ಮಂಡ್ಯ

ಲೋಕಸಭೆ ಚುನಾವಣೆ: ಚುನಾವಣೆ ಕರ್ತವ್ಯನಿರತ ಅಧಿಕಾರಿಗಳಿಂದ‌ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ !

 

ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು/ಸಿಬ್ಬಂದಿಗಳಿಗೆ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಲು ಮಂಡ್ಯ ವಿಶ್ವವಿದ್ಯಾಲಯದಲ್ಲಿ ಅಂಚೆ ಮತದಾನದ ವ್ಯವಸ್ಥೆ ಮಾಡಲಾಗಿದೆ.

ಅನ್ಯ ಲೋಕಸಭಾ‌ ಕ್ಷೇತ್ರದ ಮತದಾರರಾಗಿ, ಮಂಡ್ಯ ಜಿಲ್ಲಾ ಲೋಕಸಭಾ ವ್ಯಾಪ್ತಿಯಲ್ಲಿ ಚುನಾವಣೆ ಕಾರ್ಯನಿರ್ವಹಿಸುತ್ತಿರುವವರಿಗೆ ಪೋಸ್ಟಲ್‌ ಬ್ಯಾಲೆಟ್ ಮತದಾನದ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 3520 ಅಧಿಕಾರಿಗಳು/ ಸಿಬ್ಬಂದಿಗಳಿಗೆ ಏಪ್ರಿಲ್ 20, 21 ಹಾಗೂ 22 ರಂದು ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಬಾರಿ ಅಧಿಕಾರಿ/ ಸಿಬ್ಬಂದಿಗಳಿಗೆ ಅಂಚೆ ಮೂಲಕ ಯಾವುದೇ ಪೋಸ್ಟಲ್ ಬ್ಯಾಲೆಟ್ ಕಳುಹಿಸಿಕೊಡುವ ವ್ಯವಸ್ಥೆ ಇರುವುದಿಲ್ಲ. ಎಲ್ಲರೂ ಅಂಚೆ ಮತದಾನ ಕೇಂದ್ರದಲ್ಲೇ ಮತದಾನ ಮಾಡಬೇಕಿರುತ್ತದೆ‌.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರಾದ ಅಪರ‌ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಇಂದು ಅಂಚೆ ಮತದಾನ ಕೇಂದ್ರದಲ್ಲಿ ಪೋಸ್ಟಲ್‌ ಬ್ಯಾಲೆಟ್‌ ಮೂಲಕ ಮತದಾನ ಮಾಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿ ಮತವು ಅಮೂಲ್ಯವಾಗಿದೆ, ಯಾವುದೇ ಮತದಾರರು ಮತದಾನದಿಂದ ವಂಚಿತರಾಗಬಾರದು ಎಂದು‌ ಅಧಿಕಾರಿ/ ಸಿಬ್ಬಂದಿಗಳಿಗೆ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ ಮಾಡಲಾಗಿದೆ. ತಪ್ಪದೇ ಮತದಾನ ಮಾಡಿ ಎಂದರು.

ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ಸ್ವಾಮಿ ಹಾಗೂ ಮಂಡ್ಯ ಉಪವಿಭಾಗಾಧಿಕಾರಿ ಮಹೇಶ್ ಮತದಾನ ಮಾಡಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

6 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

6 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

7 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

7 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

7 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

7 hours ago