ಮಂಡ್ಯ

ಸಾಹಿತ್ಯ ಸಮ್ಮೇಳನ| ಮನೆ ಮನೆಗಳಲ್ಲಿ ಕನ್ನಡ ಬಾವುಟ ಹಾರಾಡಲಿ; ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯ ಎಲ್ಲಾ ಮನೆ ಮನೆಗಳ ಮೇಲೂ ಕನ್ನಡ ಬಾವುಟ ಹಾರಿಸುವ ಮೂಲಕ ಜಿಲ್ಲೆಯ ಜನತೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸ್ವಾಗತಿಸುವುದರ ಜೊತೆಗೆ ಸಮ್ಮೇಳನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ಕರೆ ನೀಡಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಹಿತ್ಯ ಸಮ್ಮೇಳನದ ನಗರ ಅಲಂಕಾರ ಸಮಿತಿ ವತಿಯಿಂದ ಸ್ವರ್ಣಸಂದ್ರದಲ್ಲಿ ಆಯೋಜಿಸಿದ್ದ ಮನೆ ಮನೆಗಳಲ್ಲಿ ಕನ್ನಡ ಬಾವುಟ  ಕಾರ್ಯಕ್ರಮಕ್ಕೆ ಬಾವುಟ ಹಾರಿಸುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು.

ಮನೆಮನೆಗಳ ಮೇಲೆ ಕನ್ನಡ ಬಾವುಟ ಕಟ್ಟುವ ಕಾರ್ಯಕ್ರಮ ಕೇವಲ ಮಂಡ್ಯ ನಗರಕ್ಕೆ ಸೀಮಿತವಾಗದೇ ಜಿಲ್ಲೆಯ ಎಲ್ಲರ ಮನೆಮನೆಗಳ ಮೇಲೂ ಕನ್ನಡ ಬಾವುಟ ಹಾರಾಡಬೇಕು. ತಾಲೂಕು ಕೇಂದ್ರ, ಗ್ರಾಮ ಪಂಚಾಯತಿ ಕಚೇರಿಗಳ ಮೇಲೂ ಕನ್ನಡ ಬಾವುಟ ಹಾರಿಸಿ ಕನ್ನಡದ ಹಬ್ಬವನ್ನು ಮನೆಯ ಹಬ್ಬದ ರೀತಿಯಲ್ಲಿ ಆಚರಿಸಬೇಕು ಎಂದು ಹೇಳಿದರು.

ಸಾಹಿತ್ಯ ಸಮ್ಮೇಳನದ ಅಂಗವಾಗಿ ಡಿ.15 ರಂದು ಕನ್ನಡಕ್ಕಾಗಿ ಓಟ ಎಂಬ ಘೋಷವಾಕ್ಯದಡಿ ಹಮ್ಮಿಕೊಂಡಿರುವ ಮ್ಯಾರಥಾನ್ ನಲ್ಲಿ ನಗರದ ಪ್ರತಿ ಮನೆಯಿಂದ ಕನಿಷ್ಠ ಒಬ್ಬ ಸದಸ್ಯರಾದರೂ ಪಾಲ್ಗೊಳ್ಳಬೇಕು ಎಂದರು.

ಶಾಸಕ ರವಿಕುಮಾರ್ ಮಾತನಾಡಿ, ಮೂವತ್ತು ವರ್ಷಗಳ ಬಳಿಕ ಮಂಡ್ಯದಲ್ಲಿ ನೆರವೇರುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿ ಪ್ರಜೆ ಭಾಗವಹಿಸಬೇಕು. ಇನ್ನೊಂದು ವಾರದಲ್ಲಿ ನಗರದ ಎಲ್ಲಾ ಮನೆಗಳ ಮೇಲೆ ಕನ್ನಡ ಬಾವುಟ ಹಾರಾಡಲಿದೆ ಎಂದು ಹೇಳಿದರು.

ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಮಾತನಾಡಿ, ಎಲ್ಲರ ಮನೆ ಮೇಲೆ ಕನ್ನಡ ಬಾವುಟ ಹಾರಿದಾಗ ಮನೆಮನದಲ್ಲಿ ಕನ್ನಡ ಕಂಪು ಮೂಡಲಿದೆ. ಬಾವುಟ ಹಾರಟ ನಮ್ಮ ಏಕತೆ, ಐಕ್ಯತೆ ಅಸ್ಮಿತೆಯ ಸಂಕೇತ. ಇದು ಕನ್ನಡದ ಹಿರಿಮೆ. ಕನ್ನಡದ ಅಭಿಮಾನದ ಕುರುಹು ಎಂದರು.

ಕಾರ್ಯಕ್ರಮದಲ್ಲಿ ಶಾಸಕರುಗಳಾದ ರಮೇಶ್ ಬಾಬು ಬಂಡೀಸಿದ್ದೇಗೌಡರು, ದಿನೇಶ್ ಗೂಳಿಗೌಡರು,ಕಸಾಪ ಅಧ್ಯಕ್ಷರಾದ ನಾಡೋಜ ಮಹೇಶ್ ಜೋಶಿ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಆಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಓ ಶೇಖ್ ತನ್ವೀರ್ ಆಸೀಫ್, ನಗರಸಭಾ ಅಧ್ಯಕ್ಷರಾದ ಪ್ರಕಾಶ್, ಮುಢಾ ಅಧ್ಯಕ್ಷರಾದ ನಹೀಮ್, ಕಸಾಪ ಜಿಲ್ಲಾ ಸಂಚಾಲಕರಾದ ಮೀರಾ ಶಿವಲಿಂಗಯ್ಯ ಸೇರಿದಂತೆ ನಗರಸಭಾ ಸದಸ್ಯರು, ಕನ್ನಡಪರ ಸಂಘಟನೆಗಳ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

9 mins ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

22 mins ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

39 mins ago

ಮಂಡ್ಯ| ಬೂದನೂರು ಉತ್ಸವಕ್ಕೆ ಭರದ ಸಿದ್ಧತೆ: ಈ ಬಾರಿ ಹೆಲಿ ಟೂರಿಸಂ ಆಕರ್ಷಣೆ

ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…

54 mins ago

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…

1 hour ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

1 hour ago