ಮಂಡ್ಯ: 87 ನೇ ಅಖಿಲ ಭಾರತ ಕನ್ಮಡ ಸಾಹಿತ್ಯ ಸಮ್ನೇಳನದಲ್ಲಿ ಪ್ರತಿನಿಧಿಯಾಗಿ ನೊಂದಣಿಯಾಗುವ ಸದಸ್ಯರಿಗೆ ಜಿಲ್ಲೆಯ ಸವಿ ನೆನಪಿಗಾಗಿ ಬೆಲ್ಲವನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೆಲ್ಲ ತಯಾರಿಕ ಎಫ್.ಪಿ.ಓ ಘಟಕಗಳ ಸಭೆ ನಡೆಸಿ ಅವರು ಮಾತನಾಡಿದರು. ಮಂಡ್ಯ ಜಿಲ್ಲೆಯಲ್ಲಿ ಪ್ರತಿನಿಧಿಗಳಿಗೆ ಬೆಲ್ಲ ನೀಡುವುದರಿಂದ ಜನರಿಗೆ ಬೆಲ್ಲದ ಬಗ್ಗೆ ಹೆಚ್ಚಿನ ಪ್ರಚಾರವಾಗುತ್ತದೆ ಎಂದರು.
ಸುಮಾರು 10000 ಜನರು ನೊಂದಣಿಯಾಗುವ ನಿರೀಕ್ಷೆ ಇದೆ. ಪ್ರತಿಬಿಧಿಗಳಿಗೆ ಹಾಗೂ ಗಣ್ಯರಿಗೆ ಅರ್ಧ ಕೆ.ಜಿ ಬೆಲ್ಲ ನೀಡಿದರೆ ಸುಮಾರು 6 ರಿಂದ 7 ಸಾವಿರ ಕೆ.ಜಿ ಬೆಲ್ಲ ಬೇಕಾಗುತ್ತದೆ. ಬೆಲ್ಲ ತಯಾರಿಕೆ ಘಟಕಗಳು ಉತ್ತಮವಾಗಿ ಪ್ಯಾಕೇಜ್ ಮಾಡಿ ಅದರ ಮೇಲೆ ಕನ್ನಡ ಸಾಹಿತ್ಯ ಸಮ್ಮೇಳನದ ಲೋಗೋ ಮುದ್ರಣ ಸೇರಿದಂತೆ ಒಂದೇ ರೀತಿ ಪ್ಯಾಕೇಜ್ ಮಾಡಿ ನೀಡುವಂತೆ ತಿಳಿಸಿದರು.
ಒಂದು ಉತ್ತಮ ದರ ನಿಗದಿ ಮಾಡಿ ಬೆಲ್ಲ ನೀಡಲು ಮುಂದೆ ಬರುವವರು ಕೃಷಿ ಜಂಟಿ ನಿರ್ದೇಶಕರಿಗೆ ಮಾಹಿತಿ ನೀಡುವಂತೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಮಾತನಾಡಿ ಗುಣಮಟ್ಟದ ಬೆಲ್ಲವನ್ನು ನೀಡಿ ಇದರಿಂದ ಜಿಲ್ಲೆಯ ಹೆಸರು ಎಲ್ಲಾ ಕಡೆ ಪಸರಿಸುತ್ತದೆ ಎಂದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಂಟಿ ಕೃಷಿ ನಿರ್ದೇಶಕ ಅಶೋಕ್ ಸೇರಿದಂತೆ ಎಫ್. ಪಿ.ಓ ಘಟಕಗಳ ಮುಖ್ಯಸ್ಥರಾದ ಮಹದೇವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…