ಮದ್ದೂರು: ಬನ್ನಹಳ್ಳಿ ಏತ ನೀರಾವರಿ ಯೋಜನೆ ಮೂಲಕ 18 ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.
ಬನ್ನಹಳ್ಳಿ ಏತ ನೀರಾವರಿ ಪಕ್ಕದಲ್ಲಿ ಶಿಂಷಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಲ್ಕು ತಿಂಗಳ ಕಾಲ ಕಾಮಗಾರಿ ಸ್ಥಗಿತವಾಗಿತ್ತು. ಈಗಾಗಲೇ ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಿ ಇನ್ನು ಎರಡೂವರೆ ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಸುಮಾರು ಎರಡೂವರೆ ಸಾವಿರ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಒದಗಿಸಲಾಗುವುದು ಎಂದರು.
ಈ ಯೋಜನೆಯಿಂದ ಅಕ್ಕಪಕ್ಕದ ಗ್ರಾಮಗಳಲ್ಲಿರುವ ಬೋರ್ವೆಲ್ಗಳಿಗೆ ಅಂತರ್ಜಲ ಮಟ್ಟ ವೃದ್ಧಿಯಾಗಿ ವ್ಯವಸಾಯಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ನಾಳೆಯಿಂದ ನಾಲೆಗಳಿಗೆ ನೀರು:
ಕೆಆರ್ಎಸ್ ಅಣೆಕಟ್ಟೆಯಿಂದ ನಾಳೆಯಿಂದ ( ಜುಲೈ 10 ) ನಾಲೆಗಳ ಮೂಲಕ ನೀರು ಬಿಡುತ್ತಿದ್ದು, ಬಹುತೇಕ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲು ಸೂಚನೆ ನೀಡಲಾಗಿದೆ. ಇದು ಜನ-ಜಾನುವಾರಗಳ ಕುಡಿಯುವ ನೀರಿಗೆ ಮಾತ್ರ. ನಂತರದಲ್ಲಿ ಹೆಚ್ಚು ಮಳೆಯಾಗಿ ಕೆಆರ್ಎಸ್ ಅಣೆಕಟ್ಟು ತುಂಬಿದರೆ ರೈತರ ವ್ಯವಸಾಯಕ್ಕೆ ನೀರು ಕೊಡಲಾಗುವುದು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಎಲ್.ಜಯರಾಮ, ಟಿಪ್ಪರ್ ಕೃಷ್ಣ, ಸುಂದ್ರಮ್ಮ, ಶಿವಣ್ಣ, ಮುಖಂಡರಾದ ಶಿವಲಿಂಗೇಗೌಡ, ದೇವರಾಜು, ಪಾಪಣ್ಣ, ತಿಮ್ಮೇಗೌಡ, ದಿಗಂತ್, ಶಿವರಾಮ, ಶಶಿ, ಹರೀಶ, ವಿಜಯ್, ಮಹೇಶ, ಕಾವೇರಿ ನೀರಾವರಿ ನಿಗಮದ ಅಽಕಾರಿಗಳಾದ ನಂಜುಂಡೇಗೌಡ, ನಾಗರಾಜು ಹಾಜರಿದ್ದರು.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…