ಮಂಡ್ಯ

ಮದ್ದೂರು ತಾಲೂಕಿಗೆ ಹೆಚ್ಚುವರಿ 350 ಕೋಟಿ ಬಿಡುಗಡೆ : ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಶಾಸಕ ಕೆ.ಎಂ.ಉದಯ್

ಮದ್ದೂರು : ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಬೇಕೆಂಬ ನಿಟ್ಟಿನಲ್ಲಿ ತಾಲ್ಲೂಕಿಗೆ ಹೆಚ್ಚುವರಿ 350 ಕೋಟಿ ರೂ.ಅನುದಾನ ಸರ್ಕಾರದಿಂದ ಬಿಡುಗಡೆಯಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ತಾಲ್ಲೂಕಿನ ಪಣ್ಣೆದೊಡ್ಡಿ ಗ್ರಾಮದಲ್ಲಿ ೩ ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಈ ಹಿಂದೆ ಅಧಿಕಾರ ನಡೆಸಿದವರು ಕ್ಷೇತ್ರದಾದ್ಯಂತ ಶಾಶ್ವತ ಯೋಜನೆಗಳನ್ನು ಜಾರಿಗೊಳಿಸದ ಹಿನ್ನೆಲೆಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿವೆ. ನಾನು ಅಧಿಕಾರಕ್ಕೆ ಬಂದ ಮೇಲೆ ಅಂತಹವುಗಳ ಪಟ್ಟಿಯನ್ನು ತಯಾರಿಸಿ ಅಭಿವೃದ್ಧಿಗೆ ವೇಗ ಕಲ್ಪಿಸಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ವಿವಿಧ ಇಲಾಖೆಗಳ ಸಚಿವರುಗಳು ೧,೩೫೦ ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ ಎಂದು ವಿವರಿಸಿದರು.

ಬೆಸಗರಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಪಣ್ಣೆದೊಡ್ಡಿ ಗ್ರಾಮದ ರಸ್ತೆ, ಚರಂಡಿ ಇನ್ನಿತರ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಸ್ಥಳೀಯ ನಿವಾಸಿಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ಪ್ರಥಮ ಬಾರಿಗೆ ಗ್ರಾಮವೊಂದಕ್ಕೆ ೩ ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ದೊರೆತಿದೆ. ನಾಲೆಗಳ ಆಧುನೀಕರಣ, ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಇನ್ನಿತರ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರೈಸಿ ಸ್ಥಳೀಯರಿಗೆ ಅನುಕೂಲ ಕಲ್ಪಿಸಿ ಮಾದರಿ ಗ್ರಾಮವನ್ನಾಗಿಸಲು ಶ್ರಮಿಸಲಾಗುವುದು ಎಂದರು.

ಗ್ರಾ.ಪಂ. ಉಪಾಧ್ಯಕ್ಷೆ ಶಬೀನಾತಾಜ್, ಸದಸ್ಯರಾದ ಮುರಳಿ, ಶೋಭ, ಮೂರ್ತಿ, ಮಂಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಲುವರಾಜು, ಅಣ್ಣೂರ್ ರಾಜೀವ್, ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮುಖಂಡರಾದ ಬೆಸಗರಹಳ್ಳಿ ಗೋಪಿ, ಜಾವಿದ್, ಚಿಕ್ಕತಿಮ್ಮೇಗೌಡ, ರಾಧಾಕೃಷ್ಣ, ಪ್ರಕಾಶ್, ಗೋವಿಂದು, ಪಣ್ಣೆದೊಡ್ಡಿ ಸುಧಾಕರ್, ಧನಂಜಯ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

4 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

8 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

8 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

8 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

8 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

8 hours ago