ಮಂಡ್ಯ

ತಿಮ್ಮಕ್ಕ ವೃಕ್ಷ ಪ್ರೀತಿ ಎಲ್ಲರಿಗೂ ಮಾದರಿ : ನಟಿ ಅಕ್ಷತಾ ಪಾಂಡಪುರ ಅವರ ಮನದಾಳದ ನುಡಿ

ಮೈಸೂರು : ಸಾಲುಮರದ ತಿಮ್ಮಕ್ಕ ನಮ್ಮ ಜೊತೆ ಭೌತಿಕವಾಗಿ ಇಲ್ಲವಾಗಿರಬಹುದು. ಆದರೆ, ಅವರು ಕೇವಲ ನಾನು, ನನ್ನ ಮಗಳು ಕಾಲ ಅಲ್ಲ ನಮ್ಮ ಮೊಮ್ಮಕ್ಕಳ ಪೀಳಿಗೆಯಲ್ಲೂ ಇರುತ್ತಾರೆ ಎಂದು ಚಲನಚಿತ್ರ ನಟಿ ಅಕ್ಷತಾ ಪಾಂಡವಪುರ ಹೇಳಿದರು.

‘ಆಂದೋಲನ’ದೊಂದಿಗೆ ಮಾತನಾಡಿದ ಅವರು, ಪ್ರಕೃತಿ ಸಂರಕ್ಷಣೆಗೆ ತಿಮ್ಮಕ್ಕ ಅವರ ಕೊಡುಗೆ ಅಪಾರವಾಗಿದೆ. ಅವರು ನೆಟ್ಟಿರುವ ಸಸಿಗಳು ಈಗ ಮರವಾಗಿ, ಹೆಮ್ಮರವಾಗಿ ಬೆಳೆದು ನಿಂತಿವೆ. ನಾವು ಭೂಮಿಯನ್ನು ಉಳಿಸಬೇಕು, ಕಾಪಾಡಬೇಕು. ಭೂಮಿಯನ್ನು ನಾವು ಉಳಿಸಿದರೆ, ಮುಂದಿನ ಪೀಳಿಗೆಯನ್ನೇ ಉಳಿಸಿದ ಹಾಗೆ. ಆದರೆ, ಈಗ ಯಾರು ಭೂಮಿ ಉಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.

ಮರಗಿಡಗಳನ್ನು ನೆಟ್ಟು, ಭೂಮಿಯ ಮಣ್ಣಿನ ಪದರವನ್ನು ಸುಭದ್ರ ಮಾಡುವ ಕೆಲಸವನ್ನು ಯಾರು ಮಾಡುತ್ತಿದ್ದಾರೆ ಅಂತ ಹುಡುಕಿದರೂ ಯಾರೂ ಸಿಗುವುದಿಲ್ಲ. ಎಲ್ಲರೂ ರಿಯಲ್ ಎಸ್ಟೇಟ್ ಮಾಡುತ್ತಿದ್ದಾರೆ. ಭೂಮಿಯನ್ನು ಖರೀದಿಸುವುದು, ಮಾರಾಟ ಮಾಡುವುದು..! ಭೂಮಿ ಮೇಲೆ ಎಲ್ಲರಿಗೂ ದುರಾಸೆ ಬಂದುಬಿಟ್ಟಿದೆ. ಆದರೆ ತಿಮ್ಮಕ್ಕ ಅವರು ಹಾಗಲ್ಲ. ಭೂಮಿಯನ್ನು ಉಳಿಸುವುದಕ್ಕಾಗಿ, ಹಸಿರು ಉಳಿಸುವುದಕ್ಕಾಗಿ, ಮುಂದಿನ ಪೀಳಿಗೆಗಳನ್ನು ಉಳಿಸುವುದಕ್ಕಾಗಿ ಅವರು ಸಸಿಗಳನ್ನು ನೆಟ್ಟರು. ಇದು ನಿಜಕ್ಕೂ ಎಲ್ಲರಿಗೂ ಪ್ರೇರಣೆ, ನನ್ನ ಜೀವನದಲ್ಲಂತೂ ಅವರು ಅಗ್ರಸ್ಥಾನದಲ್ಲಿದ್ದಾರೆ. ಅಲ್ಲದೆ, ಅವರು ಯಾವಾಗಲೂ ನನ್ನ ಹೃದಯದಲ್ಲಿ ಇರುತ್ತಾರೆ ಎಂದರು.

ನಿರ್ಮಾಪಕರೊಬ್ಬರು ತಿಮ್ಮಕ್ಕ ಅವರ ಬಗ್ಗೆ ಒಂದು ಸಿನಿಮಾ ಮಾಡುತ್ತೇವೆ. ನೀವು ಅಭಿನಯಿಸಿ ಎಂದು ನನಗೆ ಹೇಳಿದ್ದರು. ನನಗೂ ಆಸೆ ಇತ್ತು. ಸಿನಿಮಾದಲ್ಲಿ ಅಭಿನಯಿಸುವುದರಿಂದ, ತಿಮ್ಮಕ್ಕ ಅವರ ಬಗ್ಗೆ ಇನ್ನು ಹೆಚ್ಚು ತಿಳಿದುಕೊಂಡಂತೆ ಆಗುತ್ತದೆ ಎಂಬ ಆಸೆಯೂ ಇತ್ತು. ಆದರೆ ಕಾರಣಾಂತರಗಳಿಂದ ಆ ಸಿನಿಮಾ ಆಗಲಿಲ್ಲ.ಎಂದು ಅಕ್ಷತಾ ಅಭಿಪ್ರಾಯಪಟ್ಟರು.

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

1 hour ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

1 hour ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

2 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

2 hours ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

2 hours ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

2 hours ago