Categories: ಮಂಡ್ಯ

ಸಾಹಿತ್ಯ ಸಮ್ಮೇಳನ: ನೊಂದಣಿಯಾಗುವ ಪ್ರತಿನಿಧಿಗಳಿಗೆ ಸಿಹಿ ಬೆಲ್ಲ

ಮಂಡ್ಯ: 87 ನೇ ಅಖಿಲ ಭಾರತ ಕನ್ಮಡ ಸಾಹಿತ್ಯ ಸಮ್ನೇಳನದಲ್ಲಿ ಪ್ರತಿನಿಧಿಯಾಗಿ ನೊಂದಣಿಯಾಗುವ ಸದಸ್ಯರಿಗೆ ಜಿಲ್ಲೆಯ ಸವಿ ನೆನಪಿಗಾಗಿ ಬೆಲ್ಲವನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೆಲ್ಲ ತಯಾರಿಕ ಎಫ್.ಪಿ.ಓ ಘಟಕಗಳ ಸಭೆ ನಡೆಸಿ ಅವರು ಮಾತನಾಡಿದರು. ಮಂಡ್ಯ ಜಿಲ್ಲೆಯಲ್ಲಿ ಪ್ರತಿನಿಧಿಗಳಿಗೆ ಬೆಲ್ಲ ನೀಡುವುದರಿಂದ ಜನರಿಗೆ ಬೆಲ್ಲದ ಬಗ್ಗೆ ಹೆಚ್ಚಿನ ಪ್ರಚಾರವಾಗುತ್ತದೆ ಎಂದರು.

ಸುಮಾರು 10000 ಜನರು ನೊಂದಣಿಯಾಗುವ ನಿರೀಕ್ಷೆ ಇದೆ. ಪ್ರತಿಬಿಧಿಗಳಿಗೆ ಹಾಗೂ ಗಣ್ಯರಿಗೆ ಅರ್ಧ ಕೆ.ಜಿ ಬೆಲ್ಲ ನೀಡಿದರೆ ಸುಮಾರು 6 ರಿಂದ 7 ಸಾವಿರ ಕೆ.ಜಿ ಬೆಲ್ಲ ಬೇಕಾಗುತ್ತದೆ. ಬೆಲ್ಲ ತಯಾರಿಕೆ ಘಟಕಗಳು ಉತ್ತಮವಾಗಿ ಪ್ಯಾಕೇಜ್ ಮಾಡಿ ಅದರ ಮೇಲೆ ಕನ್ನಡ ಸಾಹಿತ್ಯ ಸಮ್ಮೇಳನದ ಲೋಗೋ ಮುದ್ರಣ ಸೇರಿದಂತೆ ಒಂದೇ ರೀತಿ ಪ್ಯಾಕೇಜ್ ಮಾಡಿ ನೀಡುವಂತೆ ತಿಳಿಸಿದರು.

ಒಂದು ಉತ್ತಮ ದರ ನಿಗದಿ ಮಾಡಿ ಬೆಲ್ಲ ನೀಡಲು ಮುಂದೆ ಬರುವವರು ಕೃಷಿ ಜಂಟಿ ನಿರ್ದೇಶಕರಿಗೆ ಮಾಹಿತಿ ನೀಡುವಂತೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಮಾತನಾಡಿ ಗುಣಮಟ್ಟದ ಬೆಲ್ಲವನ್ನು ನೀಡಿ ಇದರಿಂದ ಜಿಲ್ಲೆಯ ಹೆಸರು ಎಲ್ಲಾ ಕಡೆ ಪಸರಿಸುತ್ತದೆ ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಂಟಿ ಕೃಷಿ ನಿರ್ದೇಶಕ ಅಶೋಕ್ ಸೇರಿದಂತೆ ಎಫ್. ಪಿ.ಓ ಘಟಕಗಳ ಮುಖ್ಯಸ್ಥರಾದ ಮಹದೇವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

56 mins ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

58 mins ago

ಹಾರ್ಮುಜ್ ಹಾದಿಯಲ್ಲಿ ಬಟ್ಟಬಯಲಾದ ನೀತಿ ವೈಫಲ್ಯ

ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…

1 hour ago

ಕಡಂಗಮರೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ

ಗ್ರಾಮದಲ್ಲಿ ಆತಂಕ ಸೃಷ್ಟಿಸಿದ ಆನೆಗಳ ಹಿಂಡು; ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ: ಸಮೀಪದ ಅರಣ್ಯ ಪ್ರದೇಶದಿಂದ…

1 hour ago

ಗುಂಡ್ಲುಪೇಟೆ: ಟಿಪ್ಪರ್‌ಗಳಿಗೆ ಬೀಳಬೇಕಿದೆ ಬ್ರೇಕ್

ಒಂದು ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಅಪಘಾತ; ಗಣಿಗಾರಿಕೆ ಹಗಲು-ರಾತ್ರಿ ನಡೆಯುವುದರಿಂದ ಟಿಪ್ಪರ್‌ಗಳ ಸಂಚಾರ ಹೆಚ್ಚಳ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ…

1 hour ago