ಮಂಡ್ಯ

ಲೋಕಸಭೆ ಚುನಾವಣೆ 2024: ಮೈತ್ರಿ ವಿರುದ್ಧ ಡಿಕೆಶಿ ವಾಗ್ದಾಳಿ

ಮಂಡ್ಯ: ಬಿಜೆಪಿ-ಜೆಡಿಎಸ್‌ನವರು ರಾಜ್ಯದ ಜನತೆಗೆ ಏನನ್ನೂ ಮಾಡಲಿಲ್ಲ. ನಿಮ್ಮ ಕಷ್ಟಕ್ಕೆ ಸ್ಪಂದಿಸಿಲ್ಲ ಬದಲಿಗೆ ಭಾವನೆಗಳ ಜೊತೆ ಆಟವಾಡುತ್ತಿದ್ದಾರೆ. ಮೈತ್ರಿಯನ್ನು ಜಿಲ್ಲೆಯಿಂದ ಕಿತ್ತೊಗಿಯಿರಿ ಎಂದು ಉಪ ಮುಖ್ಯಮುಂತ್ರಿ ಡಿ.ಕೆ ಶಿವಕುಮಾರ್‌ ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದರು.

ನರಗದಲ್ಲಿ ನಡೆದ ಪ್ರಜಾಧ್ವನಿ 2 ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಾಂಗ್ರೆಸ್‌ ಬಡವರು ಮತ್ತು ರೈತರ ಕಷ್ಟದ ಜೊತೆ ಹೆಜ್ಜೆ ಹಾಕುತ್ತಿದೆ. ಐದು ಗ್ಯಾರಂಟಿ ನೀಡಿ ನಿಮ್ಮ ಬದುಕನ್ನು ಹಸನು ಮಾಡುತ್ತಿದೆ. ಮಂಡ್ಯ ಗೆದ್ರೆ ಇಂಡಿಯಾ ಗೆಲ್ಲುತ್ತೇವೆ ಎನ್ನುವ ವಿಸ್ವಾಸದಿಂದ ರಾಹುಲ್‌ ಗಾಂಧಿ ಜಿಲ್ಲೆಗೆ ಬಂದಿದ್ದಾರೆ ಅವರಿಗೆ ಶಕ್ತಿ ತುಂಬಿರಿ ಎಂದರು.

ಮಂಡ್ಯ ಜಿಲ್ಲಾ ಜನರ ಕಷ್ಟಕ್ಕೂ ಆಗದ ಸುಖಕ್ಕೂ ಆಗದ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ಯಾವ ವಿಶೇಷ ಯೋಜನೆಯನ್ನೂ ನೀಡಿಲ್ಲ. ಬಿಜೆಪಿಯ ʻಬಿ ಟೀಮ್‌ʼ ಆಗಿದ್ದ ಜೆಡಿಎಸ್‌ ಇದೀಗ ʻಎ ಟೀಮ್‌ʼ ಆಗಿದೆ ಎಂದು ಮೈತ್ರಿಯನ್ನು ಟೀಕಿಸಿದರು.

ಜಿಲ್ಲೆಗೆ ನೀವೇ ಅಭ್ಯರ್ಥಿಯಾಗಿ ಬಂದಿದ್ದೀರಲ್ಲ ಯಾಕೆ ಸ್ವಾಮಿ, ನಿಮ್ಮನ್ನು ಮುಖ್ಯಮಂತ್ರಿ ಮಾಡಿದ ಜನರು ಇರಲಿಲ್ವ, ನಿಮ್ಮನ್ನು ಶಾಸಕ ಮಾಡಿದ ನಾಯಕ ಇರಲಿಲ್ವ, ಅವರಿಗೆ ಅವಕಾಶ ಕೊಡದೇ ನೀವೇ ಬಂದಿದ್ದಿರಲ್ಲ, ಅವರನ್ನೇಕೆ ತುಳಿಯುತ್ತೀದ್ದೀರ ಎಂದು ಕುಮಾರಸ್ವಾಮಿಯನ್ನು ಪ್ರಶ್ನಿಸಿದರು.

ಕಾಂಗ್ರೆಸ್‌ ಈ ಅವಧಿಯಲ್ಲೇ ರೈತರಿಗೋಸ್ಕರ ಮೇಕೆದಾಟು ಯೋಜನೆ ಮಾಡುವ ಸಂಕಲ್ಪ ಮಾಡಿದೆ. ಐದು ಬೆರಳು ಸೇರಿ ಅಂಗೈಯಾಗಿ ಕೈಗಟ್ಟಿಯಾಯ್ತು, ಹಾಗೆಯೇ ಐದು ಗ್ಯಾರಂಟಿ ಸೇರಿ ಜಿಲ್ಲೆ ಹಾಗೂ ರಾಜ್ಯ ಗಟ್ಟಿಯಾಗಿದೆ. ನಿಮ್ಮ ಜಿಲ್ಲೆಯ ಮಗ ವೆಂಕಟರಮಣೇಗೌಡ(ಸ್ಟಾರ್ ಚಂದ್ರು)ಗೆ ಮತ ನೀಡಿ ಆಶೀರ್ವದಿಸಿ ಎಂದು ಮನವಿ ಮಾಡಿದರು.

ಮಂಡ್ಯದಲ್ಲಿ ಸ್ಪರ್ಧಿಸಿರುವುದು ಸ್ಟಾರ್ ಚಂದ್ರು ಅಲ್ಲ, ನಾನು, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಎನ್ನುವುದನ್ನು ಜಿಲ್ಲೆಯ ಜನ ಗಮನದಲ್ಲಿಟ್ಟುಕೊಳ್ಳಬೇಕು. ಕುಮಾರಸ್ವಾಮಿನ ಜಿಲ್ಲೆಯಿಂದಲ್ಲ ರಾಜ್ಯದಿಂಲೇ ಗೋ ಬ್ಯಾಕ್‌ ಮಾಡಬೇಕು. ಜಿಲ್ಲೆಯ ತಾಯಂದಿರು ಕಾಂಗ್ರೆಸ್‌ ಅಭ್ಯರ್ಥಿಗೆ ಶಕ್ತಿ ತುಂಬಿರಿ ಎಂದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

9 mins ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

5 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

5 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

5 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

16 hours ago