ಮಂಡ್ಯ

ಮದ್ದೂರು | ಆತಂಕ ಮೂಡಿಸಿದ ಚಿರತೆ ಸೆರೆ

ಮದ್ದೂರು : ತಾಲ್ಲೂಕಿನ ದೇಶಹಳ್ಳಿ ಗ್ರಾಮದ ಕೊಳ್ಳಿಕೊಡುಗೆ ಆದಿಶಕ್ತಿ ಅಮ್ಮನವರ ದೇವಾಲಯದ ಜಮೀನೊಂದರ ಬಳಿ ಚಿರತೆಯೊಂದನ್ನು ಸೆರೆ ಹಿಡಿಯಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ದೂರದ ಅರಣ್ಯ ಪ್ರದೇಶಕ್ಕೆ ಬಿಡಲು ಕ್ರಮ ವಹಿಸಿದ್ದಾರೆ.

ತಾಲ್ಲೂಕಿನ ದೇಶಹಳ್ಳಿ ಗ್ರಾಮದ ವೆಂಕಟೇಶ್ ಎಂಬವರ ಬಾಳೆ ತೋಟದಲ್ಲಿ ಸುಮಾರು ಎರಡು ವರ್ಷದ ಹೆಣ್ಣು ಚಿರತೆಯೊಂದು ಬೋನಿಗೆ ಬಿದ್ದಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಅಗತ್ಯ ಕ್ರಮ ವಹಿಸುವುದರ ಜತೆಗೆ ಮೇಲಾಧಿಕಾರಿಗಳ ಜತೆ ಚರ್ಚಿಸಿ ದೂರದ ಅರಣ್ಯ ಪ್ರದೇಶಕ್ಕೆ ಬಿಡಲು ಮುಂದಾಗಿದ್ದಾರೆ.

ಏಳು ತಿಂಗಳಿಂದಲೂ ದೇಶಹಳ್ಳಿ ಗ್ರಾಮದ ಸುತ್ತಮುತ್ತ ಚಿರತೆಗಳು ಪ್ರತ್ಯಕ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಇಲಾಖೆ ಅಧಿಕಾರಿಗಳು ಬೋನು ಇಟ್ಟಿದ್ದ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ಬೋನಿಗೆ ಚಿರತೆ ಸೆರೆಯಾಗಿದೆ.

ಇದನ್ನು ಓದಿ: ಇಬ್ಬರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ

ಸುಮಾರು ೧೫ ದಿನಗಳ ಹಿಂದೆ ದೇವಸ್ಥಾನದ ಆವರಣದಲ್ಲಿದ್ದ ನಾಯಿಯನ್ನು ತಿಂದು ಹಾಕಿದ್ದು, ಈ ಭಾಗದಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಚಿರತೆಗಳು ಇರುವ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

ಈ ಸಂಬಂಧವಾಗಿ ೨೦ ದಿನಗಳಿಂದಲೂ ಬಾಳೆ ತೋಟದ ಜಮೀನೊಂದರಲ್ಲಿ ಬೋನು ಇಟ್ಟಿದ್ದ ಹಿನ್ನೆಲೆಯಲ್ಲಿ ಎಂದಿನಂತೆ ನಾಯಿಯನ್ನು ಭೇಟೆಯಾಡಲು ಆಗಮಿಸಿದ್ದ ವೇಳೆ ಚಿರತೆ ಸೆರೆಯಾಗಿದ್ದು, ಘಟನಾ ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಗವಿಯಪ್ಪ, ಉಪ ವಲಯ ಅರಣ್ಯಾಧಿಕಾರಿ ಸವಿತ, ಗಸ್ತು ಅರಣ್ಯ ಪಾಲಕ ಚಿನ್ನಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿರತೆ ಸೆರೆಸಿಕ್ಕ ವಿಷಯ ಹರಡಿ ತಂಡೋಪ ತಂಡವಾಗಿ ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ಮೊಬೈಲ್‌ಗಳಲ್ಲಿ ಚಿತ್ರೀಕರಿಸಲು ಮುಗಿ ಬಿದ್ದರು.

ಬಳಿಕ ಪತ್ರಿಕೆಯೊಂದಿಗೆ ಮಾತನಾಡಿದ ವಲಯ ಅರಣ್ಯಾಧಿಕಾರಿ ಗವಿಯಪ್ಪ, ಚಿರತೆ ಸೆರೆಸಿಕ್ಕ ವಿಷಯವನ್ನು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದು, ಸ್ಥಳೀಯ ಪಶು ವೈದ್ಯರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಧಿಕಾರಿಗಳ ಆದೇಶದನ್ವಯ ದೂರದ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

49 mins ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

3 hours ago

ನಾಳೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ

ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…

3 hours ago

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ-ಗಂಭೀರ ಗಾಯ

ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…

5 hours ago

ಕೆ.ಆರ್‌.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…

6 hours ago

ಓದುಗರ ಪತ್ರ: ಚುನಾವಣೋತ್ತರ.. !

ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…

6 hours ago