ಮಂಡ್ಯ

ಮದ್ದೂರು ಘಟನೆಗೆ ಪೊಲೀಸ್‌ ಇಲಾಖೆ, ಗುಪ್ತಚರ ಇಲಾಖೆ ವೈಫಲ್ಯವೇ ಕಾರಣ: ವಿಜಯೇಂದ್ರ ಕಿಡಿ

ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ನಡೆಯಲು ಗೃಹ ಇಲಾಖೆಯ ವೈಫಲ್ಯ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ದೂರಿನಲ್ಲಿ ಮೊನ್ನೆ ದೊಡ್ಡ ಮೆರವಣಿಗೆ ನಡೆದರೂ ಎಸ್‌ಪಿ ಇರಲಿಲ್ಲ. ಮಹಿಳೆಯರ ರಕ್ಷಣೆಗಾಗಿ ಓರ್ವ ಕಾನ್ಸ್‌ಟೇಬಲ್‌ ಕೂಡ ಇರಲಿಲ್ಲ. ಕಲ್ಲು ಹಿಡಿದು ಮಸೀದಿ ಒಳಗೆ ಕೂರುತ್ತಾರೆ. ಮೆರವಣಿಗೆ ಬರುತ್ತಿದ್ದಂತೆ ಕಲ್ಲು ತೂರಾಟ ನಡೆಸುತ್ತಾರೆ ಎಂದರೆ ಇದೆಲ್ಲಾ ಪೊಲೀಸ್‌ ಇಲಾಖೆ ಹಾಗೂ ಗುಪ್ತಚರ ಇಲಾಖೆಯ ವೈಫಲ್ಯವಲ್ಲದೇ ಬೇರೆ ಏನೂ ಇಲ್ಲ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳು ನೆಮ್ಮದಿಯಾಗಿ ಹಬ್ಬ ಆಚರಣೆ ಮಾಡುವ ಸ್ಥಿತಿಯಿಲ್ಲ. ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡುವ ವಾತಾವರಣ ನಮ್ಮ ರಾಜ್ಯದಲ್ಲಿ ಇಲ್ಲ. ನಮ್ಮ ಹಬ್ಬವನ್ನು ಆಚರಿಸಲು ಆತಂಕದ ವಾತಾವರಣವಿದೆ ಎಂದರೆ ಈ ಸರ್ಕಾರ ಎಷ್ಟರ ಮಟ್ಟಿಗೆ ಓಲೈಕೆ ರಾಜಕಾರಣದಲ್ಲಿ ಮುಳುಗಿದೆ ಎಂಬುದನ್ನು ಜನರೇ ತೀರ್ಮಾನಿಸಬೇಕು ಎಂದು ಕಿಡಿಕಾರಿದರು.

ಇನ್ನು ಸಿಎಂ ಸಿದ್ದರಾಮಯ್ಯನವರು ಶಾಂತಿ ಕದಡುವುದೇ ಬಿಜೆಪಿ ಉದ್ದೇಶ ಎಂದು ಹೇಳಿಕೆ ನೀಡಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು ಇಂತಹ ಹೇಳಿಕೆ ನೀಡಿದರೆ ರಾಜ್ಯವನ್ನು ಭಗವಂತನೇ ಕಾಪಾಡಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

39 mins ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

49 mins ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

2 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

3 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

3 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

3 hours ago