ಮಂಡ್ಯ

ತಿಮ್ಮಕ್ಕ ವೃಕ್ಷ ಪ್ರೀತಿ ಎಲ್ಲರಿಗೂ ಮಾದರಿ : ನಟಿ ಅಕ್ಷತಾ ಪಾಂಡಪುರ ಅವರ ಮನದಾಳದ ನುಡಿ

ಮೈಸೂರು : ಸಾಲುಮರದ ತಿಮ್ಮಕ್ಕ ನಮ್ಮ ಜೊತೆ ಭೌತಿಕವಾಗಿ ಇಲ್ಲವಾಗಿರಬಹುದು. ಆದರೆ, ಅವರು ಕೇವಲ ನಾನು, ನನ್ನ ಮಗಳು ಕಾಲ ಅಲ್ಲ ನಮ್ಮ ಮೊಮ್ಮಕ್ಕಳ ಪೀಳಿಗೆಯಲ್ಲೂ ಇರುತ್ತಾರೆ ಎಂದು ಚಲನಚಿತ್ರ ನಟಿ ಅಕ್ಷತಾ ಪಾಂಡವಪುರ ಹೇಳಿದರು.

‘ಆಂದೋಲನ’ದೊಂದಿಗೆ ಮಾತನಾಡಿದ ಅವರು, ಪ್ರಕೃತಿ ಸಂರಕ್ಷಣೆಗೆ ತಿಮ್ಮಕ್ಕ ಅವರ ಕೊಡುಗೆ ಅಪಾರವಾಗಿದೆ. ಅವರು ನೆಟ್ಟಿರುವ ಸಸಿಗಳು ಈಗ ಮರವಾಗಿ, ಹೆಮ್ಮರವಾಗಿ ಬೆಳೆದು ನಿಂತಿವೆ. ನಾವು ಭೂಮಿಯನ್ನು ಉಳಿಸಬೇಕು, ಕಾಪಾಡಬೇಕು. ಭೂಮಿಯನ್ನು ನಾವು ಉಳಿಸಿದರೆ, ಮುಂದಿನ ಪೀಳಿಗೆಯನ್ನೇ ಉಳಿಸಿದ ಹಾಗೆ. ಆದರೆ, ಈಗ ಯಾರು ಭೂಮಿ ಉಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.

ಮರಗಿಡಗಳನ್ನು ನೆಟ್ಟು, ಭೂಮಿಯ ಮಣ್ಣಿನ ಪದರವನ್ನು ಸುಭದ್ರ ಮಾಡುವ ಕೆಲಸವನ್ನು ಯಾರು ಮಾಡುತ್ತಿದ್ದಾರೆ ಅಂತ ಹುಡುಕಿದರೂ ಯಾರೂ ಸಿಗುವುದಿಲ್ಲ. ಎಲ್ಲರೂ ರಿಯಲ್ ಎಸ್ಟೇಟ್ ಮಾಡುತ್ತಿದ್ದಾರೆ. ಭೂಮಿಯನ್ನು ಖರೀದಿಸುವುದು, ಮಾರಾಟ ಮಾಡುವುದು..! ಭೂಮಿ ಮೇಲೆ ಎಲ್ಲರಿಗೂ ದುರಾಸೆ ಬಂದುಬಿಟ್ಟಿದೆ. ಆದರೆ ತಿಮ್ಮಕ್ಕ ಅವರು ಹಾಗಲ್ಲ. ಭೂಮಿಯನ್ನು ಉಳಿಸುವುದಕ್ಕಾಗಿ, ಹಸಿರು ಉಳಿಸುವುದಕ್ಕಾಗಿ, ಮುಂದಿನ ಪೀಳಿಗೆಗಳನ್ನು ಉಳಿಸುವುದಕ್ಕಾಗಿ ಅವರು ಸಸಿಗಳನ್ನು ನೆಟ್ಟರು. ಇದು ನಿಜಕ್ಕೂ ಎಲ್ಲರಿಗೂ ಪ್ರೇರಣೆ, ನನ್ನ ಜೀವನದಲ್ಲಂತೂ ಅವರು ಅಗ್ರಸ್ಥಾನದಲ್ಲಿದ್ದಾರೆ. ಅಲ್ಲದೆ, ಅವರು ಯಾವಾಗಲೂ ನನ್ನ ಹೃದಯದಲ್ಲಿ ಇರುತ್ತಾರೆ ಎಂದರು.

ನಿರ್ಮಾಪಕರೊಬ್ಬರು ತಿಮ್ಮಕ್ಕ ಅವರ ಬಗ್ಗೆ ಒಂದು ಸಿನಿಮಾ ಮಾಡುತ್ತೇವೆ. ನೀವು ಅಭಿನಯಿಸಿ ಎಂದು ನನಗೆ ಹೇಳಿದ್ದರು. ನನಗೂ ಆಸೆ ಇತ್ತು. ಸಿನಿಮಾದಲ್ಲಿ ಅಭಿನಯಿಸುವುದರಿಂದ, ತಿಮ್ಮಕ್ಕ ಅವರ ಬಗ್ಗೆ ಇನ್ನು ಹೆಚ್ಚು ತಿಳಿದುಕೊಂಡಂತೆ ಆಗುತ್ತದೆ ಎಂಬ ಆಸೆಯೂ ಇತ್ತು. ಆದರೆ ಕಾರಣಾಂತರಗಳಿಂದ ಆ ಸಿನಿಮಾ ಆಗಲಿಲ್ಲ.ಎಂದು ಅಕ್ಷತಾ ಅಭಿಪ್ರಾಯಪಟ್ಟರು.

ಆಂದೋಲನ ಡೆಸ್ಕ್

Recent Posts

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

4 mins ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

1 hour ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

2 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

3 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

3 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

3 hours ago