ಮಂಡ್ಯ

ಸಾಹಿತ್ಯ ಸಮ್ಮೇಳನ | ಮನೆಗೊಂದು ಕೋಳಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ ವಿರೋಧಿಸಿ ಸಮ್ಮೇಳನಕ್ಕಾಗಮಿಸುವ ಅತಿಥಿಗಳಿಗೆ ಬಾಡೂಟ ಬಡಿಸಲು ಮನೆಗೊಂದು ಕೋಡಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ, ಸಮ್ಮೇಳನದಲ್ಲಿ ಮಾಂಸಪ್ರಿಯರಿಗೆ ಅಡುಗೆ ಮಾಡಿಸುತ್ತೇವೆ ಎಂದು ಸಾಹಿತಿ ರಾಜೇಂದ್ರ ಪ್ರಸಾದ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಬಾಡೂಟ, ಬಾಡೂಟದ ಬಳಗವನ್ನು ಬೇರೆ ರೀತಿಯಲ್ಲಿ ಬಿಂಬಿಸುವ ಯತ್ನ ನಡೆಯುತ್ತಿದೆ. ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರದ ಆಗ್ರಹ ಎಂಬ ತಪ್ಪು ಸಂದೇಶ ರವಾನೆಯಾಗುತ್ತಿದೆ. ಆದರೆ ನಾವು ಮಾಂಸಾಹಾರದ ಪ್ರಾತಿನಿಧ್ಯ ಇರುಬೇಕೆಂಬುದು ಬಳಗದ ಉದ್ದೇಶವಾಗಿದೆ ಎಂದರು.

ಸಮ್ಮೇಳನಕ್ಕೂ ಮೊದಲು ಸಮ್ಮೇಳನದಲ್ಲಿ ತಂಬಾಕು, ಮಧ್ಯಪಾನ ಹಾಗೂ ಮಾಂಸಾಹಾರ ನಿಷೇಧಿಸಲಾಗಿದೆ ಎಂಬ ಹೇಳಿಕೆ ವಿರುದ್ಧ ಇದು ಪ್ರಾರಂಭವಾಗಿದ್ದು, ಮಾಂಸಾಹಾರಕ್ಕೆ ಯಾವುದೇ ರೀತಿಯಲ್ಲಿ ನಿಷೇಧವಿಲ್ಲ. ಆದರೂ ಅದನ್ನು ಕೀಳಾಗಿ, ಅಸ್ಪೃಶ್ಯತೆಯಿಂದ ಕಾಣುತ್ತಿದ್ದು ಅದನ್ನು ಹೋಗಲಾಗಡಿಸುವ ಪ್ರಯತ್ನ ನಮ್ಮದಾಗಿದೆ ಎಂದು ಹೇಳಿದರು.

ಆಹಾರದಲ್ಲಿ ಸಮಾನತೆ ಬರಬೇಕೆಂಬುದು ನಮ್ಮ ಆಶವಾಗಿದ್ದು, ಸಮ್ಮೇಳದ ಸುದ್ದಿ ಪ್ರಕಟವಾಗುವುದೇ ಊಟದ ವಿಷಯವಾಗಿ ಆಗಿದ್ದು, ಸಾಹಿತ್ಯದಿಂದಲ್ಲ ಎಂದ ಅವರು, ಸಾರ್ವಜನಿಕರ ಹಣವನ್ನು ಸಮ್ಮೇಳನದಲ್ಲಿ ಸರ್ಕಾರ ಬಳಸುತ್ತಿದ್ದು, ಸಾರ್ವಜನಿಕರ ಆಯ್ಕೆಗೆ ಹಾಗೂ ಆಹಾರದ ಸಮಾನತೆಗೆ ಅಂಶ ನೀಡುವುದು ಸಮಸ್ಯೆ ಆಗಲಾರದು ಎಂದು ಹೇಳಿದರು.

ಸಮ್ಮೇಳನದಲ್ಲಿ ಒಂದು ಮೊಟ್ಟೆ ಹಾಗೂ ಒಂದು ತುಂಡು ಮಾಸ ನೀಡುವುದರಲ್ಲಿ ಸಮಸ್ಯೆ ಏನಿದೆಯೆಂದು ಕಾಣುತ್ತಿಲ್ಲ, ಬಾಡೂಟಕ್ಕೆ ಅವಕಾಶ ನೀಡದಿದ್ದರೆ ಇಂದಿನಿಂದ ಕೋಳಿ ಮತ್ತು ಮೊಟ್ಟೆ ಸಂಗ್ರಹಿಸಿ ದಾಸ್ತಾನು ಮಾಡಲಾಗುತ್ತಿದೆ ಎಂದರು.

ವಿಚಾರವಾದಿ ಸಂತೋಷ್ ಮಾತನಾಡಿ, ಸಚಿವರು ಸಾಕಾರಾತ್ಮ ಸ್ಪಂದನೆಯ ಭರವಸೆ ನೀಡಿದ್ದು, ಕೊನೆ ದಿನದವರೆಗೂ ಕಾಯುತ್ತೇವೆ. ಆಹಾರ ಸಮಿತಿ ಬಾಡೂಟ ಅನುಷ್ಠಾನಕ್ಕೆ ಮುಂದಾದರೆ ನಾವು ಸಂಗ್ರಹಿಸಿದ ಕುರಿ, ಕೋಣಿ, ಧಾನ್ಯಗಳನ್ನು ಸಮಿತಿಗೆ ಸಲ್ಲಿಸುತ್ತೇವೆ. ಅನುಷ್ಠಾನಗೊಳಿಸದಿದ್ದರೆ ಸಮ್ಮೇಳನ ಸ್ಥಳದ ಆಸುಪಾಸಿನಲ್ಲಿ ಖಂಡನಾ ಸಭೆ ನಡೆಸಿ ಸಾಹಿತ್ಯ ಅತಿಥಿಗಳಿಗೆ ಮೊಟ್ಟೆ, ಮಾಂಸದ ತುಂಡು ನೀಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಗೋಷ್ಠಿ ಎಂ.ಬಿ.ನಾಗಣ್ಣಗೌಡ, ಸಮಾನ ಮನಸ್ಕರ ವೇದಿಕೆಯ ಲಕ್ಷ್ಮಣ್ ಚೀರನಹಳ್ಳಿ, ಸಿಐಟಿಯುನ ಸಿ.ಕುಮಾರಿ, ಮನ್ನೂರ್, ವಕೀಲ ಶಿವಶಂಕರ್, ಧನುಷ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

11 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago