ಮಂಡ್ಯ: 87 ನೇ ಅಖಿಲ ಭಾರತ ಕನ್ಮಡ ಸಾಹಿತ್ಯ ಸಮ್ನೇಳನದಲ್ಲಿ ಪ್ರತಿನಿಧಿಯಾಗಿ ನೊಂದಣಿಯಾಗುವ ಸದಸ್ಯರಿಗೆ ಜಿಲ್ಲೆಯ ಸವಿ ನೆನಪಿಗಾಗಿ ಬೆಲ್ಲವನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೆಲ್ಲ ತಯಾರಿಕ ಎಫ್.ಪಿ.ಓ ಘಟಕಗಳ ಸಭೆ ನಡೆಸಿ ಅವರು ಮಾತನಾಡಿದರು. ಮಂಡ್ಯ ಜಿಲ್ಲೆಯಲ್ಲಿ ಪ್ರತಿನಿಧಿಗಳಿಗೆ ಬೆಲ್ಲ ನೀಡುವುದರಿಂದ ಜನರಿಗೆ ಬೆಲ್ಲದ ಬಗ್ಗೆ ಹೆಚ್ಚಿನ ಪ್ರಚಾರವಾಗುತ್ತದೆ ಎಂದರು.
ಸುಮಾರು 10000 ಜನರು ನೊಂದಣಿಯಾಗುವ ನಿರೀಕ್ಷೆ ಇದೆ. ಪ್ರತಿಬಿಧಿಗಳಿಗೆ ಹಾಗೂ ಗಣ್ಯರಿಗೆ ಅರ್ಧ ಕೆ.ಜಿ ಬೆಲ್ಲ ನೀಡಿದರೆ ಸುಮಾರು 6 ರಿಂದ 7 ಸಾವಿರ ಕೆ.ಜಿ ಬೆಲ್ಲ ಬೇಕಾಗುತ್ತದೆ. ಬೆಲ್ಲ ತಯಾರಿಕೆ ಘಟಕಗಳು ಉತ್ತಮವಾಗಿ ಪ್ಯಾಕೇಜ್ ಮಾಡಿ ಅದರ ಮೇಲೆ ಕನ್ನಡ ಸಾಹಿತ್ಯ ಸಮ್ಮೇಳನದ ಲೋಗೋ ಮುದ್ರಣ ಸೇರಿದಂತೆ ಒಂದೇ ರೀತಿ ಪ್ಯಾಕೇಜ್ ಮಾಡಿ ನೀಡುವಂತೆ ತಿಳಿಸಿದರು.
ಒಂದು ಉತ್ತಮ ದರ ನಿಗದಿ ಮಾಡಿ ಬೆಲ್ಲ ನೀಡಲು ಮುಂದೆ ಬರುವವರು ಕೃಷಿ ಜಂಟಿ ನಿರ್ದೇಶಕರಿಗೆ ಮಾಹಿತಿ ನೀಡುವಂತೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಮಾತನಾಡಿ ಗುಣಮಟ್ಟದ ಬೆಲ್ಲವನ್ನು ನೀಡಿ ಇದರಿಂದ ಜಿಲ್ಲೆಯ ಹೆಸರು ಎಲ್ಲಾ ಕಡೆ ಪಸರಿಸುತ್ತದೆ ಎಂದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಂಟಿ ಕೃಷಿ ನಿರ್ದೇಶಕ ಅಶೋಕ್ ಸೇರಿದಂತೆ ಎಫ್. ಪಿ.ಓ ಘಟಕಗಳ ಮುಖ್ಯಸ್ಥರಾದ ಮಹದೇವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…