ಮಂಡ್ಯ

ತಿಮ್ಮಕ್ಕ ವೃಕ್ಷ ಪ್ರೀತಿ ಎಲ್ಲರಿಗೂ ಮಾದರಿ : ನಟಿ ಅಕ್ಷತಾ ಪಾಂಡಪುರ ಅವರ ಮನದಾಳದ ನುಡಿ

ಮೈಸೂರು : ಸಾಲುಮರದ ತಿಮ್ಮಕ್ಕ ನಮ್ಮ ಜೊತೆ ಭೌತಿಕವಾಗಿ ಇಲ್ಲವಾಗಿರಬಹುದು. ಆದರೆ, ಅವರು ಕೇವಲ ನಾನು, ನನ್ನ ಮಗಳು ಕಾಲ ಅಲ್ಲ ನಮ್ಮ ಮೊಮ್ಮಕ್ಕಳ ಪೀಳಿಗೆಯಲ್ಲೂ ಇರುತ್ತಾರೆ ಎಂದು ಚಲನಚಿತ್ರ ನಟಿ ಅಕ್ಷತಾ ಪಾಂಡವಪುರ ಹೇಳಿದರು.

‘ಆಂದೋಲನ’ದೊಂದಿಗೆ ಮಾತನಾಡಿದ ಅವರು, ಪ್ರಕೃತಿ ಸಂರಕ್ಷಣೆಗೆ ತಿಮ್ಮಕ್ಕ ಅವರ ಕೊಡುಗೆ ಅಪಾರವಾಗಿದೆ. ಅವರು ನೆಟ್ಟಿರುವ ಸಸಿಗಳು ಈಗ ಮರವಾಗಿ, ಹೆಮ್ಮರವಾಗಿ ಬೆಳೆದು ನಿಂತಿವೆ. ನಾವು ಭೂಮಿಯನ್ನು ಉಳಿಸಬೇಕು, ಕಾಪಾಡಬೇಕು. ಭೂಮಿಯನ್ನು ನಾವು ಉಳಿಸಿದರೆ, ಮುಂದಿನ ಪೀಳಿಗೆಯನ್ನೇ ಉಳಿಸಿದ ಹಾಗೆ. ಆದರೆ, ಈಗ ಯಾರು ಭೂಮಿ ಉಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.

ಮರಗಿಡಗಳನ್ನು ನೆಟ್ಟು, ಭೂಮಿಯ ಮಣ್ಣಿನ ಪದರವನ್ನು ಸುಭದ್ರ ಮಾಡುವ ಕೆಲಸವನ್ನು ಯಾರು ಮಾಡುತ್ತಿದ್ದಾರೆ ಅಂತ ಹುಡುಕಿದರೂ ಯಾರೂ ಸಿಗುವುದಿಲ್ಲ. ಎಲ್ಲರೂ ರಿಯಲ್ ಎಸ್ಟೇಟ್ ಮಾಡುತ್ತಿದ್ದಾರೆ. ಭೂಮಿಯನ್ನು ಖರೀದಿಸುವುದು, ಮಾರಾಟ ಮಾಡುವುದು..! ಭೂಮಿ ಮೇಲೆ ಎಲ್ಲರಿಗೂ ದುರಾಸೆ ಬಂದುಬಿಟ್ಟಿದೆ. ಆದರೆ ತಿಮ್ಮಕ್ಕ ಅವರು ಹಾಗಲ್ಲ. ಭೂಮಿಯನ್ನು ಉಳಿಸುವುದಕ್ಕಾಗಿ, ಹಸಿರು ಉಳಿಸುವುದಕ್ಕಾಗಿ, ಮುಂದಿನ ಪೀಳಿಗೆಗಳನ್ನು ಉಳಿಸುವುದಕ್ಕಾಗಿ ಅವರು ಸಸಿಗಳನ್ನು ನೆಟ್ಟರು. ಇದು ನಿಜಕ್ಕೂ ಎಲ್ಲರಿಗೂ ಪ್ರೇರಣೆ, ನನ್ನ ಜೀವನದಲ್ಲಂತೂ ಅವರು ಅಗ್ರಸ್ಥಾನದಲ್ಲಿದ್ದಾರೆ. ಅಲ್ಲದೆ, ಅವರು ಯಾವಾಗಲೂ ನನ್ನ ಹೃದಯದಲ್ಲಿ ಇರುತ್ತಾರೆ ಎಂದರು.

ನಿರ್ಮಾಪಕರೊಬ್ಬರು ತಿಮ್ಮಕ್ಕ ಅವರ ಬಗ್ಗೆ ಒಂದು ಸಿನಿಮಾ ಮಾಡುತ್ತೇವೆ. ನೀವು ಅಭಿನಯಿಸಿ ಎಂದು ನನಗೆ ಹೇಳಿದ್ದರು. ನನಗೂ ಆಸೆ ಇತ್ತು. ಸಿನಿಮಾದಲ್ಲಿ ಅಭಿನಯಿಸುವುದರಿಂದ, ತಿಮ್ಮಕ್ಕ ಅವರ ಬಗ್ಗೆ ಇನ್ನು ಹೆಚ್ಚು ತಿಳಿದುಕೊಂಡಂತೆ ಆಗುತ್ತದೆ ಎಂಬ ಆಸೆಯೂ ಇತ್ತು. ಆದರೆ ಕಾರಣಾಂತರಗಳಿಂದ ಆ ಸಿನಿಮಾ ಆಗಲಿಲ್ಲ.ಎಂದು ಅಕ್ಷತಾ ಅಭಿಪ್ರಾಯಪಟ್ಟರು.

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago