ಮಂಡ್ಯ

ಮದ್ದೂರು | ಘಟನೆಗೆ ಕಾಂಗ್ರೆಸ್‌ ಕಾರಣ : ಎಚ್‌ಡಿಕೆ ಆರೋಪ

ಹೊಸದಿಲ್ಲಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ಆಡಳಿತ, ನಡವಳಿಕೆಯಿಂದಲೇ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮಂಡ್ಯ ಜಿಲ್ಲೆಯಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಇಂಥ ಕೆಟ್ಟ ಘಟನೆಗಳು ನಡೆಯಲು ಕಾಂಗ್ರೆಸ್ ಸರಕಾರವೇ ಕಾರಣ ಎಂದು ದೂರಿದರು.

ಶಾಂತಿ ನೆಮ್ಮದಿಗೆ ಹೆಸರಾಗಿದ್ದ ಮಂಡ್ಯ ಜಿಲ್ಲೆಗೆ ಬೆಂಕಿ ಹಚ್ಚುವ ಕೆಲಸವಾಗುತ್ತಿದೆ. ಹಿಂದೆಂದೂ ಈ ಜಿಲ್ಲೆಯಲ್ಲಿ ಇಂಥ ಘಟನೆಗಳು ಆಗಿಲ್ಲ. ನಾಗಮಂಗಲದಲ್ಲಿ ಕೆಲ ದುಷ್ಟಶಕ್ತಿಗಳು ಬೆಂಕಿ ಹಾಕುವ ಕೆಲಸ ಮಾಡಿದವು. ಈಗ ಮದ್ದೂರಿನಲ್ಲಿಯೂ ಅಂಥ ಶಕ್ತಿಗಳೇ ಜನರ ನೆಮ್ಮದಿ ಕೆಡಿಸುವ ಹುನ್ನಾರ ನಡೆಸಿವೆ ಎಂದು ಅವರು ಆಪಾದಿಸಿದರು.

ಮಂಡ್ಯ ಜಿಲ್ಲೆ ಯಾವಾಗಲೂ ಶಾಂತಿ ಸೌಹಾರ್ದತೆಗೆ ಹೆಸರಾಗಿದೆ. ಜನರು ಕಷ್ಟಪಟ್ಟು ಕೆಲಸ ಮಾಡುತ್ತಾ ನೆಮ್ಮದಿ ಜೀವನ ಮಾಡುತ್ತಿದ್ದಾರೆ. ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಆದರೆ ಕೆಲ ಶಕ್ತಿಗಳು ವ್ಯವಸ್ಥಿತವಾಗಿ ಜನರ ನೆಮ್ಮದಿ ಹಾಳು ಮಾಡುವ ಕೆಲಸ ಮಾಡುತ್ತಿವೆ. ಕಾಂಗ್ರೆಸ್‌ ಪಕ್ಷದ ಓಲೈಕೆ ರಾಜಕಾರಣದಿಂದ ಇಂಥ ಕೆಟ್ಟ ಪರಿಸ್ಥಿತಿ ರಾಜ್ಯದ ಉದ್ದಗಲಕ್ಕೂ ಸೃಷ್ಟಿಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಇದನ್ನು ಓದಿ : ಮದ್ದೂರಿನಲ್ಲಿ ಕಲ್ಲು ತೂರಾಟ ಪ್ರಕರಣ: ಯಾರೇ ತಪ್ಪು ಮಾಡಿದರೂ ಕಾನೂನು ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಶಾಂತಿ ನೆಲೆಸುವುದಕ್ಕೆ ಎಲ್ಲರೂ ಸಹಕಾರ ನೀಡಬೇಕು. ನಾನು ಈಗಾಗಲೇ ಜಿಲ್ಲಾಧಿಕಾರಿ ಮತ್ತು ಪೋಲೀಸ್‌ ವರಿಷ್ಠಾಧಿಕಾರಿಗಳ ಜತೆ ಮಾತನಾಡಿ ಕಿಡಿಗೇಡಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವರು ಹೇಳಿದರು.

