ಮಂಡ್ಯ

ಸಾಹಿತ್ಯ ಸಮ್ಮೇಳನ | ಮನೆಗೊಂದು ಕೋಳಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ ವಿರೋಧಿಸಿ ಸಮ್ಮೇಳನಕ್ಕಾಗಮಿಸುವ ಅತಿಥಿಗಳಿಗೆ ಬಾಡೂಟ ಬಡಿಸಲು ಮನೆಗೊಂದು ಕೋಡಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ, ಸಮ್ಮೇಳನದಲ್ಲಿ ಮಾಂಸಪ್ರಿಯರಿಗೆ ಅಡುಗೆ ಮಾಡಿಸುತ್ತೇವೆ ಎಂದು ಸಾಹಿತಿ ರಾಜೇಂದ್ರ ಪ್ರಸಾದ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಬಾಡೂಟ, ಬಾಡೂಟದ ಬಳಗವನ್ನು ಬೇರೆ ರೀತಿಯಲ್ಲಿ ಬಿಂಬಿಸುವ ಯತ್ನ ನಡೆಯುತ್ತಿದೆ. ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರದ ಆಗ್ರಹ ಎಂಬ ತಪ್ಪು ಸಂದೇಶ ರವಾನೆಯಾಗುತ್ತಿದೆ. ಆದರೆ ನಾವು ಮಾಂಸಾಹಾರದ ಪ್ರಾತಿನಿಧ್ಯ ಇರುಬೇಕೆಂಬುದು ಬಳಗದ ಉದ್ದೇಶವಾಗಿದೆ ಎಂದರು.

ಸಮ್ಮೇಳನಕ್ಕೂ ಮೊದಲು ಸಮ್ಮೇಳನದಲ್ಲಿ ತಂಬಾಕು, ಮಧ್ಯಪಾನ ಹಾಗೂ ಮಾಂಸಾಹಾರ ನಿಷೇಧಿಸಲಾಗಿದೆ ಎಂಬ ಹೇಳಿಕೆ ವಿರುದ್ಧ ಇದು ಪ್ರಾರಂಭವಾಗಿದ್ದು, ಮಾಂಸಾಹಾರಕ್ಕೆ ಯಾವುದೇ ರೀತಿಯಲ್ಲಿ ನಿಷೇಧವಿಲ್ಲ. ಆದರೂ ಅದನ್ನು ಕೀಳಾಗಿ, ಅಸ್ಪೃಶ್ಯತೆಯಿಂದ ಕಾಣುತ್ತಿದ್ದು ಅದನ್ನು ಹೋಗಲಾಗಡಿಸುವ ಪ್ರಯತ್ನ ನಮ್ಮದಾಗಿದೆ ಎಂದು ಹೇಳಿದರು.

ಆಹಾರದಲ್ಲಿ ಸಮಾನತೆ ಬರಬೇಕೆಂಬುದು ನಮ್ಮ ಆಶವಾಗಿದ್ದು, ಸಮ್ಮೇಳದ ಸುದ್ದಿ ಪ್ರಕಟವಾಗುವುದೇ ಊಟದ ವಿಷಯವಾಗಿ ಆಗಿದ್ದು, ಸಾಹಿತ್ಯದಿಂದಲ್ಲ ಎಂದ ಅವರು, ಸಾರ್ವಜನಿಕರ ಹಣವನ್ನು ಸಮ್ಮೇಳನದಲ್ಲಿ ಸರ್ಕಾರ ಬಳಸುತ್ತಿದ್ದು, ಸಾರ್ವಜನಿಕರ ಆಯ್ಕೆಗೆ ಹಾಗೂ ಆಹಾರದ ಸಮಾನತೆಗೆ ಅಂಶ ನೀಡುವುದು ಸಮಸ್ಯೆ ಆಗಲಾರದು ಎಂದು ಹೇಳಿದರು.

ಸಮ್ಮೇಳನದಲ್ಲಿ ಒಂದು ಮೊಟ್ಟೆ ಹಾಗೂ ಒಂದು ತುಂಡು ಮಾಸ ನೀಡುವುದರಲ್ಲಿ ಸಮಸ್ಯೆ ಏನಿದೆಯೆಂದು ಕಾಣುತ್ತಿಲ್ಲ, ಬಾಡೂಟಕ್ಕೆ ಅವಕಾಶ ನೀಡದಿದ್ದರೆ ಇಂದಿನಿಂದ ಕೋಳಿ ಮತ್ತು ಮೊಟ್ಟೆ ಸಂಗ್ರಹಿಸಿ ದಾಸ್ತಾನು ಮಾಡಲಾಗುತ್ತಿದೆ ಎಂದರು.

ವಿಚಾರವಾದಿ ಸಂತೋಷ್ ಮಾತನಾಡಿ, ಸಚಿವರು ಸಾಕಾರಾತ್ಮ ಸ್ಪಂದನೆಯ ಭರವಸೆ ನೀಡಿದ್ದು, ಕೊನೆ ದಿನದವರೆಗೂ ಕಾಯುತ್ತೇವೆ. ಆಹಾರ ಸಮಿತಿ ಬಾಡೂಟ ಅನುಷ್ಠಾನಕ್ಕೆ ಮುಂದಾದರೆ ನಾವು ಸಂಗ್ರಹಿಸಿದ ಕುರಿ, ಕೋಣಿ, ಧಾನ್ಯಗಳನ್ನು ಸಮಿತಿಗೆ ಸಲ್ಲಿಸುತ್ತೇವೆ. ಅನುಷ್ಠಾನಗೊಳಿಸದಿದ್ದರೆ ಸಮ್ಮೇಳನ ಸ್ಥಳದ ಆಸುಪಾಸಿನಲ್ಲಿ ಖಂಡನಾ ಸಭೆ ನಡೆಸಿ ಸಾಹಿತ್ಯ ಅತಿಥಿಗಳಿಗೆ ಮೊಟ್ಟೆ, ಮಾಂಸದ ತುಂಡು ನೀಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಗೋಷ್ಠಿ ಎಂ.ಬಿ.ನಾಗಣ್ಣಗೌಡ, ಸಮಾನ ಮನಸ್ಕರ ವೇದಿಕೆಯ ಲಕ್ಷ್ಮಣ್ ಚೀರನಹಳ್ಳಿ, ಸಿಐಟಿಯುನ ಸಿ.ಕುಮಾರಿ, ಮನ್ನೂರ್, ವಕೀಲ ಶಿವಶಂಕರ್, ಧನುಷ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

8 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

8 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

9 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

10 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

15 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

15 hours ago