ಮಂಡ್ಯ

ಸಾಹಿತ್ಯ ಸಮ್ಮೇಳನ | ಸಸ್ಯಾಹಾರ ಜೊತೆಗೆ ಬಾಡೂಟಕ್ಕೂ ಒತ್ತಾಯ

ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರ ಎರಡೂ ಬಗೆಯ ಆಹಾರಗಳನ್ನು ವಿತರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತ ವಕೀಲರ ಒಕ್ಕೂಟದ ಕಾರ್ಯದರ್ಶಿ ಚಂದನ್ ಒತ್ತಾಯಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ ಎನ್ನುವುದು ಸಂವಿಧಾನಕ್ಕೆ ವಿರದ್ಧವಾಗಿದ್ದು, ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಅವರು ಮಾಂಸಾಹಾರವು ತಂಬಾಕು, ಮಧ್ಯದಂತೆಯೇ ದುಶ್ಚಟಗಳು ಎಂದು ಪರಿಬಿಂಭಿಸುವ ಪ್ರಯತ್ನ ನಡೆಸಿದ್ದು, ಮಾಂಸಾಹಾರ ನಿಕೃಷ್ಠವಲ್ಲ ಎಂದು ಪ್ರತಿರೋಧ ಒಡ್ಡುವ ಅವಶ್ಯಕತೆಯಿದೆ ಎಂದರು.

ಎಲ್ಲರ ಆಹಾರ ಸಂಸ್ಕೃತಿಯನ್ನು ಸಮಾನವಾಗಿ ಗೌರವಿಸಬೇಕು. ಆಹಾರ ಸಮಾನತೆ ಎಲ್ಲರೂ ಮನಗಾಣಬೇಕು. ಜಿಲ್ಲಾಡಳಿತ ಮಾಂಸಾಹಾರದ ಆಯೋಜನೆ ಮಾಡಬೇಕು. ಇಲ್ಲವಾದಲ್ಲಿ ಪ್ರಗತಿಪರ ಸಂಘಟನೆಗಳು ಸಂಘಟಿತವಾಗಿ ಮಾಂಸಾಹಾರ ಒದಗಿಸುವ ಕಾರ್ಯಕ್ಕೆ ಅಖಿಲ ಭಾರತ ವಕೀಲರ ಒಕ್ಕೂಟ ಕೈಜೋಡಿಸಲಿದೆ ಎಂಬ ಸಂದೇಶ ರವಾನಿಸಿದರು.

ಅಧ್ಯಕ್ಷ ವಕೀಲ ಬಿ.ಟಿ.ವಿಶ್ವನಾಥ್ ಮಾತನಾಡಿ, ಸಸ್ಯಹಾರ ಶ್ರೇಷ್ಟ, ಮಾಂಸಾಹಾರ ನಿಕೃಷ್ಠ ಎಂಬ ಸಣ್ಣನೆಯ ಪ್ರವಾಹ ಸೃಷ್ಠಿಯಾಗುತ್ತಿದೆ. ಕೋಮುವಾದ ದಳ್ಳೂರಿಯ ನಡುವೆ ಆಹಾರ ಕುರಿತಂತೆ ಬೀದಿ ದಾಳಿಗಳು ನಡೆಯುತ್ತಿವೆ. ಎಲ್ಲಿಯೂ ಮಾಸಹಾರ ನಿಶಿದ್ಧ ಎಂದು ಸಂವಿಧಾನದಲ್ಲಿ ಒಂದು ಪದವೂ ಇಲ್ಲ. ಈ ರೀತಿಯ ಬೇದಭಾವ ಸಲ್ಲದು ಎಂದು ಹೇಳಿದರು.

ಬಹುಸಂಖ್ಯಾತ ಮಾಂಸಹಾರಿಗಳಿಗೆ ಬೇದಭಾವ ತೋರಲಾಗುತ್ತಿದೆ. ಸಸ್ಯಹಾರ, ಮಾಂಸಹಾರ ಎರಡಕ್ಕೂ ಅವಕಾಶ ನೀಡಬೇಕು. ಮಾಂಸಾಹಾರದ ಪರವಾಗಿ ನಡೆಯುತ್ತಿರುವ ಚಳುವಳಿಯ ಮಾತುಗಳಿಗೆ ಪ್ರಭುತ್ವ ಸ್ಪಂಧಿಸಬೇಕು ಎಂದು ಒತ್ತಾಯಿಸಿದರು.

ಸಮ್ಮೇಳನದ ಉಸ್ತುವಾರಿ ವಹಿಸಿರುವವರು ಹಾಗೂ ಪ್ರಭುತ್ವ ಆಹಾರ ಸಂಬಂಧ ಮನವಿಯನ್ನು ಗಮನಿಸಿ, ಧನಾತ್ಮಕ ನಿರ್ಧಾರವನ್ನು ಕೂಡಲೇ ಕೈಗೊಳ್ಳಬೇಕು. ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮುಖ್ಯಮಂತ್ರಿಗಳ ಗಮನಕ್ಕೆ ಸದರಿ ಮನವಿಯನ್ನು ಮುಂದಿಟ್ಟು ಕಾರ್ಯಗತಗೊಳಿಸಲಾಗದಷ್ಟು ಅಶಕ್ತರೇ ಎಂಬ ಪ್ರಶ್ನೆ ಮೂಡದಂತೆ ಕ್ರಿಯಾಶೀಲತೆಯನ್ನು ತೋರಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಒಕ್ಕೂಟದ ಪದಾಧಿಕಾರಿ ಜೆ.ರಾಮಯ್ಯ, ಒಕ್ಕೂಟದ ವಿದ್ಯಾರ್ಥಿ ನಾಯಕರುಗಳಾದ ಆಕಾಶ್, ಸುಚೀಂದ್ರ, ವಕೀಲರಾದ ಚೇತನ್, ಕಿಶೋರ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

1 hour ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

1 hour ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

1 hour ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

1 hour ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago