ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ನೀಡುವ ಆಹಾರದ ಕುರಿತು ಚರ್ಚೆ ಆಗ್ರಹಗಳು ನಡೆಯುತ್ತಿದ್ದು, ಮಾಂಸಾಹಾರ ನೀಡುವ ಮೂಲಕ ಎಲ್ಲ ಸಮಾಜದ ಜನರಿಗೆ ಸಮಾನ ಆಹಾರ ಕಲ್ಪಿಸಬೇಕು ಎಂದು ಮಂಟೇಸ್ವಾಮಿ ಪರಂಪರೆ ರಕ್ಷಣಾ ಹೋರಾಟ ಸಮಿತಿಯ ಅಧ್ಯಕ್ಷ ಉಗ್ರನರಸಿಂಹೇಗೌಡ ಆಗ್ರಹಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದಲ್ಲಿ ಭಾಷೆ ಮುಖ್ಯವೋ ಆಹಾರ ಮುಖ್ಯವೋ ಎಂಬ ಪ್ರಶ್ನೆಗಳೂ ಮೂಡುತ್ತಿದ್ದು, ಭಾಷೆಯ ಮೊದಲೇ ಆಹಾರದ ಅನ್ವೇಷಣೆಯಾಗಿದೆ. ಮನುಷ್ಯ ಹುಟ್ಟಿನಿಂದಲೂ ಸಸ್ಯಹಾರಿಯೂ ಮಾಂಸಹಾರಿಯೂ ಆಗಿದ್ದು, ಎರಡನ್ನು ಸಮನಾಗಿ ನೋಡಬೇಕಾದದ್ದು ಸಾಹಿತ್ಯದ ಮನೋಧರ್ಮವಾಗಿದೆ ಎಂದರು.
ಕಳೆದ ೮೬ ಸಾಹಿತ್ಯ ಸಮ್ಮೇಳನದಲ್ಲಿಯೂ ಮಾಂಸಾಹಾರ ಸೇರಿಸದೇ ಇರುವುದು ಸಾಹಿತ್ಯ ಪರಿಷತ್ ಮತ್ತು ಸರ್ಕಾರದ ಅವಿವೇಕತನವಾಗಿದ್ದು, ಈ ಹಿಂದೆ ಮಾಡಿದ ತಪ್ಪುಗಳನ್ನು ಸರಿಪಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಮುಂದಿನ ಸಮ್ಮೇಳನಗಳಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರ ಎರಡನ್ನು ಉಣಬಡಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಮಹದೇವಶಂಕರ ಹಾಗೂ ಶಂಭುಲಿಂಗಸ್ವಾಮಿ ಇದ್ದರು.
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…
ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ…
ಬೆಂಗಳೂರು: ಕೋಗಿಲು ಲೇಔಟ್ನಲ್ಲಿ ಅಕ್ರಮ ಶೆಡ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…
ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್ಕೇರ್…