ಮಂಡ್ಯ

ಮದ್ದೂರು ಬಂದ್‌ ಬಹುತೇಕ ಯಶಸ್ವಿ: ನಾಳೆವರೆಗೂ ನಿಷೇಧಾಜ್ಞೆ ಜಾರಿ

ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಅನ್ಯಕೋಮಿನವರಿಂದ ಕಲ್ಲು ತೂರಾಟ ನಡೆದಿರುವುದನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದ ಮದ್ದೂರು ಬಂದ್ ಬಹತೇಕ ಯಶಸ್ವಿಯಾಗಿದ್ದರೂ ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ.

ಬೆಳಗ್ಗಿನಿಂದಲೇ ಪಟ್ಟಣದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣವಾಗಿ ಸ್ತಬ್ದಗೊಂಡಿದ್ದವು. ಪ್ರತಿದಿನ ಬಸ್, ಅಟೋ, ಜನಜಂಗಳಿಯಿಂದ ಗಿಜಿಗುಡುತ್ತಿದ್ದ ಪಟ್ಟಣದಲ್ಲಿ ಒಂದು ರೀತಿ ನೀರವ ಮೌನ ಅವರಿಸಿತ್ತು. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಬಂದ್‍ಗೆ ಬೆಂಬಲ ಕೊಟ್ಟಿದ್ದರು. ಪರಿಸ್ಥಿತಿ ಶಾಂತವಾಗಿದ್ದರೂ ಸಹ ಮದ್ದೂರು ಪಟ್ಟಣದಲ್ಲಿಂದು ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ.

ಹಿಂದೂಪರ ಸಂಘಟನೆಗಳ ಪ್ರತಿಭಟನೆಗೆ ಬಿಜೆಪಿ ಸಾಥ್ ನೀಡಿತ್ತು. ಮದ್ದೂರಿನ ಕೆಎಂ ದೊಡ್ಡಿ, ಬೆಸಗರಹಳ್ಳಿ, ಕೆಸ್ತೂರು ಸೇರಿದಂತೆ ಹೋಬಳಿ ಕೇಂದ್ರಗಳು ಸಹ ಬಂದ್ ಆಗಿದ್ದವು. ಸಾವಿರಾರು ಜನ ಹಿಂದೂ ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗಿಯಾಗಿ ಪಟ್ಟಣದ ಪೇಟೆ ಬೀದಿ ಮೂಲಕ ಐಬಿ ವೃತ್ತದವರೆಗೂ ರ್ಯಾಲಿ ನಡೆಸಿದರು.

ಮದ್ದೂರಿನ ರಾಮ್‍ರಹೀಮ್ ನಗರದಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಾಗ ಉಂಟಾದ ಘರ್ಷಣೆಗೆ ಸಂಬಂಧಿಸಿದಂತೆ ಎರಡು ಎಫ್‍ಐಆರ್ ದಾಖಲಿಸಲಾಗಿದೆ. ಪೊಲೀಸರು ತಮ್ಮದೇ ಆದ ಪ್ರಕರಣವನ್ನು ದಾಖಲಿಸಿಕೊಂಡರೆ, ಗಾಯಾಳುಗಳು ನೀಡಿದ ದೂರಿನ ಆಧಾರದ ಮೇಲೆ ಮತ್ತೊಂದು ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಭಾನುವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 22 ಜನರನ್ನು ಬಂಧಿಸಲಾಗಿದೆ.

ಮಸೀದಿಯಿಂದ ಸುಮಾರು 500 ಮೀಟರ್ ದೂರದಲ್ಲಿ ಆರಂಭವಾದ ಕಲ್ಲು ತೂರಾಟವು ಮೆರವಣಿಗೆಯಲ್ಲಿದ್ದ ಸದಸ್ಯರಿಂದ ಪ್ರತೀಕಾರಕ್ಕೆ ಕಾರಣವಾಯಿತು. ಎರಡು ಗುಂಪುಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ನಂತರ ಹಿಂದೂ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿ, ಟೈರ್‌ಗಳನ್ನು ಸುಟ್ಟು, ಕೇಸರಿ ಧ್ವಜಗಳನ್ನು ಬೀಸುತ್ತಾ ಪ್ರತಿಭಟನೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

41 mins ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

48 mins ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

2 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

2 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

2 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

2 hours ago