ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು/ಸಿಬ್ಬಂದಿಗಳಿಗೆ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಲು ಮಂಡ್ಯ ವಿಶ್ವವಿದ್ಯಾಲಯದಲ್ಲಿ ಅಂಚೆ ಮತದಾನದ ವ್ಯವಸ್ಥೆ ಮಾಡಲಾಗಿದೆ.
ಅನ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿ, ಮಂಡ್ಯ ಜಿಲ್ಲಾ ಲೋಕಸಭಾ ವ್ಯಾಪ್ತಿಯಲ್ಲಿ ಚುನಾವಣೆ ಕಾರ್ಯನಿರ್ವಹಿಸುತ್ತಿರುವವರಿಗೆ ಪೋಸ್ಟಲ್ ಬ್ಯಾಲೆಟ್ ಮತದಾನದ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 3520 ಅಧಿಕಾರಿಗಳು/ ಸಿಬ್ಬಂದಿಗಳಿಗೆ ಏಪ್ರಿಲ್ 20, 21 ಹಾಗೂ 22 ರಂದು ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಬಾರಿ ಅಧಿಕಾರಿ/ ಸಿಬ್ಬಂದಿಗಳಿಗೆ ಅಂಚೆ ಮೂಲಕ ಯಾವುದೇ ಪೋಸ್ಟಲ್ ಬ್ಯಾಲೆಟ್ ಕಳುಹಿಸಿಕೊಡುವ ವ್ಯವಸ್ಥೆ ಇರುವುದಿಲ್ಲ. ಎಲ್ಲರೂ ಅಂಚೆ ಮತದಾನ ಕೇಂದ್ರದಲ್ಲೇ ಮತದಾನ ಮಾಡಬೇಕಿರುತ್ತದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರಾದ ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಇಂದು ಅಂಚೆ ಮತದಾನ ಕೇಂದ್ರದಲ್ಲಿ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿ ಮತವು ಅಮೂಲ್ಯವಾಗಿದೆ, ಯಾವುದೇ ಮತದಾರರು ಮತದಾನದಿಂದ ವಂಚಿತರಾಗಬಾರದು ಎಂದು ಅಧಿಕಾರಿ/ ಸಿಬ್ಬಂದಿಗಳಿಗೆ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ ಮಾಡಲಾಗಿದೆ. ತಪ್ಪದೇ ಮತದಾನ ಮಾಡಿ ಎಂದರು.
ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ಸ್ವಾಮಿ ಹಾಗೂ ಮಂಡ್ಯ ಉಪವಿಭಾಗಾಧಿಕಾರಿ ಮಹೇಶ್ ಮತದಾನ ಮಾಡಿದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…