Categories: ಮಂಡ್ಯ

ಸಾಹಿತ್ಯ ಸಮ್ಮೇಳನ: ನೊಂದಣಿಯಾಗುವ ಪ್ರತಿನಿಧಿಗಳಿಗೆ ಸಿಹಿ ಬೆಲ್ಲ

ಮಂಡ್ಯ: 87 ನೇ ಅಖಿಲ ಭಾರತ ಕನ್ಮಡ ಸಾಹಿತ್ಯ ಸಮ್ನೇಳನದಲ್ಲಿ ಪ್ರತಿನಿಧಿಯಾಗಿ ನೊಂದಣಿಯಾಗುವ ಸದಸ್ಯರಿಗೆ ಜಿಲ್ಲೆಯ ಸವಿ ನೆನಪಿಗಾಗಿ ಬೆಲ್ಲವನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೆಲ್ಲ ತಯಾರಿಕ ಎಫ್.ಪಿ.ಓ ಘಟಕಗಳ ಸಭೆ ನಡೆಸಿ ಅವರು ಮಾತನಾಡಿದರು. ಮಂಡ್ಯ ಜಿಲ್ಲೆಯಲ್ಲಿ ಪ್ರತಿನಿಧಿಗಳಿಗೆ ಬೆಲ್ಲ ನೀಡುವುದರಿಂದ ಜನರಿಗೆ ಬೆಲ್ಲದ ಬಗ್ಗೆ ಹೆಚ್ಚಿನ ಪ್ರಚಾರವಾಗುತ್ತದೆ ಎಂದರು.

ಸುಮಾರು 10000 ಜನರು ನೊಂದಣಿಯಾಗುವ ನಿರೀಕ್ಷೆ ಇದೆ. ಪ್ರತಿಬಿಧಿಗಳಿಗೆ ಹಾಗೂ ಗಣ್ಯರಿಗೆ ಅರ್ಧ ಕೆ.ಜಿ ಬೆಲ್ಲ ನೀಡಿದರೆ ಸುಮಾರು 6 ರಿಂದ 7 ಸಾವಿರ ಕೆ.ಜಿ ಬೆಲ್ಲ ಬೇಕಾಗುತ್ತದೆ. ಬೆಲ್ಲ ತಯಾರಿಕೆ ಘಟಕಗಳು ಉತ್ತಮವಾಗಿ ಪ್ಯಾಕೇಜ್ ಮಾಡಿ ಅದರ ಮೇಲೆ ಕನ್ನಡ ಸಾಹಿತ್ಯ ಸಮ್ಮೇಳನದ ಲೋಗೋ ಮುದ್ರಣ ಸೇರಿದಂತೆ ಒಂದೇ ರೀತಿ ಪ್ಯಾಕೇಜ್ ಮಾಡಿ ನೀಡುವಂತೆ ತಿಳಿಸಿದರು.

ಒಂದು ಉತ್ತಮ ದರ ನಿಗದಿ ಮಾಡಿ ಬೆಲ್ಲ ನೀಡಲು ಮುಂದೆ ಬರುವವರು ಕೃಷಿ ಜಂಟಿ ನಿರ್ದೇಶಕರಿಗೆ ಮಾಹಿತಿ ನೀಡುವಂತೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಮಾತನಾಡಿ ಗುಣಮಟ್ಟದ ಬೆಲ್ಲವನ್ನು ನೀಡಿ ಇದರಿಂದ ಜಿಲ್ಲೆಯ ಹೆಸರು ಎಲ್ಲಾ ಕಡೆ ಪಸರಿಸುತ್ತದೆ ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಂಟಿ ಕೃಷಿ ನಿರ್ದೇಶಕ ಅಶೋಕ್ ಸೇರಿದಂತೆ ಎಫ್. ಪಿ.ಓ ಘಟಕಗಳ ಮುಖ್ಯಸ್ಥರಾದ ಮಹದೇವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

3 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

3 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

3 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

3 hours ago