ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು/ಸಿಬ್ಬಂದಿಗಳಿಗೆ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಲು ಮಂಡ್ಯ ವಿಶ್ವವಿದ್ಯಾಲಯದಲ್ಲಿ ಅಂಚೆ ಮತದಾನದ ವ್ಯವಸ್ಥೆ ಮಾಡಲಾಗಿದೆ.
ಅನ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿ, ಮಂಡ್ಯ ಜಿಲ್ಲಾ ಲೋಕಸಭಾ ವ್ಯಾಪ್ತಿಯಲ್ಲಿ ಚುನಾವಣೆ ಕಾರ್ಯನಿರ್ವಹಿಸುತ್ತಿರುವವರಿಗೆ ಪೋಸ್ಟಲ್ ಬ್ಯಾಲೆಟ್ ಮತದಾನದ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 3520 ಅಧಿಕಾರಿಗಳು/ ಸಿಬ್ಬಂದಿಗಳಿಗೆ ಏಪ್ರಿಲ್ 20, 21 ಹಾಗೂ 22 ರಂದು ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಬಾರಿ ಅಧಿಕಾರಿ/ ಸಿಬ್ಬಂದಿಗಳಿಗೆ ಅಂಚೆ ಮೂಲಕ ಯಾವುದೇ ಪೋಸ್ಟಲ್ ಬ್ಯಾಲೆಟ್ ಕಳುಹಿಸಿಕೊಡುವ ವ್ಯವಸ್ಥೆ ಇರುವುದಿಲ್ಲ. ಎಲ್ಲರೂ ಅಂಚೆ ಮತದಾನ ಕೇಂದ್ರದಲ್ಲೇ ಮತದಾನ ಮಾಡಬೇಕಿರುತ್ತದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರಾದ ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಇಂದು ಅಂಚೆ ಮತದಾನ ಕೇಂದ್ರದಲ್ಲಿ ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿ ಮತವು ಅಮೂಲ್ಯವಾಗಿದೆ, ಯಾವುದೇ ಮತದಾರರು ಮತದಾನದಿಂದ ವಂಚಿತರಾಗಬಾರದು ಎಂದು ಅಧಿಕಾರಿ/ ಸಿಬ್ಬಂದಿಗಳಿಗೆ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ ಮಾಡಲಾಗಿದೆ. ತಪ್ಪದೇ ಮತದಾನ ಮಾಡಿ ಎಂದರು.
ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ಸ್ವಾಮಿ ಹಾಗೂ ಮಂಡ್ಯ ಉಪವಿಭಾಗಾಧಿಕಾರಿ ಮಹೇಶ್ ಮತದಾನ ಮಾಡಿದರು.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…