ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ನೀಡುವ ಆಹಾರದ ಕುರಿತು ಚರ್ಚೆ ಆಗ್ರಹಗಳು ನಡೆಯುತ್ತಿದ್ದು, ಮಾಂಸಾಹಾರ ನೀಡುವ ಮೂಲಕ ಎಲ್ಲ ಸಮಾಜದ ಜನರಿಗೆ ಸಮಾನ ಆಹಾರ ಕಲ್ಪಿಸಬೇಕು ಎಂದು ಮಂಟೇಸ್ವಾಮಿ ಪರಂಪರೆ ರಕ್ಷಣಾ ಹೋರಾಟ ಸಮಿತಿಯ ಅಧ್ಯಕ್ಷ ಉಗ್ರನರಸಿಂಹೇಗೌಡ ಆಗ್ರಹಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದಲ್ಲಿ ಭಾಷೆ ಮುಖ್ಯವೋ ಆಹಾರ ಮುಖ್ಯವೋ ಎಂಬ ಪ್ರಶ್ನೆಗಳೂ ಮೂಡುತ್ತಿದ್ದು, ಭಾಷೆಯ ಮೊದಲೇ ಆಹಾರದ ಅನ್ವೇಷಣೆಯಾಗಿದೆ. ಮನುಷ್ಯ ಹುಟ್ಟಿನಿಂದಲೂ ಸಸ್ಯಹಾರಿಯೂ ಮಾಂಸಹಾರಿಯೂ ಆಗಿದ್ದು, ಎರಡನ್ನು ಸಮನಾಗಿ ನೋಡಬೇಕಾದದ್ದು ಸಾಹಿತ್ಯದ ಮನೋಧರ್ಮವಾಗಿದೆ ಎಂದರು.
ಕಳೆದ ೮೬ ಸಾಹಿತ್ಯ ಸಮ್ಮೇಳನದಲ್ಲಿಯೂ ಮಾಂಸಾಹಾರ ಸೇರಿಸದೇ ಇರುವುದು ಸಾಹಿತ್ಯ ಪರಿಷತ್ ಮತ್ತು ಸರ್ಕಾರದ ಅವಿವೇಕತನವಾಗಿದ್ದು, ಈ ಹಿಂದೆ ಮಾಡಿದ ತಪ್ಪುಗಳನ್ನು ಸರಿಪಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಮುಂದಿನ ಸಮ್ಮೇಳನಗಳಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರ ಎರಡನ್ನು ಉಣಬಡಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಮಹದೇವಶಂಕರ ಹಾಗೂ ಶಂಭುಲಿಂಗಸ್ವಾಮಿ ಇದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…