ಮಂಡ್ಯ

ಲೋಕಸಭೆ ಚುನಾವಣೆ 2024: ಮೈತ್ರಿ ವಿರುದ್ಧ ಡಿಕೆಶಿ ವಾಗ್ದಾಳಿ

ಮಂಡ್ಯ: ಬಿಜೆಪಿ-ಜೆಡಿಎಸ್‌ನವರು ರಾಜ್ಯದ ಜನತೆಗೆ ಏನನ್ನೂ ಮಾಡಲಿಲ್ಲ. ನಿಮ್ಮ ಕಷ್ಟಕ್ಕೆ ಸ್ಪಂದಿಸಿಲ್ಲ ಬದಲಿಗೆ ಭಾವನೆಗಳ ಜೊತೆ ಆಟವಾಡುತ್ತಿದ್ದಾರೆ. ಮೈತ್ರಿಯನ್ನು ಜಿಲ್ಲೆಯಿಂದ ಕಿತ್ತೊಗಿಯಿರಿ ಎಂದು ಉಪ ಮುಖ್ಯಮುಂತ್ರಿ ಡಿ.ಕೆ ಶಿವಕುಮಾರ್‌ ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದರು.

ನರಗದಲ್ಲಿ ನಡೆದ ಪ್ರಜಾಧ್ವನಿ 2 ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಾಂಗ್ರೆಸ್‌ ಬಡವರು ಮತ್ತು ರೈತರ ಕಷ್ಟದ ಜೊತೆ ಹೆಜ್ಜೆ ಹಾಕುತ್ತಿದೆ. ಐದು ಗ್ಯಾರಂಟಿ ನೀಡಿ ನಿಮ್ಮ ಬದುಕನ್ನು ಹಸನು ಮಾಡುತ್ತಿದೆ. ಮಂಡ್ಯ ಗೆದ್ರೆ ಇಂಡಿಯಾ ಗೆಲ್ಲುತ್ತೇವೆ ಎನ್ನುವ ವಿಸ್ವಾಸದಿಂದ ರಾಹುಲ್‌ ಗಾಂಧಿ ಜಿಲ್ಲೆಗೆ ಬಂದಿದ್ದಾರೆ ಅವರಿಗೆ ಶಕ್ತಿ ತುಂಬಿರಿ ಎಂದರು.

ಮಂಡ್ಯ ಜಿಲ್ಲಾ ಜನರ ಕಷ್ಟಕ್ಕೂ ಆಗದ ಸುಖಕ್ಕೂ ಆಗದ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ಯಾವ ವಿಶೇಷ ಯೋಜನೆಯನ್ನೂ ನೀಡಿಲ್ಲ. ಬಿಜೆಪಿಯ ʻಬಿ ಟೀಮ್‌ʼ ಆಗಿದ್ದ ಜೆಡಿಎಸ್‌ ಇದೀಗ ʻಎ ಟೀಮ್‌ʼ ಆಗಿದೆ ಎಂದು ಮೈತ್ರಿಯನ್ನು ಟೀಕಿಸಿದರು.

ಜಿಲ್ಲೆಗೆ ನೀವೇ ಅಭ್ಯರ್ಥಿಯಾಗಿ ಬಂದಿದ್ದೀರಲ್ಲ ಯಾಕೆ ಸ್ವಾಮಿ, ನಿಮ್ಮನ್ನು ಮುಖ್ಯಮಂತ್ರಿ ಮಾಡಿದ ಜನರು ಇರಲಿಲ್ವ, ನಿಮ್ಮನ್ನು ಶಾಸಕ ಮಾಡಿದ ನಾಯಕ ಇರಲಿಲ್ವ, ಅವರಿಗೆ ಅವಕಾಶ ಕೊಡದೇ ನೀವೇ ಬಂದಿದ್ದಿರಲ್ಲ, ಅವರನ್ನೇಕೆ ತುಳಿಯುತ್ತೀದ್ದೀರ ಎಂದು ಕುಮಾರಸ್ವಾಮಿಯನ್ನು ಪ್ರಶ್ನಿಸಿದರು.

ಕಾಂಗ್ರೆಸ್‌ ಈ ಅವಧಿಯಲ್ಲೇ ರೈತರಿಗೋಸ್ಕರ ಮೇಕೆದಾಟು ಯೋಜನೆ ಮಾಡುವ ಸಂಕಲ್ಪ ಮಾಡಿದೆ. ಐದು ಬೆರಳು ಸೇರಿ ಅಂಗೈಯಾಗಿ ಕೈಗಟ್ಟಿಯಾಯ್ತು, ಹಾಗೆಯೇ ಐದು ಗ್ಯಾರಂಟಿ ಸೇರಿ ಜಿಲ್ಲೆ ಹಾಗೂ ರಾಜ್ಯ ಗಟ್ಟಿಯಾಗಿದೆ. ನಿಮ್ಮ ಜಿಲ್ಲೆಯ ಮಗ ವೆಂಕಟರಮಣೇಗೌಡ(ಸ್ಟಾರ್ ಚಂದ್ರು)ಗೆ ಮತ ನೀಡಿ ಆಶೀರ್ವದಿಸಿ ಎಂದು ಮನವಿ ಮಾಡಿದರು.

ಮಂಡ್ಯದಲ್ಲಿ ಸ್ಪರ್ಧಿಸಿರುವುದು ಸ್ಟಾರ್ ಚಂದ್ರು ಅಲ್ಲ, ನಾನು, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಎನ್ನುವುದನ್ನು ಜಿಲ್ಲೆಯ ಜನ ಗಮನದಲ್ಲಿಟ್ಟುಕೊಳ್ಳಬೇಕು. ಕುಮಾರಸ್ವಾಮಿನ ಜಿಲ್ಲೆಯಿಂದಲ್ಲ ರಾಜ್ಯದಿಂಲೇ ಗೋ ಬ್ಯಾಕ್‌ ಮಾಡಬೇಕು. ಜಿಲ್ಲೆಯ ತಾಯಂದಿರು ಕಾಂಗ್ರೆಸ್‌ ಅಭ್ಯರ್ಥಿಗೆ ಶಕ್ತಿ ತುಂಬಿರಿ ಎಂದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

32 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

37 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

47 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago