ಮಂಡ್ಯ

ಸಾಹಿತ್ಯ ಸಮ್ಮೇಳನ | ಮನೆಗೊಂದು ಕೋಳಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ ವಿರೋಧಿಸಿ ಸಮ್ಮೇಳನಕ್ಕಾಗಮಿಸುವ ಅತಿಥಿಗಳಿಗೆ ಬಾಡೂಟ ಬಡಿಸಲು ಮನೆಗೊಂದು ಕೋಡಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ, ಸಮ್ಮೇಳನದಲ್ಲಿ ಮಾಂಸಪ್ರಿಯರಿಗೆ ಅಡುಗೆ ಮಾಡಿಸುತ್ತೇವೆ ಎಂದು ಸಾಹಿತಿ ರಾಜೇಂದ್ರ ಪ್ರಸಾದ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಬಾಡೂಟ, ಬಾಡೂಟದ ಬಳಗವನ್ನು ಬೇರೆ ರೀತಿಯಲ್ಲಿ ಬಿಂಬಿಸುವ ಯತ್ನ ನಡೆಯುತ್ತಿದೆ. ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರದ ಆಗ್ರಹ ಎಂಬ ತಪ್ಪು ಸಂದೇಶ ರವಾನೆಯಾಗುತ್ತಿದೆ. ಆದರೆ ನಾವು ಮಾಂಸಾಹಾರದ ಪ್ರಾತಿನಿಧ್ಯ ಇರುಬೇಕೆಂಬುದು ಬಳಗದ ಉದ್ದೇಶವಾಗಿದೆ ಎಂದರು.

ಸಮ್ಮೇಳನಕ್ಕೂ ಮೊದಲು ಸಮ್ಮೇಳನದಲ್ಲಿ ತಂಬಾಕು, ಮಧ್ಯಪಾನ ಹಾಗೂ ಮಾಂಸಾಹಾರ ನಿಷೇಧಿಸಲಾಗಿದೆ ಎಂಬ ಹೇಳಿಕೆ ವಿರುದ್ಧ ಇದು ಪ್ರಾರಂಭವಾಗಿದ್ದು, ಮಾಂಸಾಹಾರಕ್ಕೆ ಯಾವುದೇ ರೀತಿಯಲ್ಲಿ ನಿಷೇಧವಿಲ್ಲ. ಆದರೂ ಅದನ್ನು ಕೀಳಾಗಿ, ಅಸ್ಪೃಶ್ಯತೆಯಿಂದ ಕಾಣುತ್ತಿದ್ದು ಅದನ್ನು ಹೋಗಲಾಗಡಿಸುವ ಪ್ರಯತ್ನ ನಮ್ಮದಾಗಿದೆ ಎಂದು ಹೇಳಿದರು.

ಆಹಾರದಲ್ಲಿ ಸಮಾನತೆ ಬರಬೇಕೆಂಬುದು ನಮ್ಮ ಆಶವಾಗಿದ್ದು, ಸಮ್ಮೇಳದ ಸುದ್ದಿ ಪ್ರಕಟವಾಗುವುದೇ ಊಟದ ವಿಷಯವಾಗಿ ಆಗಿದ್ದು, ಸಾಹಿತ್ಯದಿಂದಲ್ಲ ಎಂದ ಅವರು, ಸಾರ್ವಜನಿಕರ ಹಣವನ್ನು ಸಮ್ಮೇಳನದಲ್ಲಿ ಸರ್ಕಾರ ಬಳಸುತ್ತಿದ್ದು, ಸಾರ್ವಜನಿಕರ ಆಯ್ಕೆಗೆ ಹಾಗೂ ಆಹಾರದ ಸಮಾನತೆಗೆ ಅಂಶ ನೀಡುವುದು ಸಮಸ್ಯೆ ಆಗಲಾರದು ಎಂದು ಹೇಳಿದರು.

ಸಮ್ಮೇಳನದಲ್ಲಿ ಒಂದು ಮೊಟ್ಟೆ ಹಾಗೂ ಒಂದು ತುಂಡು ಮಾಸ ನೀಡುವುದರಲ್ಲಿ ಸಮಸ್ಯೆ ಏನಿದೆಯೆಂದು ಕಾಣುತ್ತಿಲ್ಲ, ಬಾಡೂಟಕ್ಕೆ ಅವಕಾಶ ನೀಡದಿದ್ದರೆ ಇಂದಿನಿಂದ ಕೋಳಿ ಮತ್ತು ಮೊಟ್ಟೆ ಸಂಗ್ರಹಿಸಿ ದಾಸ್ತಾನು ಮಾಡಲಾಗುತ್ತಿದೆ ಎಂದರು.

ವಿಚಾರವಾದಿ ಸಂತೋಷ್ ಮಾತನಾಡಿ, ಸಚಿವರು ಸಾಕಾರಾತ್ಮ ಸ್ಪಂದನೆಯ ಭರವಸೆ ನೀಡಿದ್ದು, ಕೊನೆ ದಿನದವರೆಗೂ ಕಾಯುತ್ತೇವೆ. ಆಹಾರ ಸಮಿತಿ ಬಾಡೂಟ ಅನುಷ್ಠಾನಕ್ಕೆ ಮುಂದಾದರೆ ನಾವು ಸಂಗ್ರಹಿಸಿದ ಕುರಿ, ಕೋಣಿ, ಧಾನ್ಯಗಳನ್ನು ಸಮಿತಿಗೆ ಸಲ್ಲಿಸುತ್ತೇವೆ. ಅನುಷ್ಠಾನಗೊಳಿಸದಿದ್ದರೆ ಸಮ್ಮೇಳನ ಸ್ಥಳದ ಆಸುಪಾಸಿನಲ್ಲಿ ಖಂಡನಾ ಸಭೆ ನಡೆಸಿ ಸಾಹಿತ್ಯ ಅತಿಥಿಗಳಿಗೆ ಮೊಟ್ಟೆ, ಮಾಂಸದ ತುಂಡು ನೀಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಗೋಷ್ಠಿ ಎಂ.ಬಿ.ನಾಗಣ್ಣಗೌಡ, ಸಮಾನ ಮನಸ್ಕರ ವೇದಿಕೆಯ ಲಕ್ಷ್ಮಣ್ ಚೀರನಹಳ್ಳಿ, ಸಿಐಟಿಯುನ ಸಿ.ಕುಮಾರಿ, ಮನ್ನೂರ್, ವಕೀಲ ಶಿವಶಂಕರ್, ಧನುಷ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

2 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

2 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

3 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

3 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

3 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

4 hours ago