ಮಂಡ್ಯ

ತಿಮ್ಮಕ್ಕ ವೃಕ್ಷ ಪ್ರೀತಿ ಎಲ್ಲರಿಗೂ ಮಾದರಿ : ನಟಿ ಅಕ್ಷತಾ ಪಾಂಡಪುರ ಅವರ ಮನದಾಳದ ನುಡಿ

ಮೈಸೂರು : ಸಾಲುಮರದ ತಿಮ್ಮಕ್ಕ ನಮ್ಮ ಜೊತೆ ಭೌತಿಕವಾಗಿ ಇಲ್ಲವಾಗಿರಬಹುದು. ಆದರೆ, ಅವರು ಕೇವಲ ನಾನು, ನನ್ನ ಮಗಳು ಕಾಲ ಅಲ್ಲ ನಮ್ಮ ಮೊಮ್ಮಕ್ಕಳ ಪೀಳಿಗೆಯಲ್ಲೂ ಇರುತ್ತಾರೆ ಎಂದು ಚಲನಚಿತ್ರ ನಟಿ ಅಕ್ಷತಾ ಪಾಂಡವಪುರ ಹೇಳಿದರು.

‘ಆಂದೋಲನ’ದೊಂದಿಗೆ ಮಾತನಾಡಿದ ಅವರು, ಪ್ರಕೃತಿ ಸಂರಕ್ಷಣೆಗೆ ತಿಮ್ಮಕ್ಕ ಅವರ ಕೊಡುಗೆ ಅಪಾರವಾಗಿದೆ. ಅವರು ನೆಟ್ಟಿರುವ ಸಸಿಗಳು ಈಗ ಮರವಾಗಿ, ಹೆಮ್ಮರವಾಗಿ ಬೆಳೆದು ನಿಂತಿವೆ. ನಾವು ಭೂಮಿಯನ್ನು ಉಳಿಸಬೇಕು, ಕಾಪಾಡಬೇಕು. ಭೂಮಿಯನ್ನು ನಾವು ಉಳಿಸಿದರೆ, ಮುಂದಿನ ಪೀಳಿಗೆಯನ್ನೇ ಉಳಿಸಿದ ಹಾಗೆ. ಆದರೆ, ಈಗ ಯಾರು ಭೂಮಿ ಉಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.

ಮರಗಿಡಗಳನ್ನು ನೆಟ್ಟು, ಭೂಮಿಯ ಮಣ್ಣಿನ ಪದರವನ್ನು ಸುಭದ್ರ ಮಾಡುವ ಕೆಲಸವನ್ನು ಯಾರು ಮಾಡುತ್ತಿದ್ದಾರೆ ಅಂತ ಹುಡುಕಿದರೂ ಯಾರೂ ಸಿಗುವುದಿಲ್ಲ. ಎಲ್ಲರೂ ರಿಯಲ್ ಎಸ್ಟೇಟ್ ಮಾಡುತ್ತಿದ್ದಾರೆ. ಭೂಮಿಯನ್ನು ಖರೀದಿಸುವುದು, ಮಾರಾಟ ಮಾಡುವುದು..! ಭೂಮಿ ಮೇಲೆ ಎಲ್ಲರಿಗೂ ದುರಾಸೆ ಬಂದುಬಿಟ್ಟಿದೆ. ಆದರೆ ತಿಮ್ಮಕ್ಕ ಅವರು ಹಾಗಲ್ಲ. ಭೂಮಿಯನ್ನು ಉಳಿಸುವುದಕ್ಕಾಗಿ, ಹಸಿರು ಉಳಿಸುವುದಕ್ಕಾಗಿ, ಮುಂದಿನ ಪೀಳಿಗೆಗಳನ್ನು ಉಳಿಸುವುದಕ್ಕಾಗಿ ಅವರು ಸಸಿಗಳನ್ನು ನೆಟ್ಟರು. ಇದು ನಿಜಕ್ಕೂ ಎಲ್ಲರಿಗೂ ಪ್ರೇರಣೆ, ನನ್ನ ಜೀವನದಲ್ಲಂತೂ ಅವರು ಅಗ್ರಸ್ಥಾನದಲ್ಲಿದ್ದಾರೆ. ಅಲ್ಲದೆ, ಅವರು ಯಾವಾಗಲೂ ನನ್ನ ಹೃದಯದಲ್ಲಿ ಇರುತ್ತಾರೆ ಎಂದರು.

ನಿರ್ಮಾಪಕರೊಬ್ಬರು ತಿಮ್ಮಕ್ಕ ಅವರ ಬಗ್ಗೆ ಒಂದು ಸಿನಿಮಾ ಮಾಡುತ್ತೇವೆ. ನೀವು ಅಭಿನಯಿಸಿ ಎಂದು ನನಗೆ ಹೇಳಿದ್ದರು. ನನಗೂ ಆಸೆ ಇತ್ತು. ಸಿನಿಮಾದಲ್ಲಿ ಅಭಿನಯಿಸುವುದರಿಂದ, ತಿಮ್ಮಕ್ಕ ಅವರ ಬಗ್ಗೆ ಇನ್ನು ಹೆಚ್ಚು ತಿಳಿದುಕೊಂಡಂತೆ ಆಗುತ್ತದೆ ಎಂಬ ಆಸೆಯೂ ಇತ್ತು. ಆದರೆ ಕಾರಣಾಂತರಗಳಿಂದ ಆ ಸಿನಿಮಾ ಆಗಲಿಲ್ಲ.ಎಂದು ಅಕ್ಷತಾ ಅಭಿಪ್ರಾಯಪಟ್ಟರು.

ಆಂದೋಲನ ಡೆಸ್ಕ್

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

3 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

3 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

4 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

4 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

5 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

5 hours ago