ಮಂಡ್ಯ

Loksabha Election Results 2024: ಮಂಡ್ಯ ಫಲಿತಾಂಶದ ಬಗ್ಗೆ ಚಲುವರಾಯಸ್ವಾಮಿಯ ಮೊದಲ ಪ್ರತಿಕ್ರಿಯೆ

ಮಂಡ್ಯ: ಲೋಕಸಭೆ ಚುನಾವಣೆಯ ಫಳಿತಾಂಶ ಇಂದು(ಜೂನ್‌ ೪) ಪ್ರಕಟವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಗೆದ್ದಿದ್ದು, ಕಾಂಗ್ರೆಸ್‌ ಹೀನಾಯ ಸೋಲು ಕಂಡಿದೆ.  ಈ ಬಗ್ಗೆ ಮಂಡ್ಯ  ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವರು,  ಮಂಡ್ಯ ಜಿಲ್ಲೆಯಲ್ಲಿ ನಾವು ಸೋಲು ಗೆಲುವುಗಳನ್ನು ನೋಡಿದ್ದೇವೆ . ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪಿಗೆ ತಲೆಬಾಗುತ್ತೇವೆ‌‌‌‌‌ ಎಂದು ತಿಳಿಸಿದ್ದಾರೆ.

ಹಿಂದೆ ಜೆ.ಡಿ.ಎಸ್ ನ ಎಂಟೂ ಜನರನ್ನು ಗೆಲಿಸಿಕೊಟ್ಟು ನಂತರ ಐದು ವರ್ಷ ನಿರಾಸೆ ಹೊಂದಿದ್ದ ಜನ ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಏಳು ಶಾಸಕರನ್ನು ಗೆಲ್ಲಿಸಿದ್ದಾರೆ.
ಒಂದು ವರ್ಷ ನಾವೂ ಅವರ ಸೇವೆಯನ್ನು ಮಾಡಿದ್ದೇವೆ. ನಮ್ಮ ಪಕ್ಷ, ನಮ್ಮ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಕೊಟ್ಟರೂ, ಈ ಲೋಕಸಭಾ ಚುನಾವಣೆಯಲ್ಲಿ ತೀರ್ಪನ್ನು ನಮ್ಮ ವಿರುದ್ಧ ಕೊಟ್ಟಿದ್ದಾರೆ ಜಿಲ್ಲೆಯಲ್ಲಿ ಜನರ ತೀರ್ಪಿಗೆ ತಲೆಬಾಗುತ್ತೇವೆ ಎಂದಿದ್ದಾರೆ.

ಅವರು ಏನು ಭರವಸೆ ಕೊಟ್ಟಿದ್ದಾರೆ ರಾಷ್ಟ್ರಮಟ್ಟದಿಂದ ನಾವು ಏನೇನೋ ಭರವಸೆಗಳನ್ನ ತರುತ್ತೇವೆ ಎಂದು ಹೇಳಿದ್ದಾರೆ ನಾವು ಸಂತೋಷವಾಗಿ ಅವು ಈಡೇರಿಸೋದನ್ನ ಕಾದುನೋಡುತ್ತೇವೆ..
ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಮಾಧ್ಯಮ ಸಮೀಕ್ಷೆ ಸುಳ್ಳಾಗಿದೆ

ರಾಜ್ಯದ ಜನರು ನೀಡಿದ ತೀರ್ಪು ಸ್ವಾಗತಿಸುತ್ತೇವೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ ಒಂದು‌ ಸ್ಥಾನ ಗೆದ್ದಿತ್ತು .ಇದೀಗ 9 ಸ್ಥಾನ ಜಯಿಸಿದ್ದೇವೆ. ಇದು ಕಾಂಗ್ರೇಸ್ ಪಕ್ಷವನ್ನು ಜನ ಕಳೆದ ಬಾರಿಗಿಂತ ಹೆಚ್ಚು ಮೆಚ್ಚಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಕೃಷಿ ಸಚಿವರು ಅಭಿಪ್ರಾಯ ‌ಪಟ್ಟಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ಇಂಡಿಯಾ ಒಕ್ಕೂಟ ಉತ್ತಮ ಸಾಧನೆ ಮಾಡಿದೆ . ಮಾಧ್ಯಮಗಳ ಸಮೀಕ್ಷೆ ಸುಳ್ಳಾಗಿದೆ . ಜನರಿಗೆ ಕಾಂಗ್ರೇಸ್ ನೇತೃತ್ವದ ಮೈತ್ರಿ ಒಕ್ಕೂಟದ ಬಗ್ಗೆ ಒಲವು ಹೆಚ್ಚುತ್ತಿದೆ ಮುಂದೊಂದು ದಿನ ಕೇಂದ್ರದಲ್ಲೂ ಕಾಂಗ್ರೆಸ್ ನೇತೃತ್ವದ ಸರ್ಕಾರ ಬರಲಿದೆ  ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

24 mins ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

48 mins ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

60 mins ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

2 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

5 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

6 hours ago