ಮಂಡ್ಯ: ಮದ್ದೂರು ತಾಲೂಕಿನ ಗೋಪನಹಳ್ಳಿ ಗ್ರಾಮದ ಶ್ರೀ ಚೌಡೇಶ್ವರಿ ದೇವಾಲಯದ ಉದ್ಘಾಟನೆ, ವಿಗ್ರಹ ಪುನಃ ಪ್ರತಿಷ್ಠಾಪನೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವನ್ನು ಫೆಬ್ರವರಿ ೦೧ ಮತ್ತು ೦೨ರಂದು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮದ ಕೆಂಪರಾಜು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.೦೧ರಂದು ದೇವಾಲಯದಲ್ಲಿ ವಿಗ್ರಹ ಪುನಃ ಪ್ರತಿಷ್ಠಾಪನೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ ಸೇರಿದಂತೆ ದೇವಾಲಯದಲ್ಲಿನ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಫೆಬ್ರವರಿ ೦೨ರಂದು ಮಧ್ಯಾಹ್ನ ೦೩ಕ್ಕೆ ದೇವಾಲಯದ ಉದ್ಘಾಟನೆಯಾಗಲಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ರ ಸಾನಿಧ್ಯದಲ್ಲಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಕಳಸ ಸ್ಥಾಪಿಸುವರು. ಆದಿಚುಂಚನಗರಿ ಶಾಖಾ ಮಠ ವಿಶ್ವ ಮಾನವ ಕ್ಷೇತ್ರ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ಮೂಲ ದೇವರ ಪ್ರತಿಷ್ಠಾಪನೆ ಮಾಡಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಕೇಂದ್ರ ಉಕ್ಕು ಮತತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚವಿ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದು, ಶಾಸಕ ಕೆ.ಎಂ.ಉದಯ್ ಅಧ್ಯಕ್ಷತೆ ವಹಿಸುವರು.
ಮಾಜಿ ಸಚಿವ ಡಿ.ಸಿ.ತಮ್ಮಣ್ಣ ವಿಗ್ರಹ ಶಿಲ್ಪಿ, ದೇವಸ್ಥಾನ ನಿರ್ಮಾಣ ಶಿಲ್ಪಿ, ರಾಜಗೋಪುರ ನಿರ್ಮಾಣ, ಯಾತ್ರಿಕರ ತಂಗುದಾಣ ನಿರ್ಮಾಣ, ಕಲ್ಯಾಣಿ ನಿರ್ಮಾಣ ಸೇವಾರ್ಥಿಗಳನ್ನು ಸನ್ಮಾನಿಸುವರು. ಮುಕ್ಯ ಅತಿಥಿಗಳಾಗಿ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ವಿವೇಕಾನಂದ.ಕೆ, ರವಿಕುಮಾರ್ಗೌಡ, ಮನ್ಮುಲ್ ಮಾಜಿ ನಿರ್ದೇಶಕ ಎಸ್.ಪಿ.ಸ್ವಾಮಿ ಇತರರು ಭಾಗವಿಸಲಿದ್ದಾರೆ ಎಂದು ವಿವರಿಸಿದರು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…