ಮಂಡ್ಯ

ಸಾಹಿತ್ಯ ಸಮ್ಮೇಳನ | ಮನೆಗೊಂದು ಕೋಳಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ ವಿರೋಧಿಸಿ ಸಮ್ಮೇಳನಕ್ಕಾಗಮಿಸುವ ಅತಿಥಿಗಳಿಗೆ ಬಾಡೂಟ ಬಡಿಸಲು ಮನೆಗೊಂದು ಕೋಡಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ, ಸಮ್ಮೇಳನದಲ್ಲಿ ಮಾಂಸಪ್ರಿಯರಿಗೆ ಅಡುಗೆ ಮಾಡಿಸುತ್ತೇವೆ ಎಂದು ಸಾಹಿತಿ ರಾಜೇಂದ್ರ ಪ್ರಸಾದ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಬಾಡೂಟ, ಬಾಡೂಟದ ಬಳಗವನ್ನು ಬೇರೆ ರೀತಿಯಲ್ಲಿ ಬಿಂಬಿಸುವ ಯತ್ನ ನಡೆಯುತ್ತಿದೆ. ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರದ ಆಗ್ರಹ ಎಂಬ ತಪ್ಪು ಸಂದೇಶ ರವಾನೆಯಾಗುತ್ತಿದೆ. ಆದರೆ ನಾವು ಮಾಂಸಾಹಾರದ ಪ್ರಾತಿನಿಧ್ಯ ಇರುಬೇಕೆಂಬುದು ಬಳಗದ ಉದ್ದೇಶವಾಗಿದೆ ಎಂದರು.

ಸಮ್ಮೇಳನಕ್ಕೂ ಮೊದಲು ಸಮ್ಮೇಳನದಲ್ಲಿ ತಂಬಾಕು, ಮಧ್ಯಪಾನ ಹಾಗೂ ಮಾಂಸಾಹಾರ ನಿಷೇಧಿಸಲಾಗಿದೆ ಎಂಬ ಹೇಳಿಕೆ ವಿರುದ್ಧ ಇದು ಪ್ರಾರಂಭವಾಗಿದ್ದು, ಮಾಂಸಾಹಾರಕ್ಕೆ ಯಾವುದೇ ರೀತಿಯಲ್ಲಿ ನಿಷೇಧವಿಲ್ಲ. ಆದರೂ ಅದನ್ನು ಕೀಳಾಗಿ, ಅಸ್ಪೃಶ್ಯತೆಯಿಂದ ಕಾಣುತ್ತಿದ್ದು ಅದನ್ನು ಹೋಗಲಾಗಡಿಸುವ ಪ್ರಯತ್ನ ನಮ್ಮದಾಗಿದೆ ಎಂದು ಹೇಳಿದರು.

ಆಹಾರದಲ್ಲಿ ಸಮಾನತೆ ಬರಬೇಕೆಂಬುದು ನಮ್ಮ ಆಶವಾಗಿದ್ದು, ಸಮ್ಮೇಳದ ಸುದ್ದಿ ಪ್ರಕಟವಾಗುವುದೇ ಊಟದ ವಿಷಯವಾಗಿ ಆಗಿದ್ದು, ಸಾಹಿತ್ಯದಿಂದಲ್ಲ ಎಂದ ಅವರು, ಸಾರ್ವಜನಿಕರ ಹಣವನ್ನು ಸಮ್ಮೇಳನದಲ್ಲಿ ಸರ್ಕಾರ ಬಳಸುತ್ತಿದ್ದು, ಸಾರ್ವಜನಿಕರ ಆಯ್ಕೆಗೆ ಹಾಗೂ ಆಹಾರದ ಸಮಾನತೆಗೆ ಅಂಶ ನೀಡುವುದು ಸಮಸ್ಯೆ ಆಗಲಾರದು ಎಂದು ಹೇಳಿದರು.

