ಮದ್ದೂರು : ಪೌತಿ ಖಾತೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ತಾಲ್ಲೂಕಿನ ತಗ್ಗಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಸಚಿನ್ ಎಂಬುವರೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಚಿಕ್ಕೋನಹಳ್ಳಿ ಗ್ರಾಮದ ಶಿವಲಿಂಗಯ್ಯ ಅವರ ಬಳಿ ಪಿಡಿಒ ಸಚಿನ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಶಿವಲಿಂಗಯ್ಯ ದೂರು ನೀಡಿದ್ದರು.
ಇದನ್ನೂ ಓದಿ:-ಗಾಜಾ ಯುದ್ಧ ಕೊನೆಗೊಂಡಿದೆ : ಟ್ರಂಪ್
ಸೋಮವಾರ ಶಿವಲಿಂಗಯ್ಯ ಅವರಿಂದ ಪಿಡಿಒ ಸಚಿನ್ ೫ ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ಗಳಾದ ಕುಮಾರ್ ಹಾಗೂ ಬ್ಯಾಟರಾಯಗೌಡ ಅವರು ಕಾರ್ಯಾಚರಣೆ ನಡೆಸಿ, ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…