್ನು ಕೂಡಲೇ ಕೈಗೊಳ್ಳಬೇಕು. ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮುಖ್ಯಮಂತ್ರಿಗಳ ಗಮನಕ್ಕೆ ಸದರಿ ಮನವಿಯನ್ನು ಮುಂದಿಟ್ಟು ಕಾರ್ಯಗತಗೊಳಿಸಲಾಗದಷ್ಟು ಅಶಕ್ತರೇ ಎಂಬ ಪ್ರಶ್ನೆ ಮೂಡದಂತೆ ಕ್ರಿಯಾಶೀಲತೆಯನ್ನು ತೋರಬೇಕು ಎಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಒಕ್ಕೂಟದ ಪದಾಧಿಕಾರಿ ಜೆ.ರಾಮಯ್ಯ, ಒಕ್ಕೂಟದ ವಿದ್ಯಾರ್ಥಿ ನಾಯಕರುಗಳಾದ ಆಕಾಶ್, ಸುಚೀಂದ್ರ, ವಕೀಲರಾದ ಚೇತನ್, ಕಿಶೋರ್ ಇದ್ದರು.
ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…
ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ನನ್ನು ದೋಷಿ…
ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…
ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…
ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…