ಮಂಡ್ಯ

ಮದ್ದೂರು | ಕಲ್ಲು, ಮಚ್ಚು, ಲಾಂಗ್ ಸಂಸ್ಕೃತಿ ನಿಲ್ಲಬೇಕು : ನಿಖಿಲ್ ಕುಮಾರಸ್ವಾಮಿ

ಮದ್ದೂರು : ಎರಡು ವರ್ಷಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಮೂರು ಬಾರಿ ಇಂತಹ ಘಟನೆ ನಡೆದಿದೆ. ಕೆರಗೋಡು, ನಾಗಮಂಗಲ ಬಳಿಕ ಮದ್ದೂರಿನಲ್ಲಿ ನಡೆದಿದೆ. ಮದ್ದೂರಿನಲ್ಲಿ ಭಾನುವಾರದಿಂದ ಅಶಾಂತಿ ವಾತಾವರಣ ನಿರ್ಮಾಣ ಆಗಿದೆ ಎಂದು ಜಾ.ದಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ಹಿಂದೂ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಿದ ನಂತರ ಮಾತನಾಡಿದ ಅವರು, ಕಿಡಿಗೇಡಿಗಳು ವ್ಯವಸ್ಥಿತವಾಗಿ ಷಡ್ಯಂತ್ರ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಇಂತಹ ಘಟನೆಗಳು ನಡೆಯುತ್ತಲೇ ಇವೆ ಎಂದು ದೂರಿದರು.

ಘಟನೆ ನಿಯಂತ್ರಿಸಲು ಪೊಲೀಸರೇ ಅಸಹಾಯಕರಾಗಿದ್ದಾರೆ. ರಾಜ್ಯ ಸರ್ಕಾರ, ಗೃಹ ಸಚಿವರು ಅಸಮರ್ಥರಾಗಿದ್ದಾರೆ. ಕೋಮುಗಲಭೆ ಮಾಡಿದವರ ಬಂಧನ ಆಗಬೇಕು. ಪ್ರಕರಣದಲ್ಲಿ ಭಾಗಿಯಾದವರನ್ನು ಕೈ ಬಿಟ್ಟರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಒತ್ತಡಕ್ಕೆ ಮಣಿದರೆ ನಾವು ಕೈಕಟ್ಟಿ ಕೂರಲ್ಲ. ಮಚ್ಚು, ಲಾಂಗ್ ಸಂಸ್ಕೃತಿ ಹೊಂದಿರುವ ಕಿಡಿಗೇಡಿಗಳನ್ನು ಹೆಡೆಮುರಿ ಕಟ್ಟಬೇಕು ಎಂದು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದರು.

ಮಂಡ್ಯ ಶಾಂತಿಗೆ ಹೆಸರುವಾಸಿ ಆದ ಜಿಲ್ಲೆ. ಆ ಗೌರವ ಉಳಿಸಿಕೊಳ್ಳಬೇಕಾಗಿದು ನಮ್ಮ ಜವಾಬ್ದಾರಿ. ಈಗಾಗಲೇ ಹಿಂದೂಪರ ಸಂಘಟನೆಗಳು ಮಂಗಳವಾರ ಮದ್ದೂರು ಬಂದ್‌ಗೆ ಕರೆ ಕೊಟ್ಟಿವೆ ಎಂದು ಹೇಳಿದರು.

ಬೇಲ್ ಆಗದಂತೆ ಕಾಯ್ದೆ
ಘಟನೆ ನಡೆದ ತಕ್ಷಣ ಪ್ರಮುಖ ಆರೋಪಿಗಳನ್ನ ಬಂಧಿಸಿದ್ದೇವೆ. ಸಿಸಿಟಿವಿ ದೃಶ್ಯ, ಮೊಬೈಲ್ ವಿಡಿಯೋ ಆಧರಿಸಿ ಬಂಧಿಸಿದ್ದು, ಇನ್ನೂ ಹಲವು ಆರೋಪಿಗಳನ್ನ ಬಂಧಿಸುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

ಈ ಘಟನೆಯಲ್ಲಿ ಭಾಗಿಯಾಗಿರುವವರಿಗೆ ಬೇಲ್ ಆಗದಂತೆ ಸೆಕ್ಷನ್‌ಗಳನ್ನ ಹಾಕಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತೇವೆ. ಕುಮ್ಮಕ್ಕು ಕೊಟ್ಟವರ ವಿರುದ್ಧ ನಾವು ಕ್ರಮಕೈಗೊಳ್ಳುತ್ತೇವೆ. ನಮಗೆ ಸಹಕಾರ ಕೊಟ್ಟು ಶಾಂತಿ ರೀತಿ ವರ್ತಿಸಿ ಎಂದು ಕೋರಿದರು.

ಆಂದೋಲನ ಡೆಸ್ಕ್

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

43 mins ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

3 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

6 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

6 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

6 hours ago