ಮಂಡ್ಯ

ಮದ್ದೂರು ಘಟನೆ ಪೂರ್ವಯೋಜಿತ : ಮುಂದುವರೆದು ಎಸ್‌ಪಿ ಹೇಳಿದ್ದೇನು…?

ಮದ್ದೂರು : ನಗರದಲ್ಲಿ ಭಾನುವಾರ ಸಂಜೆ ಗಣೇಶ ಮೂರ್ತಿ ವಿಸರ್ಜನೆಯ ವೇಳೆ ನಡೆದ ಕಲ್ಲು ತೂರಾಟ ಘಟನೆ ಪೂರ್ವಯೋಜಿತ ಕೃತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಲಭೆ ನಡೆಸಲೆಂದೆ ಪಕ್ಕದ ಚನ್ನಪಟ್ಟಣದಿಂದ ಮೂವರು ಅನ್ಯಕೋಮಿನ ಕಿಡಿಗೇಡಿಗಳು ಬಂದಿದ್ದರು, ಅವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು.

ಘಟನೆಗೆ ಸಂಬಂಧಿಸಿದಂತೆ ೨೧ ಮಂದಿಯನ್ನು ಬಂಧಿಸಿದ್ದು, ಇದರಲ್ಲಿ ಚನ್ನಪಟ್ಟಣದಿಂದ ಬಂದಿದ್ದ ಮೂವರು ಇದ್ದಾರೆ. ಈದ್ ಮಿಲಾದ್ ಹಬ್ಬಕ್ಕೆ ಊಟಕ್ಕೆಂದು ಬಂದಿದ್ದರು ಎಂದು ಹೇಳಲಾಗುತ್ತಿದ್ದು, ಸ್ಥಳೀಯರು ಕೂಡ ಇದೇ ಆರೋಪ ಮಾಡಿದ್ದಾರೆ ಎಂದರು.

ಕಲ್ಲು ತೂರಾಟದ ವೇಳೆ ಬೀದಿ ದೀಪವನ್ನು ಆರಿಸಲಾಗಿದ್ದು, ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಯಾವುದೇ ಸಮುದಾಯದವರು ತಪ್ಪು ಮಾಡಿದ್ದರೂ ಅವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದರು.

ಎರಡು ದಿನಗಳು ನಿಷೇಧಾಜ್ಞೆ
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದಿಂದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮದ್ದೂರು ಪಟ್ಟಣದಲ್ಲಿ ಎರಡು ದಿನಗಳು ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.

ಪಟ್ಟಣದಾದ್ಯಂತ ಪೊಲೀಸರ ಹೈ ಅಲರ್ಟ್ ಮಾಡಿದ್ದು, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸರ ಪಥಸಂಚಲನ ನಡೆಸಲಾಯಿತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

8 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

8 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

8 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

8 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

8 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

9 hours ago