ಮಂಡ್ಯ

ಲೋಕಸಭೆ ಚುನಾವಣೆ 2024: ಮೈತ್ರಿ ವಿರುದ್ಧ ಡಿಕೆಶಿ ವಾಗ್ದಾಳಿ

ಮಂಡ್ಯ: ಬಿಜೆಪಿ-ಜೆಡಿಎಸ್‌ನವರು ರಾಜ್ಯದ ಜನತೆಗೆ ಏನನ್ನೂ ಮಾಡಲಿಲ್ಲ. ನಿಮ್ಮ ಕಷ್ಟಕ್ಕೆ ಸ್ಪಂದಿಸಿಲ್ಲ ಬದಲಿಗೆ ಭಾವನೆಗಳ ಜೊತೆ ಆಟವಾಡುತ್ತಿದ್ದಾರೆ. ಮೈತ್ರಿಯನ್ನು ಜಿಲ್ಲೆಯಿಂದ ಕಿತ್ತೊಗಿಯಿರಿ ಎಂದು ಉಪ ಮುಖ್ಯಮುಂತ್ರಿ ಡಿ.ಕೆ ಶಿವಕುಮಾರ್‌ ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದರು.

ನರಗದಲ್ಲಿ ನಡೆದ ಪ್ರಜಾಧ್ವನಿ 2 ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಾಂಗ್ರೆಸ್‌ ಬಡವರು ಮತ್ತು ರೈತರ ಕಷ್ಟದ ಜೊತೆ ಹೆಜ್ಜೆ ಹಾಕುತ್ತಿದೆ. ಐದು ಗ್ಯಾರಂಟಿ ನೀಡಿ ನಿಮ್ಮ ಬದುಕನ್ನು ಹಸನು ಮಾಡುತ್ತಿದೆ. ಮಂಡ್ಯ ಗೆದ್ರೆ ಇಂಡಿಯಾ ಗೆಲ್ಲುತ್ತೇವೆ ಎನ್ನುವ ವಿಸ್ವಾಸದಿಂದ ರಾಹುಲ್‌ ಗಾಂಧಿ ಜಿಲ್ಲೆಗೆ ಬಂದಿದ್ದಾರೆ ಅವರಿಗೆ ಶಕ್ತಿ ತುಂಬಿರಿ ಎಂದರು.

ಮಂಡ್ಯ ಜಿಲ್ಲಾ ಜನರ ಕಷ್ಟಕ್ಕೂ ಆಗದ ಸುಖಕ್ಕೂ ಆಗದ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ಯಾವ ವಿಶೇಷ ಯೋಜನೆಯನ್ನೂ ನೀಡಿಲ್ಲ. ಬಿಜೆಪಿಯ ʻಬಿ ಟೀಮ್‌ʼ ಆಗಿದ್ದ ಜೆಡಿಎಸ್‌ ಇದೀಗ ʻಎ ಟೀಮ್‌ʼ ಆಗಿದೆ ಎಂದು ಮೈತ್ರಿಯನ್ನು ಟೀಕಿಸಿದರು.

ಜಿಲ್ಲೆಗೆ ನೀವೇ ಅಭ್ಯರ್ಥಿಯಾಗಿ ಬಂದಿದ್ದೀರಲ್ಲ ಯಾಕೆ ಸ್ವಾಮಿ, ನಿಮ್ಮನ್ನು ಮುಖ್ಯಮಂತ್ರಿ ಮಾಡಿದ ಜನರು ಇರಲಿಲ್ವ, ನಿಮ್ಮನ್ನು ಶಾಸಕ ಮಾಡಿದ ನಾಯಕ ಇರಲಿಲ್ವ, ಅವರಿಗೆ ಅವಕಾಶ ಕೊಡದೇ ನೀವೇ ಬಂದಿದ್ದಿರಲ್ಲ, ಅವರನ್ನೇಕೆ ತುಳಿಯುತ್ತೀದ್ದೀರ ಎಂದು ಕುಮಾರಸ್ವಾಮಿಯನ್ನು ಪ್ರಶ್ನಿಸಿದರು.

ಕಾಂಗ್ರೆಸ್‌ ಈ ಅವಧಿಯಲ್ಲೇ ರೈತರಿಗೋಸ್ಕರ ಮೇಕೆದಾಟು ಯೋಜನೆ ಮಾಡುವ ಸಂಕಲ್ಪ ಮಾಡಿದೆ. ಐದು ಬೆರಳು ಸೇರಿ ಅಂಗೈಯಾಗಿ ಕೈಗಟ್ಟಿಯಾಯ್ತು, ಹಾಗೆಯೇ ಐದು ಗ್ಯಾರಂಟಿ ಸೇರಿ ಜಿಲ್ಲೆ ಹಾಗೂ ರಾಜ್ಯ ಗಟ್ಟಿಯಾಗಿದೆ. ನಿಮ್ಮ ಜಿಲ್ಲೆಯ ಮಗ ವೆಂಕಟರಮಣೇಗೌಡ(ಸ್ಟಾರ್ ಚಂದ್ರು)ಗೆ ಮತ ನೀಡಿ ಆಶೀರ್ವದಿಸಿ ಎಂದು ಮನವಿ ಮಾಡಿದರು.

ಮಂಡ್ಯದಲ್ಲಿ ಸ್ಪರ್ಧಿಸಿರುವುದು ಸ್ಟಾರ್ ಚಂದ್ರು ಅಲ್ಲ, ನಾನು, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಎನ್ನುವುದನ್ನು ಜಿಲ್ಲೆಯ ಜನ ಗಮನದಲ್ಲಿಟ್ಟುಕೊಳ್ಳಬೇಕು. ಕುಮಾರಸ್ವಾಮಿನ ಜಿಲ್ಲೆಯಿಂದಲ್ಲ ರಾಜ್ಯದಿಂಲೇ ಗೋ ಬ್ಯಾಕ್‌ ಮಾಡಬೇಕು. ಜಿಲ್ಲೆಯ ತಾಯಂದಿರು ಕಾಂಗ್ರೆಸ್‌ ಅಭ್ಯರ್ಥಿಗೆ ಶಕ್ತಿ ತುಂಬಿರಿ ಎಂದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

1 hour ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

2 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

2 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

3 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

3 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

3 hours ago