ಮಂಡ್ಯ

ಸಾಹಿತ್ಯ ಸಮ್ಮೇಳನ: ಮೆರವಣಿಗೆ ಸಮಿತಿಯ ರೂ.95 ಲಕ್ಷ ಬಜೆಟ್‌ ಮಂಡನೆ

ಮಂಡ್ಯ: ಡಿ. 20 ರಿಂದ ಮೂರು ದಿನ ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮೆರವಣಿಗೆಯನ್ನು ವ್ಯವಸ್ಥಿತಿ ಮತ್ತು ವರ್ಣರಂಜಿತವಾಗಿ ಸಂಘಟಿಸಲು ಒಟ್ಟು 95 ಲಕ್ಷ ರೂಪಾಯಿಗಳ ತಾತ್ಕಾಲಿಕ ಅಂದಾಜು ವೆಚ್ಚದ ಬಜೆಟ್ ಅನ್ನು ಮೆರವಣಿಗೆ ಸಮಿತಿಯ ಉಪ ಸಮಿತಿಗಳು ಮಂಡಿಸಿದವು.

ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಅ. 23ರಂದು ನಡೆಯಲಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸಭೆಯ ಹಿನ್ನೆಲೆಯಲ್ಲಿ ಮೆರವಣಿಗೆ ಸಮಿತಿ ಅಧ್ಯಕ್ಷರೂ ಆದ ಶಾಸಕ ಮಧು ಜಿ.ಮಾದೇಗೌಡ ಅವರು ಸಮಿತಿಗೆ ಬೇಕಾಗಬಹುದಾದ ಅನುದಾನ ಕೋರಲು ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉಪ ಸಮಿತಿಗಳ ಸಂಚಾಲಕರ ಸಭೆ ನಡೆಸಿದರು.

ಈ ವೇಳೆ 10 ವಿವಿಧ ಉಪ ಸಮಿತಿಗಳ ಸಂಚಾಲಕರು ವಿವಿಧ ಚಟುವಟಿಕೆಗಳನ್ನು ನಿರ್ವಹಿಸಲು ತಮ್ಮ ಸಮಿತಿಗಳಿಗೆ ಬೇಕಾಗಬಹುದಾದ ಅಂದಾಜು ವೆಚ್ಚದ ಮಾಹಿತಿಯನ್ನು ಮಂಡಿಸಿದರು.

ಕಲಾತಂಡ ಆಯ್ಕೆ ಉಪ ಸಮಿತಿ ರೂ. 31.45 ಲಕ್ಷ; ಸ್ತಬ್ಧಚಿತ್ರ ಉಪ ಸಮಿತಿ ರೂ. 21 ಲಕ್ಷ; ಪೂರ್ಣಕುಂಭ ಉಪ ಸಮಿತಿ ರೂ. 1 ಲಕ್ಷ; ಸ್ಕೌಟ್ಸ್ ಮತ್ತು ಗೈಡ್ಸ್ ಉಪ ಸಮಿತಿ ರೂ. 1.30 ಲಕ್ಷ; ದೈಹಿಕ ಶಿಕ್ಷಣ ಶಿಕ್ಷಕರ ಮತ್ತು ಎನ್.ಸಿ.ಸಿ. ತಂಡಗಳ ಸಂಯೋಜನಾ ಉಪ ಸಮಿತಿ ರೂ.1.50 ಲಕ್ಷ; ಎತ್ತಿನಗಾಡಿ ಮತ್ತು ಆನೆಗಳ ಸಂಯೋಜನಾ ಉಪ ಸಮಿತಿ ರೂ. 6 ಲಕ್ಷ; ಆಟೋರಿಕ್ಷಾ ಮೆರವಣಿಗೆ ಉಪ ಸಮಿತಿ ರೂ. 1.75 ಲಕ್ಷ; ಸಂಘ-ಸಂಸ್ಥೆಗಳ ಸಂಯೋಜನಾ ಉಪ ಸಮಿತಿ ರೂ. 50 ಸಾವಿರ; ಶಾಲಾ-ಕಾಲೇಜುಗಳ ಸಂಯೋಜನಾ ಉಪ ಸಮಿತಿ ರೂ. 50 ಸಾವಿರ ಹಾಗೂ ಸಮ್ಮೇಳನ ಅಧ್ಯಕ್ಷರ ರಥ, ಜಿಲ್ಲಾ ಅಧ್ಯಕ್ಷರ ರಥ ಸೇರಿದಂತೆ ಇನ್ನಿತರೆ ವೆಚ್ಚ ಸೇರಿ ರೂ. 30 ಲಕ್ಷ ಸೇರಿದಂತೆ ಒಟ್ಟು 95 ಲಕ್ಷ ರೂಪಾಯಿಗಳ ತಾತ್ಕಾಲಿಕ ಅಂದಾಜು ವೆಚ್ಚದ ಮಾಹಿತಿಯನ್ನು ಉಪ ಸಮಿತಿಗಳ ಸಂಚಾಲಕರು ಮಂಡಿಸಿದರು.

ಸಮಿತಿಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಮಧು ಜಿ.ಮಾದೇಗೌಡ ಮಾತನಾಡಿ, ಸಾಕಷ್ಟು ಬಾರಿ ಚರ್ಚಿಸಿ, ಪರಿಷ್ಕರಿಸಿ ಅಂದಾಜು ವೆಚ್ಚವನ್ನು ಸಿದ್ಧಪಡಿಸಲಾಗಿದೆ. ನಮ್ಮ ಸಮಿತಿಗೆ ಎಷ್ಟು ಅನುದಾನವನ್ನು ನೀಡುತ್ತಾರೆ ಎನ್ನುವ ಮಾಹಿತಿಯಿಲ್ಲ. ಆದಾಗ್ಯೂ, ಸಭೆಯು ಅನುಮೋದಿಸಿರುವ ಅಂದಾಜು ಮೊತ್ತದ ಮಾಹಿತಿಯನ್ನು ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಮಂಡಿಸಿ ಹೆಚ್ಚಿನ ಅನುದಾನ ಒದಗಿಸುವಂತೆ ಕೋರಲಾಗುವುದು ಎಂದು ಹೇಳಿದರು.

ಸಮಿತಿಯ ಕಾರ್ಯಾಧ್ಯಕ್ಷ, ನಗರಸಭೆ ಉಪಾಧ್ಯಕ್ಷ ಎಂ.ಪಿ.ಅರುಣ್ ಕುಮಾರ್, ಸದಸ್ಯ ಕಾರ್ಯದರ್ಶಿ ನಂದೀಶ್ ಬಿ.ವಿ. ಸಂಚಾಲಕ ಕಾರಸವಾಡಿ ಮಹದೇವು ಸೇರಿದಂತೆ ವಿವಿಧ ಉಪ ಸಮಿತಿಗಳ ಸಂಚಾಲಕರು ಸಭೆಯಲ್ಲಿ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

2 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

3 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

3 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

3 hours ago