ಮಂಡ್ಯ

ಮದ್ದೂರು | ಸಾರಿಗೆ ಬಸ್‌-ಕಾರಿನ ನಡುವೆ ಅಪಘಾತ ; ಓರ್ವ ಸಾವು, 16ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಂಡ್ಯ : ಸಾರಿಗೆ ಬಸ್‌ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, 16ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನಲ್ಲಿ ಮಾಚಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಅಪಘಾತದಲ್ಲಿ ಕಾರು ಚಾಲಕನಾದ ಬೆಂಗಳೂರಿನ ರಾಜರಾಜೇಶ್ವರನಗರದ ಧನರಾಜ್‌ ಎಂಬ ವ್ಯಕ್ತಿ ಸಾವಿಗೀಡಾಗಿದ್ದಾರೆ. ಬಸ್ಸಿನಲ್ಲಿದ್ದ 16 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಘಟನೆ ವಿವರ…
ಚನ್ನಪಟ್ಟಣದ ಚಾಮುಂಡೇಶ್ವರಿ ದೇವಾಲಯದಿಂದ ಮದ್ದೂರಿಗೆ ಬರ್ತಿದ್ದ ನೂರಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್‌ ಮಾಚಹಳ್ಳಿ ಸಮೀಪಕ್ಕೆ ಬರುತ್ತಿದ್ದಂತೆ ಮದ್ದೂರಿನಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯಗೊಂಡಿದ್ದಾರೆ.

ಇದನ್ನು ಓದಿ: ಅಪಘಾತ : ಗಾಯಾಳುಗಳ ಆರೋಗ್ಯ ವಿಚಾರಿಸಿದ ಡಿಸಿ

ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆ ಹಾಗೂ ಮದ್ದೂರು ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ದಾಖಲಿಸಲಾಗಿದೆ.

ಸ್ಥಳಕ್ಕೆ ಕೆಸ್ತೂರು ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿ ಈ ಸಂಬಂಧ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಪರದಾಡಿದ ಗಾಯಾಳುಗಳು ; ಸ್ಥಳೀಯರ ಪ್ರತಿಭಟನೆ
ಅಪಘಾತ ಸಂಭವಿಸಿ ಒಂದು ಗಂಟೆಯಾದರೂ ಸ್ಥಳಕ್ಕೆ ಅಂಬ್ಯುಲೆನ್ಸ್‌ ಬರದ ಕಾರಣ ಗಾಯಾಳುಗಳು ಪರದಾಡಬೇಕಾಯಿತು ಎಂದು ಸ್ಥಳೀಯರು ದೂರಿದ್ದಾರೆ. ನಾವು ಸಮಯಕ್ಕೆ ಆಂಬ್ಯುಲೆನ್ಸ್‌ಗೆ ಕರೆ ಮಾಡಿದರು ಆಂಬ್ಯುಲೆನ್ಸ್‌ ಬರಲಿಲ್ಲ, ಪರಿಣಾಮ ದಾರಿಯಲ್ಲಿ ಹೋಗುವ ವಾಹನಗಳನ್ನು ಅಡ್ಡಗಟ್ಟಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿದೆವು. ನಂತರ ಒಂದು ಗಂಟೆಯ ಬಳಿಕ ಆಂಬ್ಯುಲೆನ್ಸ್‌ ಆಗಮಿಸಿತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

3 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

19 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

19 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

22 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

24 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

1 day ago