ಮದ್ದೂರು : ಕಳೆದ ಭಾನುವಾರ ಸಂಜೆ ಗಣೇಶ ವಿಸರ್ಜನೆಯ ವೇಳೆ ನಡೆದ ಗಲಭೆ ಬಳಿಕ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಲಾಠಿ ಏಟು ತಿಂದಿದ್ದ ಮಹಿಳೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಿಎಂ ಮತ್ತು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಶಿವಪುರ ನಿವಾಸಿ ಜ್ಯೋತಿ ಅವರ ವಿರುದ್ಧ ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಠಾಣಾ ಇನ್ಸ್ಪೆಕ್ಟರ್ ಶಿವಕುಮಾರ್ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಅನ್ಯಧರ್ಮದ ವಿಚಾರವಾಗಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಪರಸ್ಪರ ಕೋಮುಗಳ ನಡುವೆ ವೈಮನಸ್ಸು, ವೈರತ್ವಕ್ಕೆ ಉತ್ತೇಜನ ನೀಡುವ ಆರೋಪದಲ್ಲಿ ಎಫ್ಐಆರ್ ಮಾಡಲಾಗಿದೆ.
ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲುತೂರಾಟದ ಘಟನೆ ಉದ್ವಿಗ್ನತೆಗೆ ಕಾರಣವಾಗಿತ್ತು. ಮಾರನೇ ದಿನ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದರು. ಆಗ ಮಹಿಳೆ ಜ್ಯೋತಿ ಕೂಡ ಲಾಠಿ ಏಟು ತಿಂದಿದ್ದರು. ಈ ದೃಶ್ಯದ ವೀಡಿಯೋ ಎಲ್ಲೆಡೆ ವೈರಲ್ ಆಗಿತ್ತು.
ಮೈಸೂರಲ್ಲೂ ಜ್ಯೋತಿ ವಿರುದ್ಧ ದೂರು ದಾಖಲು
ಮೈಸೂರು: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲುತೂರಾಟದ ಬಳಿಕ ಬಿಜೆಪಿ ಮತ್ತು ಸಂಘ ಪರಿವಾರದವರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಜ್ಯೋತಿ ಎಂಬವರ ವಿರುದ್ಧ ಮೈಸೂರಿನಲ್ಲಿ ದೂರು ನೀಡಲಾಗಿದೆ.
ಮೈಸೂರು ನಗರ ೧೨ನೇ ವಾರ್ಡ್ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಜುನೇದ್ ಎಂಬವರು ಗುರುವಾರ ಬೆಳಿಗ್ಗೆ ಎರಡು ಪ್ರತ್ಯೇಕ ದೂರುಗಳನ್ನು ನೀಡಿದ್ದು, ಮೊದಲ ದೂರಿನಲ್ಲಿ ಮದ್ದೂರಿನಲ್ಲಿ ಸೆ.೮ ರಂದು ಗಣಪತಿ ವಿಸರ್ಜನಾ ಸ್ಥಳದಲ್ಲಿ ಕಲ್ಲು ತೂರಾಟ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ನಂತರ ನಡೆದ ಬಿಜೆಪಿ ಮತ್ತು ಸಂಘ ಪರಿವಾರದ ಪ್ರತಿಭಟನಾ ಮೆರವಣಿಗೆಯಲ್ಲಿ ಜ್ಯೋತಿ ಎಂಬಾಕೆಯು ಮುಸ್ಲಿಮರ ವಿರುದ್ಧ ಅತ್ಯಂತ ತುಚ್ಛಪದಗಳಿಂದ ನಿಂದನೆ ಮಾಡಿ ಸಮುದಾಯಕ್ಕೆ ಅಪಮಾನ ಮಾಡಿದ್ದು, ಭಯದ ವಾತಾವರಣ ಉಂಟು ಮಾಡಿದ್ದಾರೆ. ಇವರ ವಿರುದ್ಧವೂ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಅವರು ದೂರಿನಲ್ಲಿ ಕೋರಿದ್ದಾರೆ.
ಪ್ರತಿಭಟನಾ ಮೆರವಣಿಗೆಯಲ್ಲಿ ಮುಸ್ಲಿಮರ ವಿರುದ್ಧ ಸಾರ್ವಜನಿವಾಗಿ ಅವಾಚ್ಯ ಶಬ್ದಗಳ ಬಳಕೆಯಿಂದ ಮುಸ್ಲಿಂ ಸಮುದಾಯದವರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಇದರಿಂದ ಕಾನೂನು ಮತ್ತು ಸುವ್ಯವಸ್ಥೆಗೂ ಧಕ್ಕೆ ಉಂಟಾಗಿದೆ. ಜನರಲ್ಲಿ ಭಯ ಹಾಗೂ ಗೊಂದಲ ಸೃಷ್ಟಿಯಾಗಿದೆ. ಇಂತಹ ಕೃತ್ಯವು ಸಾರ್ವಜನಿಕ ಶಾಂತಿಗೆ ಭಂಗ ತಂದಿದ್ದು, ಮೇಲ್ಕಂಡ ಕಲ್ಲು ತೂರಾಟ ನಡೆಸಿದವರ ಮತ್ತು ಮುಸ್ಲಿಮರಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಮಹಿಳೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಜುನೇದ್ ಒತ್ತಾಯಿಸಿದ್ದಾರೆ.
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…
ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…