Categories: ಮಂಡ್ಯ

ಸಾಹಿತ್ಯ ಸಮ್ಮೇಳನ: ನೊಂದಣಿಯಾಗುವ ಪ್ರತಿನಿಧಿಗಳಿಗೆ ಸಿಹಿ ಬೆಲ್ಲ

ಮಂಡ್ಯ: 87 ನೇ ಅಖಿಲ ಭಾರತ ಕನ್ಮಡ ಸಾಹಿತ್ಯ ಸಮ್ನೇಳನದಲ್ಲಿ ಪ್ರತಿನಿಧಿಯಾಗಿ ನೊಂದಣಿಯಾಗುವ ಸದಸ್ಯರಿಗೆ ಜಿಲ್ಲೆಯ ಸವಿ ನೆನಪಿಗಾಗಿ ಬೆಲ್ಲವನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೆಲ್ಲ ತಯಾರಿಕ ಎಫ್.ಪಿ.ಓ ಘಟಕಗಳ ಸಭೆ ನಡೆಸಿ ಅವರು ಮಾತನಾಡಿದರು. ಮಂಡ್ಯ ಜಿಲ್ಲೆಯಲ್ಲಿ ಪ್ರತಿನಿಧಿಗಳಿಗೆ ಬೆಲ್ಲ ನೀಡುವುದರಿಂದ ಜನರಿಗೆ ಬೆಲ್ಲದ ಬಗ್ಗೆ ಹೆಚ್ಚಿನ ಪ್ರಚಾರವಾಗುತ್ತದೆ ಎಂದರು.

ಸುಮಾರು 10000 ಜನರು ನೊಂದಣಿಯಾಗುವ ನಿರೀಕ್ಷೆ ಇದೆ. ಪ್ರತಿಬಿಧಿಗಳಿಗೆ ಹಾಗೂ ಗಣ್ಯರಿಗೆ ಅರ್ಧ ಕೆ.ಜಿ ಬೆಲ್ಲ ನೀಡಿದರೆ ಸುಮಾರು 6 ರಿಂದ 7 ಸಾವಿರ ಕೆ.ಜಿ ಬೆಲ್ಲ ಬೇಕಾಗುತ್ತದೆ. ಬೆಲ್ಲ ತಯಾರಿಕೆ ಘಟಕಗಳು ಉತ್ತಮವಾಗಿ ಪ್ಯಾಕೇಜ್ ಮಾಡಿ ಅದರ ಮೇಲೆ ಕನ್ನಡ ಸಾಹಿತ್ಯ ಸಮ್ಮೇಳನದ ಲೋಗೋ ಮುದ್ರಣ ಸೇರಿದಂತೆ ಒಂದೇ ರೀತಿ ಪ್ಯಾಕೇಜ್ ಮಾಡಿ ನೀಡುವಂತೆ ತಿಳಿಸಿದರು.

ಒಂದು ಉತ್ತಮ ದರ ನಿಗದಿ ಮಾಡಿ ಬೆಲ್ಲ ನೀಡಲು ಮುಂದೆ ಬರುವವರು ಕೃಷಿ ಜಂಟಿ ನಿರ್ದೇಶಕರಿಗೆ ಮಾಹಿತಿ ನೀಡುವಂತೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಮಾತನಾಡಿ ಗುಣಮಟ್ಟದ ಬೆಲ್ಲವನ್ನು ನೀಡಿ ಇದರಿಂದ ಜಿಲ್ಲೆಯ ಹೆಸರು ಎಲ್ಲಾ ಕಡೆ ಪಸರಿಸುತ್ತದೆ ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಂಟಿ ಕೃಷಿ ನಿರ್ದೇಶಕ ಅಶೋಕ್ ಸೇರಿದಂತೆ ಎಫ್. ಪಿ.ಓ ಘಟಕಗಳ ಮುಖ್ಯಸ್ಥರಾದ ಮಹದೇವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

10 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

10 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

15 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago