ಮಂಡ್ಯ : ಜಿಲ್ಲೆಯ ಮದ್ದೂರಿನಲ್ಲಿ ಭಾನುವಾರ ಸಂಜೆ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ. ಪೂರ್ವ ನಿಯೋಜನೆ ಮಾಡಿಯೇ ಗಣೇಶ ಮೆರವಣಿಗೆ ಮಸೀದಿ ಬಳಿ ಬರುತ್ತಿದ್ದಂತೆಯೇ ಕಲ್ಲು ತೂರಾಟ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿದ್ದಾರೆ.
ಇನ್ನೊಂದೆಡೆ ಸ್ವತಃ ಗೃಹ ಸಚಿವ ಪರಮೇಶ್ವರ್ ಸಹ ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಹೇಳಿದ್ದಾರೆ. ಈ ಸಂಬಂಧ ಕಲ್ಲು ತೂರಿದ್ದ 21 ಮುಸ್ಲಿಮರನ್ನು ಬಂಧಿಸಿದ್ದಾರೆ. ಇನ್ನು ಬಂಧಿತ ಆರೋಪಿಗಳ ವಿರುದ್ಧ BNS ಕಾಯ್ದೆ 189(2), 189(4), 121(2), 132ರ ಹಾಗೂ 190ರ ಅಡಿ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಂಧಿತ ಆರೋಪಿಗಳು ಇವರು…..
ಮೊಹಮ್ಮದ್ ಆವೇಜ್ ಅಲಿಯಾಸ್ ಮುಳ್ಳು, ಮೊಹಮ್ಮದ್ ಇರ್ಫಾನ್ ಅಲಿಯಾಸ್ ಮಿಯಾ, ನವಾಜ್ ಖಾನ್ ಅಲಿಯಾಸ್ ನವಾಜ್, ಇಮ್ರಾನ್ ಪಾಷಾ ಅಲಿಯಾಸ್ ಇಮ್ರಾನ್, ಉಮರ್ ಫಾರೂಕ್ ಅಲಿಯಾಸ್ ಉಮರ್, ಸಯ್ಯದ್ ದಸ್ತಗಿರ್ ಅಲಿಯಾಸ್ ಸಯ್ಯದ್ ರಶೀದ್ , ಖಾಸಿಫ್ ಅಹ್ಮದ್ ಅಲಿಯಾಸ್ ಖಾಸಿಫ್, ಅಹ್ಮದ್ ಸಲ್ಮಾನ್ ಅಲಿಯಾಸ್ ಮುಕ್ಕುಲ್ಲಾ, ಮುಸವೀರ್ ಪಾಷಾ ಅಲಿಯಾಸ್ ಒಡೆಯ, ಕಲಾಂದರ್ ಖಾನ್, ಸುಮೇರ್ ಪಾಷಾ, ಮೊಹಮ್ಮದ್ ಅಜೀಜ್, ಇನಾಯತ್ ಪಾಷಾ, ಮೊಹಮ್ಮದ್ ಖಲೀಂ ಅಲಿಯಾಸ್ ಕೈಫ್ ಬಂಧಿತರು.
ಮಸೀದಿ ಮುಂದೆಯೇ ಮೆರವಣಿಗೆ ಮೇಲೆ ಕಲ್ಲು
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಗಣೇಶನನ್ನ ಕೂರಿಸಲಾಗಿತ್ತು. ನಿನ್ನೆ (ಸೆಪ್ಟೆಂಬರ್ 08) 11ನೇ ದಿನವಾಗಿದ್ದರಿಂದ ಸಂಜೆಯಿಂದ ಗಣೇಶ ವಿಸರ್ಜನಾ ಮೆರವಣಿಗೆಯನ್ನ ಹಮ್ಮಿಕೊಳ್ಳಲಾಗಿತ್ತು. ಹೀಗೆ ಗಣೇಶ ವಿಸರ್ಜನಾ ಮೆರವಣಿಗೆ ಮುಂದೆ ಸಾಗಿ ಬರ್ತಿದ್ದಂತೆ ಮಸೀದಿ ಮುಂದೆ ಇದ್ದಕ್ಕಿದ್ದಂತೆ ಕಲ್ಲು ತೂರಾಟ ನಡೆದಿದೆ. ಕಿಡಿಗೇಡಿಗಳು ಗಣೇಶನ ಮೆರವಣಿಗೆ ಮೇಲೆ ಕಲ್ಲು ತೂರಿ ನೀಚತನ ತೋರಿದ್ದಾರೆ. ಇದನ್ನ ಕಂಡ ಗಣೇಶ ಪ್ರತಿಷ್ಠಾಪಿಸಿದ ಯುವಕರು ಆಕ್ರೋಶಗೊಂಡಿದ್ದು, ಎರಡು ಗುಂಪಗಳ ನಡುವೆ ಗಲಾಟೆ ಜೋರಾಗಿದೆ. ಆ ವೇಳೆ ವಾತಾವರಣ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಫುಲ್ ಅಲರ್ಟ್ ಆಗಿದ್ದು, ಎರಡು ಗುಂಪನ್ನು ತಕ್ಷಣವೇ ಚದುರಿಸಿ ಓಡಿಸಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…