ಮಂಡ್ಯ

ಮಂಡ್ಯ: ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ ಕಾಂಗ್ರೆಸ್‌ ಗೆಲುವು ಅಷ್ಟೇ ಸತ್ಯ: ಸಿದ್ದರಾಮಯ್ಯ

ಮಂಡ್ಯ: ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ನಡೆದ ಅಭೂತಪೂರ್ವ ಪ್ರಜಾಧ್ವನಿ-2 ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸಾಗರವನ್ನು ಉದ್ದೇಶಿಸಿ ಮಾತನಾಡಿದ ಅವರು ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆ ಶಾಸಕರು. ಅವರು ಅಲ್ಲೇ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಬಹುದಿತ್ತು. ಆದರೆ ಸೋಲಿನ ಭಯದಿಂದ ಇಲ್ಲಿಗೆ ಬಂದು ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇಲ್ಲೂ ಖಚಿತವಾಗಿ ಸೋಲಿಸಲು ಮಂಡ್ಯ ಜಿಲ್ಲೆಯ ಜನತೆ ನಿರ್ಧರಿಸಿದ್ದಾರೆ. ಹೀಗಾಗಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಸ್ಪಷ್ಟವಾಗಿ ನುಡಿದರು.

ನರೇಂದ್ರ ಮೋದಿಯವರ ಅಚ್ಚೆ ದಿನ್ 10 ವರ್ಷ ಕಳೆದರೂ ಭಾರತೀಯರಿಗೆ ಬಂದಿಲ್ಲ. ರಾಜ್ಯದ ಜನತೆಗೆ ಅಚ್ಚೆ ದಿನ್ ಕಾಣಿಸಿಯೇ ಇಲ್ಲ. ಮೋದಿಯವರ ಕಾರಣದಿಂದ ಏರಿಕೆಯಾಗಿದ್ದ ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ-ಕಾಳು, ಅಡುಗೆ ಎಣ್ಣೆ ಸೇರಿ ಎಲ್ಲದರ ಬೆಲೆ ಏರಿಕೆ ನೀತಿಯಿಂದ ಹೈರಾಣಾಗಿದ್ದ ರಾಜ್ಯದ ಜನರ ಬದುಕಿನ‌ ಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಿಂದ ರಾಜ್ಯದ ಪ್ರತಿ ಕುಟುಂಬಗಳಿಗೆ, ಪ್ರತಿ ತಿಂಗಳು 5 ರಿಂದ 6 ಸಾವಿರ ರೂಪಾಯಿ ಒದಗಿ ಬರುವಂತಹ ನೆರವಿನ ಕಾರ್ಯಕ್ರಮಗಳನ್ನು ನೀಡಿದ್ದೇವೆ ಎಂದು ತಮ್ಮ ಯೋಜನೆಗಳನ್ನು ಪ್ರಶಂಸಿಸಿಕೊಂಡರು.

ರಾಜ್ಯದ ಜನರಿಗೆ ಅನ್ನಭಾಗ್ಯದ ಅಕ್ಕಿ ಕೊಡದಂತೆ ಮೋದಿಯವರ ಕೇಂದ್ರ ಸರ್ಕಾರ ತೊಂದರೆ ಕೊಟ್ಟರೂ ಕೂಡ ನಾವು ಅಕ್ಕಿ ಜೊತೆಗೆ ಹಣವನ್ನೂ ನಮ್ಮ ಜನರ ಬದುಕಿಗೆ ಕೊಡುತ್ತಿದ್ದೇವೆ ಎಂದರು.

ಕೊಟ್ಟ ಮಾತಿನಂತೆ ನಡೆದುಕೊಂಡವರು ಯಾರು ಎನ್ನುವುದನ್ನು ನಿಮ್ಮ ಹೃದಯಕ್ಕೆ ಕೇಳಿಕೊಳ್ಳಿ. ಅವರಿಗೆ ಮಾತ್ರ ನಿಮ್ಮ ಮತ ನೀಡಿ. ರಾಜ್ಯದಲ್ಲಿ ಬಿಜೆಪಿಯಿಂದ ಗೆದ್ದ 27 ಸಂಸದರು ರಾಜ್ಯದ ಸಮಸ್ಯೆಗಳ ಬಗ್ಗೆ ನೆಪಕ್ಕೂ ಧ್ವನಿ ಎತ್ತದೇ ರಾಜ್ಯದ ಜನರಿಂದ ಪಡೆದ ಮತಕ್ಕೆ ಅವಮಾನ ಮಾಡಿದರು. ಈ ಅವಮಾನಕ್ಕೆ ತಕ್ಕ ಉತ್ತರ ನೀಡಿ ರಾಜ್ಯದ ಜನತೆಯ ಪರವಾಗಿ ಧ್ವನಿ ಎತ್ತುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಮಂಡ್ಯ ಜನತೆಯ ಸ್ವಾಭಿಮಾನಿ ತಾಕತ್ತನ್ನು ತೋರಿಸಿ ಎಂದು ಕರೆ ನೀಡಿದರು.

ಶ್ರೀರಾಮನವಮಿಯ ಶುಭಾಶಯ ಕೋರಿದ ಸಿಎಂ

ಇದೇ ಸಂದರ್ಭದಲ್ಲಿ ಮಂಡ್ಯದ ಜನತೆಗೆ ಮತ್ತು ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಅವರು ರಾಮನವಮಿಯ ಶುಭಾಶಯವನ್ನು ಕೋರಿ ಎಲ್ಲರೂ ಭಕ್ತಿ ಶ್ರದ್ದೆ ಮತ್ತು ಸಂಭ್ರಮದಿಂದ ರಾಮನವಮಿ ಆಚರಿಸುವಂತೆ ಕೋರಿದರು.

ಭಾವನಾತ್ಮಕವಾಗಿ ಕೆರಳಿಸಿ ವಂಚಿಸುವವರಿಗೆ ಮಾನ್ಯತೆ ಕೊಡಬೇಡಿ

ಭಾರತೀಯರ ಭಾವನೆಗಳನ್ನು ಭಾವನಾತ್ಮಕವಾಗಿ ಕೆರಳಿಸಿ, ನಮ್ಮ ಬದುಕಿಗೆ ವಂಚಿಸುವವರಿಗೆ ಮಾನ್ಯತೆ ಕೊಡಬೇಡಿ. ಜನರ ಕಷ್ಟಗಳಿಗೆ ಸ್ಪಂದಿಸುವ ನಮಗೆ ಶಕ್ತಿ ಕೊಡಿ. ನೀವು ಕೊಟ್ಟ ಶಕ್ತಿ ನಿಮ್ಮ ಮನೆ ಬಾಗಿಲಿಗೆ ಉತ್ತಮ ಕಾರ್ಯಕ್ರಮಗಳ ರೂಪದಲ್ಲಿ ವಾಪಾಸ್ ಬರುತ್ತದೆ ಎಂದು ಘೋಷಿಸಿದರು.

ಈ ಸಂದರ್ಭದಲ್ಲಿ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ಸೇರಿ ಮೈಸೂರು, ಮಂಡ್ಯ ಜಿಲ್ಲೆಯ ಶಾಸಕರುಗಳು, ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

7 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

11 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago