ಮದ್ದೂರು: ಬನ್ನಹಳ್ಳಿ ಏತ ನೀರಾವರಿ ಯೋಜನೆ ಮೂಲಕ 18 ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.
ಬನ್ನಹಳ್ಳಿ ಏತ ನೀರಾವರಿ ಪಕ್ಕದಲ್ಲಿ ಶಿಂಷಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಲ್ಕು ತಿಂಗಳ ಕಾಲ ಕಾಮಗಾರಿ ಸ್ಥಗಿತವಾಗಿತ್ತು. ಈಗಾಗಲೇ ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಿ ಇನ್ನು ಎರಡೂವರೆ ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಸುಮಾರು ಎರಡೂವರೆ ಸಾವಿರ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಒದಗಿಸಲಾಗುವುದು ಎಂದರು.
ಈ ಯೋಜನೆಯಿಂದ ಅಕ್ಕಪಕ್ಕದ ಗ್ರಾಮಗಳಲ್ಲಿರುವ ಬೋರ್ವೆಲ್ಗಳಿಗೆ ಅಂತರ್ಜಲ ಮಟ್ಟ ವೃದ್ಧಿಯಾಗಿ ವ್ಯವಸಾಯಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ನಾಳೆಯಿಂದ ನಾಲೆಗಳಿಗೆ ನೀರು:
ಕೆಆರ್ಎಸ್ ಅಣೆಕಟ್ಟೆಯಿಂದ ನಾಳೆಯಿಂದ ( ಜುಲೈ 10 ) ನಾಲೆಗಳ ಮೂಲಕ ನೀರು ಬಿಡುತ್ತಿದ್ದು, ಬಹುತೇಕ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲು ಸೂಚನೆ ನೀಡಲಾಗಿದೆ. ಇದು ಜನ-ಜಾನುವಾರಗಳ ಕುಡಿಯುವ ನೀರಿಗೆ ಮಾತ್ರ. ನಂತರದಲ್ಲಿ ಹೆಚ್ಚು ಮಳೆಯಾಗಿ ಕೆಆರ್ಎಸ್ ಅಣೆಕಟ್ಟು ತುಂಬಿದರೆ ರೈತರ ವ್ಯವಸಾಯಕ್ಕೆ ನೀರು ಕೊಡಲಾಗುವುದು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಎಲ್.ಜಯರಾಮ, ಟಿಪ್ಪರ್ ಕೃಷ್ಣ, ಸುಂದ್ರಮ್ಮ, ಶಿವಣ್ಣ, ಮುಖಂಡರಾದ ಶಿವಲಿಂಗೇಗೌಡ, ದೇವರಾಜು, ಪಾಪಣ್ಣ, ತಿಮ್ಮೇಗೌಡ, ದಿಗಂತ್, ಶಿವರಾಮ, ಶಶಿ, ಹರೀಶ, ವಿಜಯ್, ಮಹೇಶ, ಕಾವೇರಿ ನೀರಾವರಿ ನಿಗಮದ ಅಽಕಾರಿಗಳಾದ ನಂಜುಂಡೇಗೌಡ, ನಾಗರಾಜು ಹಾಜರಿದ್ದರು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…