ಸರ್ವ ಜನಾಂಗದ ಶಾಂತಿಯ ತೋಟವಾದ ರಾಜ್ಯಕ್ಕೆ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಕಾಂಗ್ರೆಸ್ ನಡವಳಿಕೆ, ಅವರ ಆಡಳಿತವೇ ಈ ಘಟನೆಗೆ ಕಾರಣ. ಹಿಂದೂಗಳು ಅಸಮಾಧಾನವಾಗುವ ರೀತಿಯಲ್ಲಿ ‌ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಇದನ್ನು ನಾನು ರಾಜಕೀಯ ಉದ್ದೇಶದಿಂದ ಹೇಳುತ್ತಿಲ್ಲ. ರಾಜ್ಯದ ಹಲವೆಡೆ ಗಲಾಟೆಗಳು ನಡೆಯಲು ಕಾಂಗ್ರೆಸ್ ಪಕ್ಷವೇ ಕಾರಣ. ಈ ಮೂಲಕ ಕಾಂಗ್ರೆಸ್ ಪಕ್ಷವು ತನ್ನ ಅವನತಿಯನ್ನು ತಾನೇ ತಂದುಕೊಳ್ಳುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಇಂಥ ಘಟನೆಗಳು ಒಂದೆರಡು ಜಿಲ್ಲೆಗಳಲ್ಲಿ ಅಲ್ಲೊಂದು ಇಲ್ಲೊಂದು ನಡೆಯುತ್ತಿದ್ದವು. ಕಾಂಗ್ರೆಸ್‌ ಸರಕಾರ ಬಂದ ಮೇಲೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತೀ ಭಾಗದಲ್ಲಿಯೂ ಅವ್ಯಾಹತವಾಗಿ ನಡೆಯುತ್ತಿವೆ. ಆ ಕೆಟ್ಟ ಪರಿಸ್ಥಿತಿ ಕಾಂಗ್ರೆಸ್ ಆಡಳಿತದಲ್ಲಿ ಇಡೀ ರಾಜ್ಯಕ್ಕೆ ವ್ಯಾಪಿಸಿದೆ. ಕೇವಲ ಓಲೈಕೆ ರಾಜಕಾರಣದಿಂದ ಇಷ್ಟೆಲ್ಲಾ ನಡೆಯುತ್ತಿದೆ ಎಂದು ಕೇಂದ್ರ ಸಚಿವರು ದೂರಿದರು.

ಇಂಥ ಗಲಭೆಗಳನ್ನು ನೋಡಿದರೆ ಕಾಂಗ್ರೆಸ್ ಪಕ್ಷದ ಅವನತಿ ಆರಂಭವಾಗಿದೆ ಎಂದು ಅರ್ಥವಾಗುತ್ತದೆ. ಇದೆಲ್ಲವನ್ನೂ ಕಾಂಗ್ರೆಸ್ ಅರ್ಥ ಮಾಡಿಕೊಳ್ಳದಿದ್ದರೆ ಇದು ಸೆಲ್ಪ್ ಸುಸೈಡ್ (ಆತ್ಮಹತ್ಯೆ) ಆಗಲಿದೆ. ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಆಗಬಾರದು. ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕಿಡಿಗೇಡಿಗಳ ಹೆಡೆಮುರಿ ಕಟ್ಟುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಆಂದೋಲನ ಡೆಸ್ಕ್

Recent Posts

ಮಧ್ಯಪ್ರಾಚ್ಯ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ಕೇಂದ್ರ ಸಚಿವ ಜೈಶಂಕರ್‌ಗೆ ಮನವಿ

ನವದೆಹಲಿ: ಇಸ್ರೇಲ್-ಇರಾನ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್‌ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…

46 mins ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ 17 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…

1 hour ago

ಡಿ.ಕೆ.ಶಿವಕುಮಾರ್‌ ಅತ್ಯಂತ ಯಶಸ್ವಿ ಅಧ್ಯಕ್ಷ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…

2 hours ago

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…

2 hours ago

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

2 hours ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

2 hours ago