ಮಂಡ್ಯ

ಶಿಂಷಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಚಾಲನೆ

ಮದ್ದೂರು: ಬನ್ನಹಳ್ಳಿ ಏತ ನೀರಾವರಿ ಯೋಜನೆ ಮೂಲಕ 18 ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

ಬನ್ನಹಳ್ಳಿ ಏತ ನೀರಾವರಿ ಪಕ್ಕದಲ್ಲಿ ಶಿಂಷಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಲ್ಕು ತಿಂಗಳ ಕಾಲ ಕಾಮಗಾರಿ ಸ್ಥಗಿತವಾಗಿತ್ತು. ಈಗಾಗಲೇ ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಿ ಇನ್ನು ಎರಡೂವರೆ ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಸುಮಾರು ಎರಡೂವರೆ ಸಾವಿರ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಒದಗಿಸಲಾಗುವುದು ಎಂದರು.

ಈ ಯೋಜನೆಯಿಂದ ಅಕ್ಕಪಕ್ಕದ ಗ್ರಾಮಗಳಲ್ಲಿರುವ ಬೋರ್‌ವೆಲ್‌ಗಳಿಗೆ ಅಂತರ್ಜಲ ಮಟ್ಟ ವೃದ್ಧಿಯಾಗಿ ವ್ಯವಸಾಯಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ನಾಳೆಯಿಂದ ನಾಲೆಗಳಿಗೆ ನೀರು:

ಕೆಆರ್‌ಎಸ್ ಅಣೆಕಟ್ಟೆಯಿಂದ ನಾಳೆಯಿಂದ ( ಜುಲೈ 10 ) ನಾಲೆಗಳ ಮೂಲಕ ನೀರು ಬಿಡುತ್ತಿದ್ದು, ಬಹುತೇಕ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲು ಸೂಚನೆ ನೀಡಲಾಗಿದೆ. ಇದು ಜನ-ಜಾನುವಾರಗಳ ಕುಡಿಯುವ ನೀರಿಗೆ ಮಾತ್ರ. ನಂತರದಲ್ಲಿ ಹೆಚ್ಚು ಮಳೆಯಾಗಿ ಕೆಆರ್‌ಎಸ್ ಅಣೆಕಟ್ಟು ತುಂಬಿದರೆ ರೈತರ ವ್ಯವಸಾಯಕ್ಕೆ ನೀರು ಕೊಡಲಾಗುವುದು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಎಲ್.ಜಯರಾಮ, ಟಿಪ್ಪರ್ ಕೃಷ್ಣ, ಸುಂದ್ರಮ್ಮ, ಶಿವಣ್ಣ, ಮುಖಂಡರಾದ ಶಿವಲಿಂಗೇಗೌಡ, ದೇವರಾಜು, ಪಾಪಣ್ಣ, ತಿಮ್ಮೇಗೌಡ, ದಿಗಂತ್, ಶಿವರಾಮ, ಶಶಿ, ಹರೀಶ, ವಿಜಯ್, ಮಹೇಶ, ಕಾವೇರಿ ನೀರಾವರಿ ನಿಗಮದ ಅಽಕಾರಿಗಳಾದ ನಂಜುಂಡೇಗೌಡ, ನಾಗರಾಜು ಹಾಜರಿದ್ದರು.

 

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

18 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

18 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

18 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

18 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

18 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

18 hours ago