ಮಂಡ್ಯ: ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಬೆನಲ್ಲೇ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಮದ್ದೂರು ಸಹಜ ಸ್ಥಿತಿಯತ್ತ ಮರಳಿದೆ.
ಮದ್ದೂರಿನಲ್ಲಿ ವರ್ತಕರು ಅಂಗಡಿ-ಮುಂಗಟ್ಟುಗಳನ್ನು ತೆರೆಯುತ್ತಿದ್ದು, ಮೂರು ದಿನದ ಬಳಿಕ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಆದರೆ ಮದ್ದೂರಿನಲ್ಲಿ ಪೊಲೀಸ್ ಭದ್ರತೆ ಮುಂದುವರಿದಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಭಾನುವಾರ ರಾತ್ರಿ ಮದ್ದೂರಿನ ರಾಮ್ ರಹೀಮ್ ನಗರ ಮಸೀದಿ ಮುಂಭಾಗದ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಬಳಿಕ ಸೋಮವಾರ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿ ಘಟನೆಯನ್ನು ಖಂಡಿಸಿದ್ದವು. ನಿನ್ನೆ ಬಿಜೆಪಿ ನಾಯಕರು ಸೇರಿದಂತೆ ಮದ್ದೂರಿನ ಜನತೆ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಾರ ವಹಿವಾಟು ಬಂದ್ ಆಗಿತ್ತು. ಈಗ ಜನಜೀವನ ಸಹಜ ಸ್ಥಿತಿಗೆ ಮರಳಿದ್ದು, ವ್ಯಾಪಾರ ವಹಿವಾಟು ಆರಂಭವಾಗಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…