ಮಂಡ್ಯ

ಲೋಕಸಭೆ ಚುನಾವಣೆ: ಚುನಾವಣೆ ಕರ್ತವ್ಯನಿರತ ಅಧಿಕಾರಿಗಳಿಂದ‌ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ !

 

ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು/ಸಿಬ್ಬಂದಿಗಳಿಗೆ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಲು ಮಂಡ್ಯ ವಿಶ್ವವಿದ್ಯಾಲಯದಲ್ಲಿ ಅಂಚೆ ಮತದಾನದ ವ್ಯವಸ್ಥೆ ಮಾಡಲಾಗಿದೆ.

ಅನ್ಯ ಲೋಕಸಭಾ‌ ಕ್ಷೇತ್ರದ ಮತದಾರರಾಗಿ, ಮಂಡ್ಯ ಜಿಲ್ಲಾ ಲೋಕಸಭಾ ವ್ಯಾಪ್ತಿಯಲ್ಲಿ ಚುನಾವಣೆ ಕಾರ್ಯನಿರ್ವಹಿಸುತ್ತಿರುವವರಿಗೆ ಪೋಸ್ಟಲ್‌ ಬ್ಯಾಲೆಟ್ ಮತದಾನದ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 3520 ಅಧಿಕಾರಿಗಳು/ ಸಿಬ್ಬಂದಿಗಳಿಗೆ ಏಪ್ರಿಲ್ 20, 21 ಹಾಗೂ 22 ರಂದು ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಬಾರಿ ಅಧಿಕಾರಿ/ ಸಿಬ್ಬಂದಿಗಳಿಗೆ ಅಂಚೆ ಮೂಲಕ ಯಾವುದೇ ಪೋಸ್ಟಲ್ ಬ್ಯಾಲೆಟ್ ಕಳುಹಿಸಿಕೊಡುವ ವ್ಯವಸ್ಥೆ ಇರುವುದಿಲ್ಲ. ಎಲ್ಲರೂ ಅಂಚೆ ಮತದಾನ ಕೇಂದ್ರದಲ್ಲೇ ಮತದಾನ ಮಾಡಬೇಕಿರುತ್ತದೆ‌.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರಾದ ಅಪರ‌ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಇಂದು ಅಂಚೆ ಮತದಾನ ಕೇಂದ್ರದಲ್ಲಿ ಪೋಸ್ಟಲ್‌ ಬ್ಯಾಲೆಟ್‌ ಮೂಲಕ ಮತದಾನ ಮಾಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿ ಮತವು ಅಮೂಲ್ಯವಾಗಿದೆ, ಯಾವುದೇ ಮತದಾರರು ಮತದಾನದಿಂದ ವಂಚಿತರಾಗಬಾರದು ಎಂದು‌ ಅಧಿಕಾರಿ/ ಸಿಬ್ಬಂದಿಗಳಿಗೆ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ ಮಾಡಲಾಗಿದೆ. ತಪ್ಪದೇ ಮತದಾನ ಮಾಡಿ ಎಂದರು.

ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ಸ್ವಾಮಿ ಹಾಗೂ ಮಂಡ್ಯ ಉಪವಿಭಾಗಾಧಿಕಾರಿ ಮಹೇಶ್ ಮತದಾನ ಮಾಡಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

3 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

4 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

4 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

10 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

10 hours ago