ಮಂಡ್ಯ : ಕೆಆರ್ಎಸ್ ಉತ್ತರ ಬೃಂದಾವನದಲ್ಲಿ ಹುಚ್ಚು ನಾಯಿ ದಾಳಿ ನಡೆಸಿ ಐದು ಮಂದಿ ಪ್ರವಾಸಿಗರು ಗಾಯಗೊಂಡಿರುವ ಘಟನೆ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್ಎಸ್ ಬೃಂದಾವನಕ್ಕೆ ಪ್ರವಾಸಿಗರು ಆಗಮಿಸಿದ್ದರು. ಉತ್ತರ ಬೃಂದಾವನದಲ್ಲಿ ಕಳೆದ ರಾತ್ರಿ ಹುಚ್ಚು ನಾಯಿ ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆ ಪ್ರವಾಸಿಗರ ಮೇಲೆ ದಾಳಿ ನಡೆಸಿದೆ.
ನಾಯಿ ದಾಳಿಯಿಂದ ಐವರು ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಹುಚ್ಚು ನಾಯಿಯನ್ನು ಸ್ಥಳದಿಂದ ಓಡಿಸಿದ್ದಾರೆ. ಘಟನೆಯಿಂದ ಪ್ರವಾಸಿಗರಲ್ಲಿ ಆತಂಕ ಮನೆ ಮಾಡಿದೆ.
ಮತ್ತೆ ಹುಚ್ಚು ನಾಯಿ ಬರಬಹುದೆಂಬ ಎಚ್ಚರಿಕೆಯಿಂದ ಉತ್ತರ ಬೃಂದಾವನವನ್ನು ಬಂದ್ ಮಾಡಲಾಗಿದೆ. ನಾಯಿ ದಾಳಿಯಿಂದ ಗಾಯಗೊಂಡವರಿಗೆ ಮೈಸೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…