ಮಂಡ್ಯ: ಮದ್ದೂರು ತಾಲೂಕಿನ ಗೋಪನಹಳ್ಳಿ ಗ್ರಾಮದ ಶ್ರೀ ಚೌಡೇಶ್ವರಿ ದೇವಾಲಯದ ಉದ್ಘಾಟನೆ, ವಿಗ್ರಹ ಪುನಃ ಪ್ರತಿಷ್ಠಾಪನೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವನ್ನು ಫೆಬ್ರವರಿ ೦೧ ಮತ್ತು ೦೨ರಂದು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮದ ಕೆಂಪರಾಜು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.೦೧ರಂದು ದೇವಾಲಯದಲ್ಲಿ ವಿಗ್ರಹ ಪುನಃ ಪ್ರತಿಷ್ಠಾಪನೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ ಸೇರಿದಂತೆ ದೇವಾಲಯದಲ್ಲಿನ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಫೆಬ್ರವರಿ ೦೨ರಂದು ಮಧ್ಯಾಹ್ನ ೦೩ಕ್ಕೆ ದೇವಾಲಯದ ಉದ್ಘಾಟನೆಯಾಗಲಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ರ ಸಾನಿಧ್ಯದಲ್ಲಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಕಳಸ ಸ್ಥಾಪಿಸುವರು. ಆದಿಚುಂಚನಗರಿ ಶಾಖಾ ಮಠ ವಿಶ್ವ ಮಾನವ ಕ್ಷೇತ್ರ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ಮೂಲ ದೇವರ ಪ್ರತಿಷ್ಠಾಪನೆ ಮಾಡಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಕೇಂದ್ರ ಉಕ್ಕು ಮತತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚವಿ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದು, ಶಾಸಕ ಕೆ.ಎಂ.ಉದಯ್ ಅಧ್ಯಕ್ಷತೆ ವಹಿಸುವರು.
ಮಾಜಿ ಸಚಿವ ಡಿ.ಸಿ.ತಮ್ಮಣ್ಣ ವಿಗ್ರಹ ಶಿಲ್ಪಿ, ದೇವಸ್ಥಾನ ನಿರ್ಮಾಣ ಶಿಲ್ಪಿ, ರಾಜಗೋಪುರ ನಿರ್ಮಾಣ, ಯಾತ್ರಿಕರ ತಂಗುದಾಣ ನಿರ್ಮಾಣ, ಕಲ್ಯಾಣಿ ನಿರ್ಮಾಣ ಸೇವಾರ್ಥಿಗಳನ್ನು ಸನ್ಮಾನಿಸುವರು. ಮುಕ್ಯ ಅತಿಥಿಗಳಾಗಿ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ವಿವೇಕಾನಂದ.ಕೆ, ರವಿಕುಮಾರ್ಗೌಡ, ಮನ್ಮುಲ್ ಮಾಜಿ ನಿರ್ದೇಶಕ ಎಸ್.ಪಿ.ಸ್ವಾಮಿ ಇತರರು ಭಾಗವಿಸಲಿದ್ದಾರೆ ಎಂದು ವಿವರಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…