ಮಂಡ್ಯ

ಶಿಂಷಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಚಾಲನೆ

ಮದ್ದೂರು: ಬನ್ನಹಳ್ಳಿ ಏತ ನೀರಾವರಿ ಯೋಜನೆ ಮೂಲಕ 18 ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

ಬನ್ನಹಳ್ಳಿ ಏತ ನೀರಾವರಿ ಪಕ್ಕದಲ್ಲಿ ಶಿಂಷಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಲ್ಕು ತಿಂಗಳ ಕಾಲ ಕಾಮಗಾರಿ ಸ್ಥಗಿತವಾಗಿತ್ತು. ಈಗಾಗಲೇ ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಿ ಇನ್ನು ಎರಡೂವರೆ ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಸುಮಾರು ಎರಡೂವರೆ ಸಾವಿರ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಒದಗಿಸಲಾಗುವುದು ಎಂದರು.

ಈ ಯೋಜನೆಯಿಂದ ಅಕ್ಕಪಕ್ಕದ ಗ್ರಾಮಗಳಲ್ಲಿರುವ ಬೋರ್‌ವೆಲ್‌ಗಳಿಗೆ ಅಂತರ್ಜಲ ಮಟ್ಟ ವೃದ್ಧಿಯಾಗಿ ವ್ಯವಸಾಯಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ನಾಳೆಯಿಂದ ನಾಲೆಗಳಿಗೆ ನೀರು:

ಕೆಆರ್‌ಎಸ್ ಅಣೆಕಟ್ಟೆಯಿಂದ ನಾಳೆಯಿಂದ ( ಜುಲೈ 10 ) ನಾಲೆಗಳ ಮೂಲಕ ನೀರು ಬಿಡುತ್ತಿದ್ದು, ಬಹುತೇಕ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲು ಸೂಚನೆ ನೀಡಲಾಗಿದೆ. ಇದು ಜನ-ಜಾನುವಾರಗಳ ಕುಡಿಯುವ ನೀರಿಗೆ ಮಾತ್ರ. ನಂತರದಲ್ಲಿ ಹೆಚ್ಚು ಮಳೆಯಾಗಿ ಕೆಆರ್‌ಎಸ್ ಅಣೆಕಟ್ಟು ತುಂಬಿದರೆ ರೈತರ ವ್ಯವಸಾಯಕ್ಕೆ ನೀರು ಕೊಡಲಾಗುವುದು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಎಲ್.ಜಯರಾಮ, ಟಿಪ್ಪರ್ ಕೃಷ್ಣ, ಸುಂದ್ರಮ್ಮ, ಶಿವಣ್ಣ, ಮುಖಂಡರಾದ ಶಿವಲಿಂಗೇಗೌಡ, ದೇವರಾಜು, ಪಾಪಣ್ಣ, ತಿಮ್ಮೇಗೌಡ, ದಿಗಂತ್, ಶಿವರಾಮ, ಶಶಿ, ಹರೀಶ, ವಿಜಯ್, ಮಹೇಶ, ಕಾವೇರಿ ನೀರಾವರಿ ನಿಗಮದ ಅಽಕಾರಿಗಳಾದ ನಂಜುಂಡೇಗೌಡ, ನಾಗರಾಜು ಹಾಜರಿದ್ದರು.

 

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago