ಮಂಡ್ಯ

ತಿಮ್ಮಕ್ಕ ವೃಕ್ಷ ಪ್ರೀತಿ ಎಲ್ಲರಿಗೂ ಮಾದರಿ : ನಟಿ ಅಕ್ಷತಾ ಪಾಂಡಪುರ ಅವರ ಮನದಾಳದ ನುಡಿ

ಮೈಸೂರು : ಸಾಲುಮರದ ತಿಮ್ಮಕ್ಕ ನಮ್ಮ ಜೊತೆ ಭೌತಿಕವಾಗಿ ಇಲ್ಲವಾಗಿರಬಹುದು. ಆದರೆ, ಅವರು ಕೇವಲ ನಾನು, ನನ್ನ ಮಗಳು ಕಾಲ ಅಲ್ಲ ನಮ್ಮ ಮೊಮ್ಮಕ್ಕಳ ಪೀಳಿಗೆಯಲ್ಲೂ ಇರುತ್ತಾರೆ ಎಂದು ಚಲನಚಿತ್ರ ನಟಿ ಅಕ್ಷತಾ ಪಾಂಡವಪುರ ಹೇಳಿದರು.

‘ಆಂದೋಲನ’ದೊಂದಿಗೆ ಮಾತನಾಡಿದ ಅವರು, ಪ್ರಕೃತಿ ಸಂರಕ್ಷಣೆಗೆ ತಿಮ್ಮಕ್ಕ ಅವರ ಕೊಡುಗೆ ಅಪಾರವಾಗಿದೆ. ಅವರು ನೆಟ್ಟಿರುವ ಸಸಿಗಳು ಈಗ ಮರವಾಗಿ, ಹೆಮ್ಮರವಾಗಿ ಬೆಳೆದು ನಿಂತಿವೆ. ನಾವು ಭೂಮಿಯನ್ನು ಉಳಿಸಬೇಕು, ಕಾಪಾಡಬೇಕು. ಭೂಮಿಯನ್ನು ನಾವು ಉಳಿಸಿದರೆ, ಮುಂದಿನ ಪೀಳಿಗೆಯನ್ನೇ ಉಳಿಸಿದ ಹಾಗೆ. ಆದರೆ, ಈಗ ಯಾರು ಭೂಮಿ ಉಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು.

ಮರಗಿಡಗಳನ್ನು ನೆಟ್ಟು, ಭೂಮಿಯ ಮಣ್ಣಿನ ಪದರವನ್ನು ಸುಭದ್ರ ಮಾಡುವ ಕೆಲಸವನ್ನು ಯಾರು ಮಾಡುತ್ತಿದ್ದಾರೆ ಅಂತ ಹುಡುಕಿದರೂ ಯಾರೂ ಸಿಗುವುದಿಲ್ಲ. ಎಲ್ಲರೂ ರಿಯಲ್ ಎಸ್ಟೇಟ್ ಮಾಡುತ್ತಿದ್ದಾರೆ. ಭೂಮಿಯನ್ನು ಖರೀದಿಸುವುದು, ಮಾರಾಟ ಮಾಡುವುದು..! ಭೂಮಿ ಮೇಲೆ ಎಲ್ಲರಿಗೂ ದುರಾಸೆ ಬಂದುಬಿಟ್ಟಿದೆ. ಆದರೆ ತಿಮ್ಮಕ್ಕ ಅವರು ಹಾಗಲ್ಲ. ಭೂಮಿಯನ್ನು ಉಳಿಸುವುದಕ್ಕಾಗಿ, ಹಸಿರು ಉಳಿಸುವುದಕ್ಕಾಗಿ, ಮುಂದಿನ ಪೀಳಿಗೆಗಳನ್ನು ಉಳಿಸುವುದಕ್ಕಾಗಿ ಅವರು ಸಸಿಗಳನ್ನು ನೆಟ್ಟರು. ಇದು ನಿಜಕ್ಕೂ ಎಲ್ಲರಿಗೂ ಪ್ರೇರಣೆ, ನನ್ನ ಜೀವನದಲ್ಲಂತೂ ಅವರು ಅಗ್ರಸ್ಥಾನದಲ್ಲಿದ್ದಾರೆ. ಅಲ್ಲದೆ, ಅವರು ಯಾವಾಗಲೂ ನನ್ನ ಹೃದಯದಲ್ಲಿ ಇರುತ್ತಾರೆ ಎಂದರು.

ನಿರ್ಮಾಪಕರೊಬ್ಬರು ತಿಮ್ಮಕ್ಕ ಅವರ ಬಗ್ಗೆ ಒಂದು ಸಿನಿಮಾ ಮಾಡುತ್ತೇವೆ. ನೀವು ಅಭಿನಯಿಸಿ ಎಂದು ನನಗೆ ಹೇಳಿದ್ದರು. ನನಗೂ ಆಸೆ ಇತ್ತು. ಸಿನಿಮಾದಲ್ಲಿ ಅಭಿನಯಿಸುವುದರಿಂದ, ತಿಮ್ಮಕ್ಕ ಅವರ ಬಗ್ಗೆ ಇನ್ನು ಹೆಚ್ಚು ತಿಳಿದುಕೊಂಡಂತೆ ಆಗುತ್ತದೆ ಎಂಬ ಆಸೆಯೂ ಇತ್ತು. ಆದರೆ ಕಾರಣಾಂತರಗಳಿಂದ ಆ ಸಿನಿಮಾ ಆಗಲಿಲ್ಲ.ಎಂದು ಅಕ್ಷತಾ ಅಭಿಪ್ರಾಯಪಟ್ಟರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago