ಮಂಡ್ಯ

ಸಾಹಿತ್ಯ ಸಮ್ಮೇಳನ| ಮನೆ ಮನೆಗಳಲ್ಲಿ ಕನ್ನಡ ಬಾವುಟ ಹಾರಾಡಲಿ; ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯ ಎಲ್ಲಾ ಮನೆ ಮನೆಗಳ ಮೇಲೂ ಕನ್ನಡ ಬಾವುಟ ಹಾರಿಸುವ ಮೂಲಕ ಜಿಲ್ಲೆಯ ಜನತೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸ್ವಾಗತಿಸುವುದರ ಜೊತೆಗೆ ಸಮ್ಮೇಳನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ಕರೆ ನೀಡಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಹಿತ್ಯ ಸಮ್ಮೇಳನದ ನಗರ ಅಲಂಕಾರ ಸಮಿತಿ ವತಿಯಿಂದ ಸ್ವರ್ಣಸಂದ್ರದಲ್ಲಿ ಆಯೋಜಿಸಿದ್ದ ಮನೆ ಮನೆಗಳಲ್ಲಿ ಕನ್ನಡ ಬಾವುಟ  ಕಾರ್ಯಕ್ರಮಕ್ಕೆ ಬಾವುಟ ಹಾರಿಸುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು.

ಮನೆಮನೆಗಳ ಮೇಲೆ ಕನ್ನಡ ಬಾವುಟ ಕಟ್ಟುವ ಕಾರ್ಯಕ್ರಮ ಕೇವಲ ಮಂಡ್ಯ ನಗರಕ್ಕೆ ಸೀಮಿತವಾಗದೇ ಜಿಲ್ಲೆಯ ಎಲ್ಲರ ಮನೆಮನೆಗಳ ಮೇಲೂ ಕನ್ನಡ ಬಾವುಟ ಹಾರಾಡಬೇಕು. ತಾಲೂಕು ಕೇಂದ್ರ, ಗ್ರಾಮ ಪಂಚಾಯತಿ ಕಚೇರಿಗಳ ಮೇಲೂ ಕನ್ನಡ ಬಾವುಟ ಹಾರಿಸಿ ಕನ್ನಡದ ಹಬ್ಬವನ್ನು ಮನೆಯ ಹಬ್ಬದ ರೀತಿಯಲ್ಲಿ ಆಚರಿಸಬೇಕು ಎಂದು ಹೇಳಿದರು.

ಸಾಹಿತ್ಯ ಸಮ್ಮೇಳನದ ಅಂಗವಾಗಿ ಡಿ.15 ರಂದು ಕನ್ನಡಕ್ಕಾಗಿ ಓಟ ಎಂಬ ಘೋಷವಾಕ್ಯದಡಿ ಹಮ್ಮಿಕೊಂಡಿರುವ ಮ್ಯಾರಥಾನ್ ನಲ್ಲಿ ನಗರದ ಪ್ರತಿ ಮನೆಯಿಂದ ಕನಿಷ್ಠ ಒಬ್ಬ ಸದಸ್ಯರಾದರೂ ಪಾಲ್ಗೊಳ್ಳಬೇಕು ಎಂದರು.

ಶಾಸಕ ರವಿಕುಮಾರ್ ಮಾತನಾಡಿ, ಮೂವತ್ತು ವರ್ಷಗಳ ಬಳಿಕ ಮಂಡ್ಯದಲ್ಲಿ ನೆರವೇರುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿ ಪ್ರಜೆ ಭಾಗವಹಿಸಬೇಕು. ಇನ್ನೊಂದು ವಾರದಲ್ಲಿ ನಗರದ ಎಲ್ಲಾ ಮನೆಗಳ ಮೇಲೆ ಕನ್ನಡ ಬಾವುಟ ಹಾರಾಡಲಿದೆ ಎಂದು ಹೇಳಿದರು.

ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಮಾತನಾಡಿ, ಎಲ್ಲರ ಮನೆ ಮೇಲೆ ಕನ್ನಡ ಬಾವುಟ ಹಾರಿದಾಗ ಮನೆಮನದಲ್ಲಿ ಕನ್ನಡ ಕಂಪು ಮೂಡಲಿದೆ. ಬಾವುಟ ಹಾರಟ ನಮ್ಮ ಏಕತೆ, ಐಕ್ಯತೆ ಅಸ್ಮಿತೆಯ ಸಂಕೇತ. ಇದು ಕನ್ನಡದ ಹಿರಿಮೆ. ಕನ್ನಡದ ಅಭಿಮಾನದ ಕುರುಹು ಎಂದರು.

ಕಾರ್ಯಕ್ರಮದಲ್ಲಿ ಶಾಸಕರುಗಳಾದ ರಮೇಶ್ ಬಾಬು ಬಂಡೀಸಿದ್ದೇಗೌಡರು, ದಿನೇಶ್ ಗೂಳಿಗೌಡರು,ಕಸಾಪ ಅಧ್ಯಕ್ಷರಾದ ನಾಡೋಜ ಮಹೇಶ್ ಜೋಶಿ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಆಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಓ ಶೇಖ್ ತನ್ವೀರ್ ಆಸೀಫ್, ನಗರಸಭಾ ಅಧ್ಯಕ್ಷರಾದ ಪ್ರಕಾಶ್, ಮುಢಾ ಅಧ್ಯಕ್ಷರಾದ ನಹೀಮ್, ಕಸಾಪ ಜಿಲ್ಲಾ ಸಂಚಾಲಕರಾದ ಮೀರಾ ಶಿವಲಿಂಗಯ್ಯ ಸೇರಿದಂತೆ ನಗರಸಭಾ ಸದಸ್ಯರು, ಕನ್ನಡಪರ ಸಂಘಟನೆಗಳ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

2 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

5 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

6 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

6 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

6 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

6 hours ago