ಮಂಡ್ಯ: ಅನಧಿಕೃತವಾಗಿ ಮದ್ಯ ಸಾಗಾಣಿಕೆ ಹಾಗೂ ಸಂಗ್ರಹಣೆಯ ಬಗ್ಗೆ ಚುನಾವಣಾ ತಂಡಗಳು ಹೆಚ್ಚಿನ ನಿಗಾ ವಹಿಸಬೇಕು. ಸೂಕ್ಷ್ಮ ಸ್ಥಳಗಳಲ್ಲಿರುವ ಮದ್ಯದ ಅಂಗಡಿಗಳನ್ನು ಪಟ್ಟಿ ಮಾಡಿಕೊಂಡು ಅಬಕಾರಿ ಇಲಾಖೆಯ ಅವರು ತೀವ್ರ ಗಮನ ಹರಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರುಗಳಾದ ರೋಹಿತ್ ಅಸುದಾನಿ ಮತ್ತು ಕುಮಾರ್ ಪ್ರಿಯತಮ್ ಅಶೋಕ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆದಾಯ ತೆರಿಗೆ ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಬಟ್ಟೆ, ದಿನನಿತ್ಯ ಉಪಯೋಗಿಸುವ ಎಲೆಕ್ಟ್ರಾನಿಕ್ ಸರಕು ಹಾಗೂ ಇನ್ನಿತರೆ ವಸ್ತುಗಳನ್ನು ಸಂಗ್ರಹಿಸುವ ಗೋಡೌನ್ ಗಳಲ್ಲಿ ಪರಿಶೀಲನೆ ನಡೆಸಿ ಜೊತೆಗೆ ಗೋಡೌನ್ ಗಳಿಗೆ ಅನರೀಕ್ಷಿತ ದಾಳಿ ನಡೆಸಿ ಎಂದರು.
ಬ್ಯಾಂಕ್ ವಹಿವಾಟಿನ ಮೇಲೆ ನಿಗಾವಹಿಸಿ ಬ್ಯಾಂಕ್ ಖಾತೆಗಳಲ್ಲಿ ನಡೆಯುವ ಸಂಶಯಾಸ್ಪದ ವಹಿವಾಟು ಮತ್ತು ಹತ್ತು ಲಕ್ಷಕ್ಕಿಂತ ಹೆಚ್ಚಿನ ಹಣ ವರ್ಗಾವಣೆ, ಒಂದು ಖಾತೆಯಿಂದ 10ಕ್ಕಿಂತ ಹೆಚ್ಚಿನ ಖಾತೆಗೆ ಹಣ ವರ್ಗಾವಣೆ ಕುರಿತಂತೆ ಪ್ರತಿದಿನ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ಕುಮಾರ ಅವರು ಕಡತಗಳು ಸೇರಿದಂತೆ ವಿವಿಧ ನಿರ್ವಹಣೆಯ ಬಗ್ಗೆ ರಾಜಕೀಯ ಪಕ್ಷಗಳಿಗೆ ಪ್ರಚಾರಕ್ಕಾಗಿ ಅನುಮತಿ ನೀಡಲು ತೆರೆದಿರುವ ಏಕಗವಾಕ್ಷಿ ಕೇಂದ್ರಗಳ ಬಗ್ಗೆ ವಿವರಿಸಿದರು. ಜೊತೆಗೆ ಬ್ಯಾಂಕ್ ವಹಿವಾಟಿನ ಮೇಲೆ ನಿಗಾ ವಹಿಸಲು 10 ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಪ್ರತಿದಿನ ನಿಯಮಿತವಾಗಿ ವರದಿ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಸಭೆಯ ನಂತರ ವೆಚ್ಚ ವೀಕ್ಷಕರು ಚುನಾವಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿತವಾಗಿರುವ ಕಂಟ್ರೋಲ್ ರೂಂ ಹಾಗೂ ಮಾಧ್ಯಮ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಅಪರ ಜಿಲ್ಲಾಧಿಕಾರಿ ಡಾ. ಹೆಚ್ ಎಲ್ ನಾಗರಾಜು, ಆದಾಯ ತೆರಿಗೆ ಇಲಾಖೆ ಅಧಿಕಾರಿ ಮಹಮ್ಮದ್ ಇದಾಯತ್ ಉಸೇಸ್, ಅಬಕಾರಿ ಇಲಾಖೆ ಜಿಲ್ಲಾ ಅಧಿಕಾರಿ ರಾಘವೇಂದ್ರ, ವಾಣಿಜ್ಯ ತೆರಿಗೆ ಅಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೆಲ…
ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್ ಜೊತೆ ಮಾತನಾಡುವೆ ಎಂದು ಡಿಸಿಎಂ…
ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…
ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…