ಸಮ್ಮೇಳನದಲ್ಲಿ ಒಂದು ಮೊಟ್ಟೆ ಹಾಗೂ ಒಂದು ತುಂಡು ಮಾಸ ನೀಡುವುದರಲ್ಲಿ ಸಮಸ್ಯೆ ಏನಿದೆಯೆಂದು ಕಾಣುತ್ತಿಲ್ಲ, ಬಾಡೂಟಕ್ಕೆ ಅವಕಾಶ ನೀಡದಿದ್ದರೆ ಇಂದಿನಿಂದ ಕೋಳಿ ಮತ್ತು ಮೊಟ್ಟೆ ಸಂಗ್ರಹಿಸಿ ದಾಸ್ತಾನು ಮಾಡಲಾಗುತ್ತಿದೆ ಎಂದರು.

ವಿಚಾರವಾದಿ ಸಂತೋಷ್ ಮಾತನಾಡಿ, ಸಚಿವರು ಸಾಕಾರಾತ್ಮ ಸ್ಪಂದನೆಯ ಭರವಸೆ ನೀಡಿದ್ದು, ಕೊನೆ ದಿನದವರೆಗೂ ಕಾಯುತ್ತೇವೆ. ಆಹಾರ ಸಮಿತಿ ಬಾಡೂಟ ಅನುಷ್ಠಾನಕ್ಕೆ ಮುಂದಾದರೆ ನಾವು ಸಂಗ್ರಹಿಸಿದ ಕುರಿ, ಕೋಣಿ, ಧಾನ್ಯಗಳನ್ನು ಸಮಿತಿಗೆ ಸಲ್ಲಿಸುತ್ತೇವೆ. ಅನುಷ್ಠಾನಗೊಳಿಸದಿದ್ದರೆ ಸಮ್ಮೇಳನ ಸ್ಥಳದ ಆಸುಪಾಸಿನಲ್ಲಿ ಖಂಡನಾ ಸಭೆ ನಡೆಸಿ ಸಾಹಿತ್ಯ ಅತಿಥಿಗಳಿಗೆ ಮೊಟ್ಟೆ, ಮಾಂಸದ ತುಂಡು ನೀಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಗೋಷ್ಠಿ ಎಂ.ಬಿ.ನಾಗಣ್ಣಗೌಡ, ಸಮಾನ ಮನಸ್ಕರ ವೇದಿಕೆಯ ಲಕ್ಷ್ಮಣ್ ಚೀರನಹಳ್ಳಿ, ಸಿಐಟಿಯುನ ಸಿ.ಕುಮಾರಿ, ಮನ್ನೂರ್, ವಕೀಲ ಶಿವಶಂಕರ್, ಧನುಷ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾ.ಬೆಟ್ಟದ ತಪ್ಪಲಿನಲ್ಲಿ ಬೆಂಕಿ : ಕಿಡಿಗೇಡಿಗಳ ಕೃತ್ಯಕ್ಕೆ ಸಸ್ಯ ಸಂಕುಲ ಹಾನಿ

ಮೈಸೂರು:  ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿ‌ಉರಿದಿದ್ದು,ಕೆಲಕಾಲ‌ ಆತಂಕ‌ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…

6 hours ago

ಮೈಸೂರು | ಅಪೋಲೋ ಆಸ್ಪತ್ರೆಯಲ್ಲಿ ರೋಬೊಟಿಕ್‌ ಶಸ್ತ್ರಚಿಕಿತ್ಸೆ ಸೌಲಭ್ಯ

ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…

6 hours ago

ಆವಿಷ್ಕಾರ,ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ : ಎನ್.ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…

8 hours ago

ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವದ ಆಯೋಜನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…

8 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ಅವಿರೋಧ ಆಯ್ಕೆ

ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…

8 hours ago

ವಿಡಿಯೋ ವೈರಲ್‌ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅಜ್ಞಾತ ಸ್ಥಳಕ್ಕೆ

ಬೆಂಗಳೂರು : ಡಿಜಿಪಿ ರಾಮಚಂದ್ರರಾವ್‌ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್‌ ಅವರು ಹತ್ತು…

9 hours ago